AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶುರುವಾಡಿದ್ದ ರೀತಿಯಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡಿದ್ದ ಪೇ ಸಿಎಂ ಅಭಿಯಾನ ಭಾರೀ ಗಮನಸೆಳೆದಿತ್ತು. ಇದೀಗ ಅದೇ ಮಾದರಿಯಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಂಭಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಶುರುವಾಡಿದ್ದ ರೀತಿಯಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ
ಪೇ ಸಿಎಸ್ ಅಭಿಯಾನ
ಸುನಿಲ್​ ಎಮ್​ ಹೆಚ್​
| Edited By: |

Updated on: Aug 10, 2023 | 10:03 AM

Share

ಬೆಂಗಳೂರು, (ಆಗಸ್ಟ್ 10): ಬಿಜೆಪಿ(BJP) ಸರ್ಕಾರದ ಅವಧಿಯ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ವಿರುದ್ಧ ಕಾಂಗ್ರೆಸ್​ ಮಾಡಿದ್ದ  ಪೇ ಸಿಎಂ (PayCM) ಅಭಿಯಾನ ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿತ್ತು. ಆ ಸಂದರ್ಭದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು. ಸಾಲದಕ್ಕೆ ಚುನಾವಣೆಯಲ್ಲಿ ಸೋಲಿಗೆ ಒಂದು ಭಾಗವೂ ಆಗಿದೆ. ಇದೀಗ ಬಿಜೆಪಿ ಅದೇ ಪೇ ಸಿಎಂ ರೀತಿ ಕಾಂಗ್ರೆಸ್​ ವಿರುದ್ಧ ಅಭಿಯಾನ ಶುರು ಮಾಡಿಕೊಂಡಿದೆ. ಹೌದು…ಪೇ ಸಿಎಂ ಮಾದರಿಯಲ್ಲೇ ಕೃಷಿ ಸಚಿವ ಚೆಲುವರಾಯಸ್ವಾಮಿ‌ ವಿರುದ್ಧ ಪೇ ಸಿಎಸ್(Paycs) ಅಭಿಯಾನ ಆರಂಭವಾಗಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಗ್ರೂಪ್ ನಿಂದ ಇಂತಹ ಪೋಸ್ಟ್​ ಆಗಿದ್ದು, ನಮ್ಮಲ್ಲಿ ಪೇಟಿಎಂ ಕೂಡ ಲಭ್ಯವಿದೆ. ದಾರಾಳವಾಗಿ ಸ್ಕ್ಯಾನ್ ಮಾಡಿ ಲಂಚ ಪಾವತಿ ಮಾಡಿ. ಧನ್ಯವಾದಗಳು, ಇಂತಿ ನಿಮ್ಮ ಭ್ರಷ್ಟ ಚೆಲುವರಾಯಸ್ವಾಮಿ ಅಲಿಯಾಸ್ ಲಂಚ ಸ್ವಾಮಿ ಎಂದು ಟ್ಯಾಗ್ ಲೈನ್ ಹಾಕಲಾಗಿದೆ.

ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ವಿವಾದದ ಗೂಡಲ್ಲಿ ಸಿಲುಕಿದ್ದಾರೆ.. ಈ ಹಿಂದೆ KSRTC ಡ್ರೈವರ್​​​ ಆತ್ಮಹತ್ಯೆ ಯತ್ನದ ಕೇಸ್​​ನಲ್ಲಿ ಸಚಿವರ ಹೆಸರು ಕೇಳಿಬಂದಿತ್ತು. ಇದೀಗ ಮಂಡ್ಯ(Mandya) ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರಿಗೆ ಸಚಿವರು ಹಣಕ್ಕೆ(Bribe) ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ(governor )ಪತ್ರ ಬರೆಯಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡು, ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯ ಜಟಾಪಟಿ ಸೃಷ್ಟಿಸಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬೀಳಲು ರಣತಂತ್ರ ರೂಪಿಸುತ್ತಿದೆ. ಅದರ ಮೊದಲ ಭಾಗವಾಗಿ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್ ಅಭಿಯಾನ ಶುರು ಮಾಡುವಂತಿದ್ದು, ಅದರ ಮಾದರಿ ಪೋಸ್ಟ್ ಇದೀಗ ಬಹಿರಂಗವಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾತ್ರೋ ರಾತ್ರಿ ಬೆಂಗಳೂರಿನ ಬೀದಿಯಲ್ಲಿ ಕಾಣಿಸಿಕೊಂಡ ಪೇ ಸಿಎಂ ಪೋಸ್ಟರ್‌, ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟು ಮಾಡಿದ 40% ಸರ್ಕಾರ ಅಭಿಯಾನ ಮಾಧ್ಯಮಗಳ ಗಮನಸೆಳೆದಿತ್ತು. ಕಾಂಗ್ರೆಸ್ ಅಭಿಯಾನ ಹಾಗೂ ಚುನಾವಣಾ ತಂತ್ರಗಾರಿಕೆ ಹಿಂದೆ ಒಂದು ವ್ಯವಸ್ಥಿತವಾದ ತಂಡ ಕೆಲಸ ಮಾಡಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ