AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯನ್ನು ಬಿಎಸ್​ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಗುಡುಗಿದ ಯತ್ನಾಳ್​

ಇಲ್ಲಿಯವರೆಗೆ ಯಡಿಯೂರಪ್ಪ, ಅವರ ಕುಟುಂಬ ಹಾಗೂ ಬಣದ ವಿರುದ್ಧ ಮಾತನಾಡುತ್ತಲೇ ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಇದೇ ಮೊದಲ ಬಾರಿಗೆ ಪರೋಕ್ಷವಾಗಿ ಹೈಕಮಾಂಡ್​ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ. ಯಡಿಯೂರಪ್ಪ ಹಾಗೂ ಅವರ ಕುಟುಂಬಕ್ಕೆ ಬೆಂಗಳೂರಿನ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ನೋಂದಣಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಹೈಕಮಾಂಡ್ ನಡೆಯನ್ನು ಪ್ರಶ್ನಿಸಿದ್ದಾರೆ.​

ಬಿಜೆಪಿಯನ್ನು ಬಿಎಸ್​ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಗುಡುಗಿದ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Dec 26, 2023 | 5:25 PM

Share

ವಿಜಯಪುರ, (ಡಿಸೆಂಬರ್ 26): ಕೊರೊನಾ ವೇಳೆ ಯಡಿಯೂರಪ್ಪ (BS Yediyurappa) ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರವಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿಯನ್ನು ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಪಕ್ಷವನ್ನ ಯಡಿಯೂರಪ್ಪ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ರಿಜಿಸ್ಟ್ರಾರ್ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಹೈಕಮಾಂಡ್​ ವಿರುದ್ಧ ಕಿಡಿಕಾರಿದ್ದಾರೆ.

ಆಧಿವೇಶನದಲ್ಲಿ ಬಿಜೆಪಿ ಗಮನ ಸೆಳೆಯಲಿಲ್ಲ. ಇದು ಅಡ್ಜಸ್ಟ್​ಮೆಂಟ್ ಪಾಲಿಟಿಕ್ಸ್​​. ಎಲ್ಲವೂ ಹೊಂದಾಣಿಕೆ, ಚುನಾವಣೆಯಲ್ಲೂ ಹೊಂದಾಣಿಕೆ, ಆ ಜೋಡೆತ್ತುಗಳು ಈ ಜೋಡೆತ್ತುಗಳಿಗೆ ಹೇಳಿವೆ. ನೀ ಒಂದು ತೆಗೆದ್ರೆ ನಿಮ್ಮವು ನೂರು ತೆಗೆಯುತ್ತೇವೆಂದಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಕೊರೊನಾ ವೇಳೆ ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ: ಯತ್ನಾಳ್​ ಆರೋಪ

ಪದೇ ಪದೇ ಯಡಿಯೂರಪ್ಪ ಕುಟುಂಬ ವಿರುದ್ಧ ವಾಗ್ದಾಳಿ ನಡೆಸಿಕೊಂಡು ಬರುತ್ತಿರುವ ಯತ್ನಾಳ್ ಈ ಬಾರಿ ಹೈಕಮಾಂಡ್​ ವಿರುದ್ಧ ಗುಡುಗಿದ್ದಾರೆ. ಕರ್ನಾಟಕ ಬಿಜೆಪಿಯನ್ನು ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಯಡಿಯೂರಪ್ಪ ಹಾಗೂ ಅವರ ಕುಟುಂಬಕ್ಕೆ ಬೆಂಗಳೂರಿನ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ನೋಂದಣಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಇದೇ ಮೊದಲ ಹೈಕಮಾಂಡ್​ ನಿರ್ಧಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ.

ಈ ಹಿಂದೆ ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ಸಂದರಭದಲ್ಲೂ ಸಹ ಯತ್ನಾಳ್ ಯಡಿಯೂರಪ್ಪ ಹಾಗೂ ಅವರ ಬಣ ವಿರುದ್ಧ ಗುಡುಗಿದ್ದರು. ಇದೀಗ ಬಿಎಸ್​ವೈ ಪುತ್ರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಯತ್ನಾಳ್ ಮತ್ತ ಮಾತಿನ ವರಸೆ ಮತ್ತಷ್ಟು ಹೆಚ್ಚು ಮಾಡಿದ್ದಾರೆ. ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಲ್ಲೇ ಇದ್ದಾರೆ. ಆದ್ರೆ, ಇದುವರೆಗೂ ಹೈಕಮಾಂಡ್ ನೋಟಿಸ್ ಜಾರಿ ಮಾಡದಿರುವುದು ಅಚ್ಚರಿಗೆ ಕಾರಣವಾಗಿದೆ.

ಇಲ್ಲಿವರೆಗೆ ಯಡಿಯೂರಪ್ಪ ಹಾಗೂ ಅವರ ಬಣದ ವಿರುದ್ಧ ಬಹಿರಂಗವಾಗಿಯೇ ಹೇಳಿಕೆಯನ್ನು ನೀಡುತ್ತಿದ್ದ ಯತ್ನಾಳ್, ಇದೇ ಮೊದಲ ಬಾರಿಗೆ ಹೈಕಮಾಂಡ್​ ಬಗ್ಗೆ ಧ್ವನಿ ಎತ್ತಿದ್ದು, ಸಂಚಲನ ಮೂಡಿಸಿದೆ. ಮತ್ತೊಂದೆಡೆ ಯತ್ನಾಳ್​​ ಬಾಯಿಗೆ ಬೀಗ ಹಾಕಬೇಕೆಂದು ಯಡಿಯೂರಪ್ಪ ಅಭಿಮಾನಿಗಳು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳಿದಿದ್ದಾರೆ. ಹೀಗಾಗಿ ಹೈಕಮಾಂಡ್​ ಈಗಲಾದರೂ ಯತ್ನಾಳ್​ಗೆ ಶೋಕಾಸ್ ನೋಟಿಸ್ ನೀಡುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ