ಬಿಜೆಪಿ ಕೇಸರಿ ಅಥವಾ ಕಪ್ಪಾ ಶಾಲಾದರೂ ಹಾಕಿಕೊಳ್ಳಲಿ, ಕೇಸರಿ ಇವರೊಬ್ಬರ ಆಸ್ತಿಯಾ?: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ನಂತರ ಕೆಲವೆಡೆ ಸಾರ್ವಜನಿಕ ಪ್ರದೇಶದಲ್ಲಿ ಹಾಕಿದ್ದ ಕೇಸರಿ ಧ್ವಜನಗಳನ್ನು ತೆರವುಗೊಳಿಸಲಾಗಿದೆ. ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ, ಕರ್ನಾಟಕ ಬಜೆಟ್​ ಅಧಿವೇಶನದ ಮೊದಲ ದಿನವಾದ ಇಂದು (ಫೆ.12) ವಿಪಕ್ಷ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಹಾಜರಾದರಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಕೇಸರಿ ಅಥವಾ ಕಪ್ಪಾ ಶಾಲಾದರೂ ಹಾಕಿಕೊಳ್ಳಲಿ, ಕೇಸರಿ ಇವರೊಬ್ಬರ ಆಸ್ತಿಯಾ?: ಡಿಕೆ ಶಿವಕುಮಾರ್
ಅಧಿವೇಶನಕ್ಕೆ ಕೇಸರಿ ಶಾಲು ಹಾಕಿಕೊಂಡು ಹೋದ ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ
Edited By: Rakesh Nayak Manchi

Updated on: Feb 12, 2024 | 2:27 PM

ಬೆಂಗಳೂರು, ಫೆ.12: ಕರ್ನಾಟಕ ಬಜೆಟ್​ ಅಧಿವೇಶನದ (Karnataka Budget Session 2024) ಮೊದಲ ದಿನವಾದ ಇಂದು (ಫೆ.12) ವಿಪಕ್ಷ ಬಿಜೆಪಿ (BJP) ಶಾಸಕರು ಕೇಸರಿ ಶಾಲು ಧರಿಸಿಕೊಂಡು ಹಾಜರಾದರಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಬಿಜೆಪಿಯವರು ಕೇಸರಿ ಶಾಲಾದರೂ ಹಾಕಿಕೊಳ್ಳಲಿ ಕಪ್ಪಾದರೂ ಹಾಕಿಕೊಳ್ಳಲಿ. ಕೇಸರಿ ಇವರೊಬ್ಬರ ಆಸ್ತಿಯಾ ಎಂದು ಪ್ರಶ್ನಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿ ಮಾತನಾಡುತ್ತಾ, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ ಎಂದೆಲ್ಲಾ ಹಾಡಿ ಹೊಗಳಿದರು. ಆದರೆ, ರಾಜ್ಯಪಾಲರಿಂದ ಸರ್ಕಾರವು ಸುಳ್ಳು ಭಾಷಣ ಮಾಡಿಸಿದೆ ಎಂದು ವಿಪಕ್ಷ ಬಿಜೆಪಿ ಟೀಕಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾವು ರಾಜ್ಯದ ಹಿತಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು. ಅಲ್ಲದೆ, ನಮ್ಮ ಗ್ಯಾರಂಟಿಗಳನ್ನೇ ಇವರು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿ ಕಾಪಿ ಮಾಡಿಯೇ ಮೋದಿ ಗ್ಯಾರಂಟಿ ಅಂತ ಮಾಡುತ್ತಿಲ್ಲವೇ? ಕರ್ನಾಟಕ ಮಾಡೆಲ್ ಅನ್ನೇ ನಾವು ಜಾರಿ ಮಾಡುತ್ತೇವೆ ಎಂದರು.

ಇದನ್ನೂ ಓದಿ: Karnataka Budget 2024: ಬಜೆಟ್​ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದ ಬಿಜೆಪಿ ನಾಯಕರು

ಕರ್ನಾಟಕ ಬಜೆಟ್​ ಅಧಿವೇಶನ 2024 ಇಂದಿನಿಂದ ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ಬಜೆಟ್​ ಮಂಡನೆ ಮಾಡಲಿದ್ದಾರೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.

ಬಜೆಟ್​ ಅಧಿವೇಶನದ ಮೊದಲ ದಿನ ಬಿಜೆಪಿ ನಾಯಕರು ಕೇಸರಿ ಶಾಲೆ ಧರಿಸಿಕೊಂಡು ಬಂದಿದ್ದು ವಿಶೇಷವಾಗಿದೆ. ಸದ್ಯ ರಾಜ್ಯದಲ್ಲಿ ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಹಬ್ಬಿದೆ. ಕೆರಗೋಡಿನಲ್ಲಿ ಹನುಮ ಧ್ವಜವನ್ನು ಮತ್ತೆ ಹಾರಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ. ಇದರ ಪ್ರತೀಕವೆಂಬಂತೆ ಬಿಜೆಪಿ ಶಾಸಕರು ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದಾರೆ. ಈ ಮೂಲಕ ಹಿಂದೂ ವಿರೋಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವೆಂದು ಸಾಂಕೇತಿಕವಾಗಿ ಟೀಕಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us