AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬೆ ಫ್ರೆಂಡ್ಸ್‌ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಹೋಗಲ್ಲ ಹಾಗಲ್ಲ ಹೀಗಲ್ಲ ಎನ್ನುತ್ತಲೇ ಬಾಂಬೆ ಶಾಸಕರ ತವರು ಪಕ್ಷದ ಮೋಹ ಹೆಚ್ಚಾಗುತ್ತಿದೆ. ಸೋಮಶೇಖರ್ ಸಿಎಂ ಭೇಟಿ ಬಳಿಕ ಇದೀಗ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆಗೆ ನಾಂದಿ ಹಾಡಿದ್ದು ಯಲ್ಲಾಪುರದ ಶಾಸಕರು. ಬಾಂಬೆ ತಂಡದ ಖಾಯಂ ಸದಸ್ಯರಾಗಿದ್ದ ಶಿವರಾಮ್ ಹೆಬ್ಬಾರ್ ಕೂಡ ಈಗ ಎತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಸಿಎಂ ಭೇಟಿ ಉತ್ತರ ಕೊಟ್ಟಿದೆ. ಇದರೊಂದಿಗೆ ಬಾಂಬೆ ಫ್ರೆಂಡ್ಸ್‌ ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ ಮೂಡಿವೆ.

ಬಾಂಬೆ ಫ್ರೆಂಡ್ಸ್‌ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ
ಬಿಜೆಪಿ-ಕಾಂಗ್ರೆಸ್​
ಪ್ರಸನ್ನ ಗಾಂವ್ಕರ್​
| Edited By: |

Updated on: Aug 27, 2023 | 10:49 AM

Share

ಬೆಂಗಳೂರು, (ಆಗಸ್ಟ್ 27): ಬಾಂಬೆ ಶಾಸಕರು ಮತ್ತೆ ತವರು ಮನೆಯ ಕದವನ್ನು ತಟ್ಟುತ್ತಿರುವ ಸುದ್ದಿ ಹಳೆಯದೇನೂ ಅಲ್ಲ. ಕಾಂಗ್ರೆಸ್​ನ(Congress) ಆಪರೇಷನ್ ಹಸ್ತದ ಚಟುವಟಿಕೆ ಗುಟ್ಟಾಗಿಯೂ ಉಳಿದಿಲ್ಲ. ಎಸ್.ಟಿ ಸೋಮಶೇಖರ್(ST Somashekhar) ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ಮಾಡಿದ್ದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಬಿಜೆಪಿ(BJP) ಬಿಟ್ಟು ವಾಪಸ್‌ ಕಾಂಗ್ರೆಸ್‌ಗೆ ತೆರಳುವ ಸುದ್ದಿಗೆ ಮತ್ತಷ್ಟು ಜೀವ ಬರುವಂತೆ ಮಾಡಿತ್ತು. ಇದೀಗ ಮತ್ತೊಬ್ಬ ಬಾಂಬೆ ಫ್ರೆಂಡ್ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಮತ್ತೆ ಸೋಮಶೇಖರ್ ಹಾದಿಯನ್ನೇ ತುಳಿದಿದ್ದಾರ. ಶಿವರಾಮ್ ಹೆಬ್ಬಾರ್ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹೆಬ್ಬಾರ್ ಕೂಡ VO: ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಇದು ಬಲವಾದ ಪುಷ್ಟಿ ನೀಡಿದೆ. ಬಿಜೆಪಿಯ ಉಳಿದ ಶಾಸಕರಿಗೆ ಇಲ್ಲದ ಕ್ಷೇತ್ರದ ಕೆಲಸಗಳು ಬಾಂಬೆ ಫ್ರೆಂಡ್ಸ್ ಖ್ಯಾತಿಯ ಶಾಸಕರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಬಳಿ ಹೆಚ್ಚಾಗಿ ನಡೆಯುತ್ತಿರುವುದು ಎಲ್ಲ ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಮುಂಬರುವ ದಿನಗಳಲ್ಲಿ ಶಿವರಾಂ ಹೆಬ್ಬಾರ್ ಕೂಡ ಕಾಂಗ್ರೆಸ್ ಕಡೆ ಮುಖ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಅಡಿಪಾಯ ಹಾಕಿದಂತಿದೆ.

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಎಸ್‌ಟಿಎಸ್, ಡಿಕೆಎಸ್

ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಎಸ್‌ಟಿಎಸ್ ಅವರ ಆಪ್ತರು, ಅನೇಕ ಬೆಂಬಲಿಗರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ… ಯಾವಾಗ ಬೇಕಾದ್ರೂ ಎಸ್‌ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದ್ರ ಬೆನ್ನಲ್ಲೇ ಎಸ್‌ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಸಿಎಂ ಡಿಕೆಶಿವಕುಮಾರ್‌ಗೂ ಪ್ರೀತಿ ಹೆಚ್ಚಾಗಿದೆ. ನಿನ್ನೆ(ಆಗಸ್ಟ್ 26) ಯಶವಂತಪುರ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಬಿಜೆಪಿ ನಾವಿಕನಿಲ್ಲದ ಹಡಗಾಗಿದೆ: ಸ್ವಪಕ್ಷೀಯರ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ

ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂಥ ಪರಿಸ್ಥಿತಿ ಇರುವುದು ನಿಜ

ಇನ್ನೊಂದೆಡೆ ಸ್ವಪಕ್ಷೀಯ ನಾಯಕರ ವಿರುದ್ಧ ಎಸ್.ಟಿ.ಸೋಮಶೇಖರ್ ಮತ್ತೆ ಬಹಿರಂಗವಾಗಿ ಟೀಕಿಸಿದ್ದಾರೆ. ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂಥ ಪರಿಸ್ಥಿತಿ ಇರುವುದು ನಿಜ ಎಂದು ಹೇಳಿರುವುದು ಅಚ್ಚರಿಕೆ ಕಾರಣವಾಗಿದೆ. ಇದೆ ವೇಳೆ ನನ್ನ ರಾಜಕೀಯ ಬೆಳವಣಿಗೆಗೆ ಡಿ.ಕೆ.ಶಿವಕುಮಾರ್ ಕಾರಣ ಅಂತಲೂ ಬಣ್ಣಿಸಿದ್ದಾರೆ.

ಇನ್ನು ಯಶವಂತಪುರದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ ಮಾತನಾಡಿ, ನನ್ನ, ಸೋಮಶೇಖರ್ ಸಂಬಂಧ ಇಂದಿನದ್ದಲ್ಲ, 35 ವರ್ಷ ಹಳೆಯದ್ದು. ನಾವು ಬಿತ್ತಿದ ಬೀಜ, ನಾವು ಗೊಬ್ಬರ ಹಾಕಿದ ಗಿಡ ಈಗ ಮರವಾಗಿದೆ.. ಹಣ್ಣನ್ನು ಬೇರೆಯವರು ಕಿತ್ತು ತಿನ್ನಬಾರದೆಂದು ಇಲ್ಲಿಗೆ ಅವರ ಜತೆ ಬಂದಿರುವೆ ಅಂತೇಳಿದ್ದಾರೆ.

ಎಸ್.ಟಿ ಸೋಮಶೇಖರ್ ಮನವಿ ಮೇರೆಗೆ ಡಿಸಿಎಂ ಡಿಕೆಶಿವಕುಮಾರ್ ಇಂದು ಕನಕಪುರ ರಸ್ತೆಯ ಯಶವಂತಪುರ ಕ್ಷೇತ್ರದ ರೆಸಿಡೆನ್ಶಿಯಲ್ ಅಸೋಸಿಯೇಷನ್‌ಗಳ ಅಹವಾಲು ಆಲಿಸಲಿದ್ದಾರೆ. ಈ ಮೂಲಕ ಸೋಮಶೇಖರ್ ಕೂಡ ಕಾಂಗ್ರೆಸ್ ಸೇರ್ಪಡೆಗೆ ಬೇಕಾದ ವೇದಿಕೆಯನ್ನು ಕನಕಪುರ ರಸ್ತೆಯಿಂದಲೇ ಗಟ್ಟಿ ಮಾಡಿಕೊಳ್ಳುವಂತೆ ಕಾಣುತ್ತಿದೆ.

ಸದ್ಯಕ್ಕೆ ಆಪರೇಷನ್ ಹಸ್ತದ ತಂತ್ರಗಾರಿಕೆಗೆ ಸೋಮಶೇಖರ್ ಹಾಗೂ ಹೆಬ್ಬಾರ್ ತಾವೇ ಒಳಗಾದಂತೆ ಕಾಣುತ್ತಿದೆ. ಬರುವವರೆಲ್ಲ ಬರಲಿ ಎಂಬ ಮಾತಿನ ಮೂಲಕ ಉಳಿದ ನಾಯಕರಿಗೆ ಸಿದ್ದರಾಮಯ್ಯ, ಡಿ.ಕೆಶಿವಕುಮಾರ್ ಜೋಡಿ ರೆಡ್ ಕಾರ್ಪೇಟ್ ಹಾಕುತ್ತಿರುವುದು ಸ್ಪಷ್ಟ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!