AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?: ಬಿಜೆಪಿ

ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನು ಇಟ್ಟು ರಾಮ ರಾಮ ಎನ್ನುತ್ತಿದ್ದರು" ಎಂದು ಸಚಿವ ಕೆನ್​ ರಾಜಣ್ಣ ವಿವಾದಾತ್ಮ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡುವ ಮೂಲಕ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದೆ.

ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?: ಬಿಜೆಪಿ
ಕೆಎನ್​​ ರಾಜಣ್ಣ, ಬಿಜೆಪಿ
TV9 Web
| Edited By: |

Updated on: Jan 17, 2024 | 12:29 PM

Share

ಬೆಂಗಳೂರು, ಜನವರಿ 17: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಬಿಜೆಪಿಯವರು ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಕಾರ್ಯಕ್ರಮವಾಗಿದೆ. ಹೀಗಾಗಿ ನಾವು ಈ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಕಾಂಗ್ರೆಸ್​ ನಾಯಕರು ಘೋಷಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್​ ನಾಯಕರು ವಿವಾದತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿನ್ನೆ (ಜ.16) ರಂದು ಸಚಿವ ಕೆನ್​ ರಾಜಣ್ಣ (KN Rajanna) ವಿವಾದಾತ್ಮ ಹೇಳಿಕೆ ನೀಡಿದ್ದರು.

ಅದು “ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನು ಇಟ್ಟು ರಾಮ ರಾಮ ಎನ್ನುತ್ತಿದ್ದರು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟನೆ ಸರಣಿ ಟ್ವೀಟ್​ ಮಾಡಿ ಸಚಿವರ ವಿರುದ್ಧ ವಾಗ್ದಾಳಿ ಮಾಡಿದೆ.

ಇದನ್ನೂ ಓದಿ: ನಾನೇ ಲಕ್ಷ್ಮಣ, ಅಯೋಧ್ಯೆಗೆ ಈಗ ಹೋಗಲ್ಲ: ಲಕ್ಷ್ಮಣ ಸವದಿ

“ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್​ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ” ಎಂದು ಬಿಜೆಪಿ ಹ್ಯಾಷ್​​ಟ್ಯಾಗ್​ ರಾಮ ವಿರೋಧಿ ಕಾಂಗ್ರೆಸ್​ ಅಂತ ಟ್ವೀಟ್​ ಮಾಡಿದೆ.

ಮುಂದುವರೆದು “ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್​ ಕಾರ್ಯಕರ್ತರೂ ಕ್ಷಮಿಸಲಾರರು. ಅಧಿಕಾರದ ಮದ, ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದು, ನಿಮ್ಮ ಕ್ಷೇತ್ರದ ಮತದಾರರನ್ನಾದರೂ ಕೇಳಿ, ನಿಮ್ಮ ಕುಟುಂಬಸ್ಥರನ್ನಾದರೂ ಕೇಳಿ ತಿಳಿಯಿರಿ” ಎಂದು ಕಿವಿ ಹಿಂಡಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?