AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮಧು ಬಂಗಾರಪ್ಪಗೆ ಶಿಕ್ಷೆ ವಿಧಿಸಿದ ಕೋರ್ಟ್, ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ

ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ದಂಡ ವಿಧಿಸಿದೆ. ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲು ಅನುಭವಿಸಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಸರ್ಕಾರದ ಮೇಲೆ ಮುಗಿಬಿದ್ದಿದ್ದು, ಮಧು ಬಂಗಾರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸಚಿವ ಮಧು ಬಂಗಾರಪ್ಪಗೆ ಶಿಕ್ಷೆ ವಿಧಿಸಿದ ಕೋರ್ಟ್, ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ
ಶಿಕ್ಷಣ ಸಚಿವ ಮಧು ಬಂಗಾರಪ್ಪ
TV9 Web
| Edited By: |

Updated on: Dec 29, 2023 | 10:39 PM

Share

ಬೆಂಗಳೂರು (ಡಿಸೆಂಬರ್ 29): ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಅವರ 2011ರ ಚೆಕ್‌ಬೌನ್ಸ್‌ ಪ್ರಕರಣಕ್ಕೆ(cheque bounce cases) ಸಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆ. ಇನ್ನು ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸ ಅನುಭವಿಸುವಂತೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಸಚಿವ ಮಧು ಬಂಗಾರಪ್ಪ ರಾಜೀನಾಮೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಸಚಿವರ ರಾಜೀನಾಮೆಗೆ ರವಿಕುಮಾರ್ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಲಾಗಿದೆ. ಇಂಥ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ. ಅವರು ಈ ಇಲಾಖೆಯನ್ನು ನಿಭಾಯಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮಧು ಬಂಗಾರಪ್ಪರವರು ತಮ್ಮ ಆಕಾಶ್ ಆಡಿಯೋ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6 ಕೋಟಿ 96 ಲಕ್ಷದ 60 ಸಾವಿರ ರೂ. ಸಂದಾಯ ಮಾಡಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಪಾವತಿಸಲು ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಈಗ ಒಟ್ಟು ಮೊತ್ತದಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ.ಗಳನ್ನು ಫಿರ್ಯಾದುದಾರ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ ನೀಡಲು ಮತ್ತು 10 ಸಾವಿರವನ್ನು ಸರಕಾರಕ್ಕೆ ದಂಡದ ರೂಪದಲ್ಲಿ ಕಟ್ಟಲು ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಸದ್ಯಕ್ಕೆ 50 ಲಕ್ಷ ಪಾವತಿಸಿ ಉಳಿದ ಮೊತ್ತವನ್ನು ಜನವರಿ ಅಂತ್ಯದವೇಳೆಗೆ ಕೊಡುವುದಾಗಿ ಮಧು ಬಂಗಾರಪ್ಪ ಅವರು ಮುಚ್ಚಳಿಕೆ ಸಲ್ಲಿಸಿದ್ದರು. ಆದರೆ, ಹಿಂದಿನ ಮುಚ್ಚಳಿಕೆಯನ್ನು ಪಾಲಿಸದ ಕಾರಣ ಅವರ ಕೋರಿಕೆಯನ್ನು ನ್ಯಾಯಾಲಯ ಮನ್ನಿಸಿಲ್ಲ ಎಂಬ ಮಾಹಿತಿಯನ್ನು ರವಿಕುಮಾರ್ ಅವರು ತಿಳಿಸಿದ್ದಾರೆ.

ಚೆಕ್ ಬೌನ್ಸ್ ಮತ್ತು ಮುಚ್ಚಳಿಕೆ ಬರೆದುಕೊಟ್ಟರೂ ಅದನ್ನು ಪಾಲಿಸದ ಹಿನ್ನೆಲೆ ಇರುವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯುವಂತೆ ರವಿಕುಮಾರ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಕಳಂಕವಾಗುವಂತೆ ವರ್ತಿಸಿದ ಮಧು ಬಂಗಾರಪ್ಪ ಅವರು ಆ ಹುದ್ದೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂದೂ ತಿಳಿಸಿದ್ದಾರೆ.

ರಾಜೀನಾಮೆಗೆ ವಿಜಯೇಂದ್ರ ಒತ್ತಾಯ

ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ ತಗುಲಿದೆ ಕಪ್ಪು ಚುಕ್ಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜೀನಾಮೆ ನೀಡಿ ತಮ್ಮ ನೈತಿಕತೆ ಪ್ರದರ್ಶಿಸಲಿ, ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಒತ್ತಾಯಿಸಿದ್ದಾರೆ.

ಭಂಡತನ ಅಂಟಿಸಿಕೊಂಡಿರುವ ಈ ಸರ್ಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಶಿಕ್ಷಣ ಮೌಲ್ಯಕ್ಕೆ ಅಪಚಾರ ಎಸಗಿದಂತಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಇಲಾಖೆಯ ಗತಿಯೇನು ಎಂದ ಯತ್ನಾಳ್

ಇನ್ನು ಮಧು ಬಂಗಾರಪ್ಪ ವಿರುದ್ಧ ಎಕ್ಸ್​ ಮೂಲಕ ಬಿಜೆಪಿ ಶಾಸಕ ಯತ್ನಾಳ್ ಪ್ರತಿಕ್ರಿಯಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಾದ ಮಂತ್ರಿಗಳು. ಆದ್ರೆ, ಶಿಕ್ಷಣ ಸಚಿವರೇ ವಂಚಿಸಿ ತಪ್ಪಿತಸ್ಥರಾದರೆ ಇನ್ನು ಇಲಾಖೆಯ ಗತಿಯೇನು? ಬಲ್ಲ ಮೂಲಗಳ ಪ್ರಕಾರ ಕನ್ನಡ ಓದಲು, ಬರೆಯಲು ಸಹ ಕಷ್ಟ ಪಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ