Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಎ ಮಂಜು ವಿರುದ್ಧ ರಾಜ್ಯ ಬಿಜೆಪಿ ಶಿಸ್ತುಕ್ರಮ; ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ

ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಮಾಜಿ ಸಚಿವ ಎ ಮಂಜು ವಿರುದ್ಧ ರಾಜ್ಯ ಬಿಜೆಪಿ ಶಿಸ್ತುಕ್ರಮ; ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ
ಎ. ಮಂಜು
Follow us
TV9 Web
| Updated By: ganapathi bhat

Updated on: Nov 23, 2021 | 9:05 PM

ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್​ ​ಗೌಡಗೆ ಕಾಂಗ್ರೆಸ್​ನಿಂದ ಪರಿಷತ್ ಟಿಕೆಟ್ ಹಿನ್ನೆಲೆ ಕರ್ನಾಟಕ ಬಿಜೆಪಿ ಶಸ್ತು ಕ್ರಮ ಕೈಗೊಂಡಿದೆ. ಮಾಜಿ ಸಚಿವ ಎ. ಮಂಜು ವಿರುದ್ಧ ರಾಜ್ಯ ಬಿಜೆಪಿ ಕ್ರಮ ಕೈಗೊಂಡಿದೆ. ಮಂಡ್ಯ ಜಿಲ್ಲೆಯ ಜವಾಬ್ದಾರಿಗಳಿಂದ ಎ. ಮಂಜು ಮುಕ್ತಗೊಳಿಸಲಾಗಿದೆ. ಪ್ರಭಾರಿ, ಪಕ್ಷದ ಜವಾಬ್ದಾರಿಗಳಿಂದ ಬಿಜೆಪಿ ಮುಕ್ತಗೊಳಿಸಿದೆ. ಕೊಡಗು ಕ್ಷೇತ್ರದಿಂದ ಮಂಥರ್ ಗೌಡಗೆ ಕಾಂಗ್ರೆಸ್​ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತುಕ್ರಮ ಕೈಗೊಂಡಿದೆ.

ಮಂಡ್ಯ ಜಿಲ್ಲೆಯ ಪಕ್ಷದ ಉಸ್ತುವಾರಿಯಿಂದ ಬಿಡುಗಡೆಗೊಳಿಸಿ ಪತ್ರ ನೀಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಅದ್ಯಕ್ಷ ಲಿಂಗರಾಜ್ ಪಾಟೀಲ್‌ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಇತ್ತೀಚಿನ ಬೆಳವಣಿಗೆಗಳಿಂದ‌‌ ಕೆಲವು ಸಂಶಯಗಳು ಉಂಟಾಗಿವೆ ಎಂದು ಆರೋಪಿಸಿ‌ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗು ಇತರೆ ಎಲ್ಲಾ ಜವಾಬ್ದಾರಿ ಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಎ. ಮಂಜುಗೆ ಪತ್ರ ಬರೆಯಲಾಗಿದೆ.

ಕೊಡಗು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯಲ್ಲಿ ಎ. ಮಂಜು ಪುತ್ರ ಮಂಥರ್ ಗೌಡ ಕಾಂಗ್ರೆಸ್​ನಿಂದ ಸ್ಪರ್ದೆ ಮಾಡಲಿದ್ದಾರೆ. ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಸಾಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪ: ಪಕ್ಷದಿಂದ ಎಂ.ಮಹೇಂದ್ರ ಗೌಡ ಅಮಾನತು

ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನವಿದೆ: ಜಿ ಪರಮೇಶ್ವರ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ