ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?: ಬಿಜೆಪಿ

ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನು ಇಟ್ಟು ರಾಮ ರಾಮ ಎನ್ನುತ್ತಿದ್ದರು" ಎಂದು ಸಚಿವ ಕೆನ್​ ರಾಜಣ್ಣ ವಿವಾದಾತ್ಮ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡುವ ಮೂಲಕ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದೆ.

ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?: ಬಿಜೆಪಿ
ಕೆಎನ್​​ ರಾಜಣ್ಣ, ಬಿಜೆಪಿ
Follow us
| Updated By: ವಿವೇಕ ಬಿರಾದಾರ

Updated on: Jan 17, 2024 | 12:29 PM

ಬೆಂಗಳೂರು, ಜನವರಿ 17: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಬಿಜೆಪಿಯವರು ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಕಾರ್ಯಕ್ರಮವಾಗಿದೆ. ಹೀಗಾಗಿ ನಾವು ಈ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಕಾಂಗ್ರೆಸ್​ ನಾಯಕರು ಘೋಷಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್​ ನಾಯಕರು ವಿವಾದತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿನ್ನೆ (ಜ.16) ರಂದು ಸಚಿವ ಕೆನ್​ ರಾಜಣ್ಣ (KN Rajanna) ವಿವಾದಾತ್ಮ ಹೇಳಿಕೆ ನೀಡಿದ್ದರು.

ಅದು “ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನು ಇಟ್ಟು ರಾಮ ರಾಮ ಎನ್ನುತ್ತಿದ್ದರು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟನೆ ಸರಣಿ ಟ್ವೀಟ್​ ಮಾಡಿ ಸಚಿವರ ವಿರುದ್ಧ ವಾಗ್ದಾಳಿ ಮಾಡಿದೆ.

ಇದನ್ನೂ ಓದಿ: ನಾನೇ ಲಕ್ಷ್ಮಣ, ಅಯೋಧ್ಯೆಗೆ ಈಗ ಹೋಗಲ್ಲ: ಲಕ್ಷ್ಮಣ ಸವದಿ

“ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್​ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ” ಎಂದು ಬಿಜೆಪಿ ಹ್ಯಾಷ್​​ಟ್ಯಾಗ್​ ರಾಮ ವಿರೋಧಿ ಕಾಂಗ್ರೆಸ್​ ಅಂತ ಟ್ವೀಟ್​ ಮಾಡಿದೆ.

ಮುಂದುವರೆದು “ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್​ ಕಾರ್ಯಕರ್ತರೂ ಕ್ಷಮಿಸಲಾರರು. ಅಧಿಕಾರದ ಮದ, ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದು, ನಿಮ್ಮ ಕ್ಷೇತ್ರದ ಮತದಾರರನ್ನಾದರೂ ಕೇಳಿ, ನಿಮ್ಮ ಕುಟುಂಬಸ್ಥರನ್ನಾದರೂ ಕೇಳಿ ತಿಳಿಯಿರಿ” ಎಂದು ಕಿವಿ ಹಿಂಡಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ