AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಗೂಳಿಹಟ್ಟಿ ಶೇಖರ್​ಗೆ ನಿರಾಕರಣೆ: ಮೌನಕ್ಕೆ ಶರಣಾದ ಬಿಜೆಪಿ ನಾಯಕರು

ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ನಾಗಪುರದ ಆರ್​ಎಸ್​ಎಸ್​ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನಿರಾಕರಿಸಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಬಿಜೆಪಿ ಹಾಗೂ ಆರ್​ಎಸ್​ಎಸ್​ ಅನ್ನು ವ್ಯಂಗ್ಯವಾಡಿದೆ. ಆದ್ರೆ, ಬಿಜೆಪಿ ನಾಯಕರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೇ ಇದರಿಂದ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ.

RSS ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಗೂಳಿಹಟ್ಟಿ ಶೇಖರ್​ಗೆ ನಿರಾಕರಣೆ: ಮೌನಕ್ಕೆ ಶರಣಾದ ಬಿಜೆಪಿ ನಾಯಕರು
ಗೂಳಿಹಟ್ಟಿ ಶೇಖರ್
ರಮೇಶ್ ಬಿ. ಜವಳಗೇರಾ
|

Updated on: Dec 06, 2023 | 3:00 PM

Share

ಬೆಂಗಳೂರು, (ಡಿಸೆಂಬರ್ 06): ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂದು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (goolihatti shekhar)ಅವರನ್ನು ನಾಗಪುರದ ಆರ್​ಎಸ್​ಎಸ್​ (RSS) ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವುದನ್ನು ಸ್ಪಷ್ಟಪಡಿಸುವಿರಾ ಎಂದು ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​ ಅವರಿಗೆ ಕೇಳಿದ್ದು, ಇದೀಗ ಆಡಿಯೋ ವೈರಲ್ ಆಗಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಕಾಂಗ್ರೆಸ್ ಬಿಜೆಪಿ ಹಾಗೂ ಆರ್​ಎಸ್​ಎಸ್​ ಮೇಲೆ ಮುಗಿಬಿದ್ದಿದೆ. ಆದ್ರೆ, ಬಿಜೆಪಿ ನಾಯಕರು ಯಾವುದೇ ಹೇಳಿಕೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.

ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಗೆ RSS ವಸ್ತು ಸಂಗ್ರಹಾಲಯದಲ್ಲಿ ಪ್ರವೇಶ ನಿರಾಕರಣೆ ವಿಚಾರದಿಂದ ಬಿಜೆಪಿ ನಾಯಕರು ಅಂತರ ಕಾಪಾಡಿಕೊಂಡಿಕೊಳ್ಳುತ್ತಿದ್ದಾರೆ. ಆರ್​ಎಸ್​ಎಸ್ ಎಲ್ಲಾ ಸಮುದಾಯವನ್ನು ಒಳಗೊಂಡ ಸಂಘಟನೆಯಾಗಿದೆ. ಇಲ್ಲಿ ಜಾತಿ ತಾರತಮ್ಯ ವ್ಯವಸ್ಥೆ ಇಲ್ಲ ಎಂದು ಉದ್ದುದ್ದ ಭಾಷಣ ಬಿಗಿಯುತ್ತಿದ್ದವರು ಇದೀಗ ಗೂಳಿಹಟ್ಟಿ ಶೇಖರ್ ವಿಚಾರದಲ್ಲಿ ತುಟಿಕ್ ಪಿಟಿಕ್ ಎನ್ನುತ್ತಿಲ್ಲ.ಈ ಬಗ್ಗೆ  ಯಾವೊಬ್ಬ ಬಿಜೆಪಿ ನಾಯಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮುಂದೆ ಬರುತ್ತಿಲ್ಲ.

ಇದೇ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ. ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದರ ಬಗ್ಗೆ ತಿಳಿದುಕೊಂಡು ಮಾತಾಡುತ್ತೇನೆ. ನಿಮ್ಮಷ್ಟು ಬುದ್ದಿವಂತ ನಾನಲ್ಲ ಎಂದು ಕೈಮುಗಿದು ಹೊರಟು ಹೋದರು. ಇನ್ನು ಈ ಪ್ರಶ್ನೆ ಕೇಳುತ್ತಿದ್ದಂತೆಯೇ ಇದಕ್ಕೂ ತಮಗೂ ಸಂಬಂಧವಿಲ್ಲವಂತೆ ವಿಪಕ್ಷ ನಾಯಕ ಆರ್ ಅಶೋಕ್​ ಮುಂದೆ ಹೋದರು.

ಬಿಜೆಪಿಯ ಗರ್ಭಗುಡಿಗೇ ದಲಿತರಿಗೆ ಪ್ರವೇಶವಿಲ್ಲ ಎಂದ ಕಾಂಗ್ರೆಸ್

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಗೂಳಿಹಟ್ಟಿ ಶೇಖರ್ ಬಿಜೆಪಿಯ ಮಾಜಿ ಸಚಿವ, ಮಾಜಿ ಶಾಸಕ. ಜನಪ್ರತಿನಿಧಿಯಾಗಿದ್ದ ಬಿಜೆಪಿ ಪಕ್ಷದವರೇ ನಾಗಪುರದ RSS ಕಚೇರಿಯಲ್ಲಿ ಅಸ್ಪೃಶ್ಯತೆ ಎದುರಿಸಿದೆ ಎಂದು ಹೇಳಿದ್ದಾರೆ. RSSನ ಮುದ್ದಿನ ಕೂಸು ಬಿಎಲ್​ ಸಂತೋಷ್ ಅವರ ಬಳಿ ತಮಗಾದ ನೋವು, ಅವಮಾನದ ಬಗ್ಗೆ ಅವಲತ್ತುಕೊಂಡರೂ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಈ ಮೌನದ ಅರ್ಥ ಅಸ್ಪೃಶ್ಯತೆ ಆಚರಣೆ ಬಿಜೆಪಿ, RSSನ ಜನ್ಮಸಿದ್ದ ಹಕ್ಕು ಎನ್ನುವುದೇ? ಎಂದು ಪ್ರಶ್ನಿಸಿದೆ.

RSS ಗರ್ಭಗುಡಿ ಇರಲಿ, ಬಿಜೆಪಿಯ ಗರ್ಭಗುಡಿಗೇ ದಲಿತರಿಗೆ ಪ್ರವೇಶವಿಲ್ಲ, ಬಿಜೆಪಿಯಲ್ಲಿರುವ ದಲಿತರು RSSನವರ ಚಡ್ಡಿ ಹೊರುವುದಕ್ಕೆ ಮಾತ್ರ ಸೀಮಿತವೆನ್ನುವ ಸತ್ಯ ಜಗಜ್ಜಾಹೀರಾಗಿದೆ. ದಲಿತ ಎಂಬ ಕಾರಣಕ್ಕಾಗಿಯೇ ಗೋವಿಂದ ಕಾರಜೋಳರಂತಹ ಹಿರಿಯ ನಾಯಕರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿಲ್ಲವೇ? ದಲಿತ ಎಂಬ ಕಾರಣಕ್ಕಾಗಿಯೇ ಶ್ರೀರಾಮುಲು ಅವರು ರಾಜ್ಯಾಧ್ಯಕ್ಷ ಸ್ಥಾನ ಬಯಸಿದರೂ ಸಿಗಲಿಲ್ಲವೇ? ಎಂದು ಕಾಂಗ್ರೆಸ್​ ಎಕ್ಸ್​ನಲ್ಲಿ ವ್ಯಂಗ್ಯವಾಡಿದೆ.

ಬಿಜೆಪಿಯಲ್ಲಿ ದಲಿತರಿಗೆ ಹಿಂದುಳಿದವರಿಗೆ ಗೌರವ ಇಲ್ವಾ?

ಇನ್ನು ಈ ಬಗ್ಗೆ ಸಚಿವ ಪ್ರಿಯಾಂಖ್ ಖರ್ಗೆ ಪ್ರತಿಕ್ರಿಯಿಸಿ, ಗೂಳಿಹಟ್ಟಿ ಶೇಖರ್ ಮಾಜಿ ಸಚಿವರು . ಬಹಳ ಸ್ಪಷ್ಟವಾದ ಪ್ರಶ್ನೆ ಬಿಎಲ್ ಸಂತೋಷ ಅವರಿಗೆ ಕೇಳಿದ್ದಾರೆ. ನಾನು ಬಿಜೆಪಿಯ ಕಾರ್ಯಕರ್ತ, ನಾನು ಹಿಂದೂ ಆರ್ ಎಸ್ ಎಸ್ ಪ್ರಮುಖರ ಮನೆಗೆ ಭೇಟಿ ನೀಡಲು ಹೋದಾಗ, ನಾನು ಎಸ್ಸಿ ಎಂದು ತಿಳಿದು ನನಗೆ ಒಳಗಡೆ ಬಿಡಲಿಲ್ಲ ಎಂದು ಹೇಳಿದ್ದು, ಇದಕ್ಕೆ ಉತ್ತರಿಸಿ ಎಂದು ಸಹ ಸಂತೋಷ್ ಅವರಿಗೆ ಕೇಳಿದ್ದಾರೆ. ಅಲ್ಲದೇ ಬಿಜೆಪಿಯಲ್ಲಿರುವ ಪ್ರಮುಖ ದಲಿತ ನಾಯಕರಿಗೂ ಪ್ರವೇಶ ಇಲ್ವಾ ಎಂದು ಪ್ರಶ್ನೆ ಕೇಳಿದ್ದಾರೆ. ಹಾಗಾದ್ರೆ, ಬಿಜೆಪಿಯಲ್ಲಿ ದಲಿತರಿಗೆ ಹಿಂದುಳಿದವರಿಗೆ ಗೌರವ ಇಲ್ವಾ, ಇದು ನನ್ನ ಪ್ರಶ್ನೆ ಅಲ್ಲ, ಅದು ಗೂಳಿಹಟ್ಟಿ ಪ್ರಶ್ನೆ. ಸಾಮಾನ್ಯವಾಗಿ ಆರ್ ಎಸ್ ಎಸ್ ನಲ್ಲಿ ದಲಿತರಿಗೆ ಅವಕಾಶ ಇದ್ಯಾ? ಇದ್ದರೆ ದಲಿತರನ್ನು ಸರಸಂಘ ಚಾಲಕರನ್ನಾಗಿ ಮಾಡಲಿ ಎಂದು ಸವಾಲು ಹಾಕಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್