AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಿಎಂ ಆದ ಒಂದೇ ವರ್ಷಕ್ಕೆ ಭ್ರಷ್ಟಾಚಾರ ಬಯಲು; ಟ್ವಿಟರ್​ನಲ್ಲಿ ಚಾಟಿ ಬೀಸಿದ ರಾಜ್ಯ ಬಿಜೆಪಿ

ಸಿದ್ದರಾಮಯ್ಯ ಸ್ಮೃತಿಗೆ ಗರ ಬಡಿದಿದೆಯೇ ಎಂದು ಟ್ವೀಟ್ ಮಾಡಿದೆ. 2014ರ ಮಾ.22ರಂದು ಕೆಪಿಎಸ್ಸಿ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿತ್ತು.

ಸಿದ್ದರಾಮಯ್ಯ ಸಿಎಂ ಆದ ಒಂದೇ ವರ್ಷಕ್ಕೆ ಭ್ರಷ್ಟಾಚಾರ ಬಯಲು; ಟ್ವಿಟರ್​ನಲ್ಲಿ ಚಾಟಿ ಬೀಸಿದ ರಾಜ್ಯ ಬಿಜೆಪಿ
ಬಿಜೆಪಿ
TV9 Web
| Edited By: |

Updated on:Jul 09, 2022 | 11:59 AM

Share

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯ ಬಿಜೆಪಿ (Karnataka BJP) ಕಿಡಿಕಾರಿದ್ದು, ಸಿದ್ದರಾಮಯ್ಯ ಸಿಎಂ ಆದ ಒಂದೇ ವರ್ಷಕ್ಕೆ ಅವರ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿತ್ತು. ಅರ್ಕಾವತಿ, ಕೆಪಿಎಸ್ಸಿ, ವಕ್ಫ್ ಆಸ್ತಿ ಕಬಳಿಕೆ, ಭೂ ಒತ್ತುವರಿ, ಸಿವಿಲ್ ಪೊಲೀಸ್ ನೇಮಕಾತಿ ಹಗರಣ ರಾರಾಜಿಸಿದ್ದವು. ಕಾಂಗ್ರೆಸ್ ವಿರುದ್ಧ ಅಂದೇ ರಾಜ್ಯ ಬಿಜೆಪಿ ಘಟಕ ಧ್ವನಿ ಎತ್ತಿತ್ತು. ಸಿದ್ದರಾಮಯ್ಯ ಸ್ಮೃತಿಗೆ ಗರ ಬಡಿದಿದೆಯೇ ಎಂದು ಟ್ವೀಟ್ ಮಾಡಿದೆ. 2014ರ ಮಾ.22ರಂದು ಕೆಪಿಎಸ್​ಸಿ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿತ್ತು. ಅಂದು ಸಂಜೆಯೇ ನೇಮಕಾತಿ ಹಿಂದಿನ ಕರ್ಮಕಾಂಡದ ಬಂಡವಾಳ ಹೊರಬಿತ್ತು. ಆ ಅಕ್ರಮದಲ್ಲಿ 7 ಮಂದಿಯಷ್ಟೇ ಭಾಗಿ ಎಂದು ತೇಪೆ ಹಚ್ಚಿದ್ರು. ಅದರ ಬೆನ್ನಲ್ಲೇ 362 ಹುದ್ದೆಗಳ ನೇಮಕ ರದ್ದುಗೊಳಿಸಲಿಲ್ಲವೇ? ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್​ಗೆ ಪ್ರಶ್ನಿಸಿದೆ.

ಸಿದ್ದರಾಮಯ್ಯರು ಲೋಕಾಯುಕ್ತ ಸಮಾಧಿ ಮಾಡಿದ್ದಕ್ಕೆ ಬೆಟ್ಟದಷ್ಟು ಪುರಾವೆಗಳಿವೆ. ಬೊಮ್ಮಾಯಿ ಸರ್ಕಾರ ಎಲ್ಲವನ್ನೂ ಬಯಲಿಗೆ ಎಳೆಯಲಿದೆ. ಏರುಧ್ವನಿಯಲ್ಲಿ ಮಾತಾಡಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗಲ್ಲ ಕರಪ್ಟ್​​ ಕಾಂಗ್ರೆಸ್​ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟರ್​ನಲ್ಲಿ ಕಿಡಿಕಾರಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಸಿದ್ದರಾಮಯ್ಯನವರ ಆಪ್ತ ಮಹದೇವ ಪ್ರಸಾದ್ ಸಹಕಾರ ಸಚಿವರಾಗಿದ್ದಾಗ, ಕರ್ನಾಟಕ ಗೃಹ ಮಂಡಳಿ ಬಡವರಿಗೆಂದು ಮೀಸಲಿಟ್ಟಿದ್ದ ನಿವೇಶನಗಳ ಪೈಕಿ ಮೂರ್‍ ನಿವೇಶನಗಳನ್ನು ಅಕ್ರಮವಾಗಿ ಖರೀದಿ ಮಾಡಿರಲಿಲ್ಲವೆ? ಎಂದು ಪ್ರಶ್ನಿಸಿದ ಬಿಜೆಪಿ, ಈ ಸಂಬಂಧ ಚಾಮರಾಜನಗರ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲಾಗಿರಲಿಲ್ಲವೇ? ಸಿದ್ದು ಸ್ಮೃತಿ ಮಂಕಾಗಿದೆಯೇ? ಎಂದು ಕೇಳಿದೆ.

Published On - 11:55 am, Sat, 9 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್