AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕಲ್ಲಲ್ಲಿ ಹಲವು ಹಕ್ಕಿಗಳನ್ನು ಹೊಡೆದಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್

ಬಿಟ್​ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆ ಶಿವಕುಮಾರ್ ಬಣದ ನಲಪಾಡ್ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ.

ಒಂದೇ ಕಲ್ಲಲ್ಲಿ ಹಲವು ಹಕ್ಕಿಗಳನ್ನು ಹೊಡೆದಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: sandhya thejappa|

Updated on: Nov 14, 2021 | 5:00 PM

Share

ಬೆಂಗಳೂರು: ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ. ಡಿಕೆಶಿ ವಿರುದ್ಧ ಮಾತನಾಡಿದ್ದ ಉಗ್ರಪ್ಪರನ್ನು ರಕ್ಷಿಸುವುದು. ಶಿಸ್ತುಕ್ರಮದಿಂದ ವಿ ಎಸ್ ಉಗ್ರಪ್ಪರನ್ನು ರಕ್ಷಿಸುವುದು. ನಲಪಾಡ್ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು. ಡಿಕೆಶಿರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು. ದಲಿತ ವಿರೋಧಿ ಆರೋಪದಿಂದ ಪಾರಾಗುವುದು. ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರವನ್ನು ನಡೆಸುವುದು. ಹೀಗೆ ಶಂಕಿತ ಬಿಟ್​ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

ಬಿಟ್​ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆ ಶಿವಕುಮಾರ್ ಬಣದ ನಲಪಾಡ್ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ. ಬಿಟ್ ಕಾಯಿನ್ ವಿಚಾರ ರಾಜಕೀಯ ವೈಷಮ್ಯದ ಪ್ರತಿಪಲನವಷ್ಟೆ. ಕಾಂಗ್ರೆಸ್ ನಾಯಕರಿಬ್ಬರ ನಡುವಿನ ರಾಜಕೀಯ ವೈಷಮ್ಯದ ಪ್ರತಿಫಲನ. ಅದರಿಂದಾಚೆಗೆ ಬೇರೇನಿಲ್ಲ ಅಂತ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದೆ.

ಜನವರಿಯಲ್ಲಿ ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಗುತ್ತದೆ ಎಂಬ ಕಾರಣಕ್ಕಾಗಿ ನನ್ನನ್ನು ಸಿಲುಕಿಸಲಾಗುತ್ತಿದೆ ಎಂದು ನಲಪಾಡ್ ಆರೋಪಿಸುತ್ತಿದ್ದಾರೆ. ತಮ್ಮ ಆಪ್ತನ ಪುತ್ರ ರಕ್ಷಾ ರಾಮಯ್ಯಗಾಗಿ ಸಿದ್ದರಾಮಯ್ಯ ಅವರು ನಲಪಾಡ್ ವಿರೋಧಿಸಿದ್ದು ರಾಜ್ಯಕ್ಕೆ ತಿಳಿದಿದೆ. ಹಾಗಾದರೆ ಇದರ ಹಿಂದಿರುವುದು ಏನು ಅಂತ ಬಿಜೆಪಿ ಪ್ರಶ್ನಸಿದೆ.

ಇದನ್ನೂ ಓದಿ

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು

ಬಿಜೆಪಿ ಕೋಮುವಾದಿಗಳು ದೇಶ ಒಡೆಯುತ್ತಿದ್ದಾರೆ; ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು: ಸಿದ್ದರಾಮಯ್ಯ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ