AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವಿಗೆ ಹೂವಿಟ್ಟ ಕಾಂಗ್ರೆಸ್ಸಿಗರು ಚೆನ್ನಾಗಿ ಕಾಣುತ್ತಿದ್ದರು, ಸದಾ ಕಾಲ ಹೂವು ಇಟ್ಟುಕೊಂಡೇ ಇರಲಿ: ಸಿಎಂ ಬೊಮ್ಮಾಯಿ

ಹೂವು ಇಟ್ಟುಕೊಂಡಿದ್ದರಿಂದ ಕಾಂಗ್ರೆಸ್ಸಿಗರು ಚೆನ್ನಾಗಿ ಕಂಡರು. ಆದರೆ ಹಳ್ಳಿಗಳ ಜನರ ಭಾವನೆಗೆ ಕಾಂಗ್ರೆಸ್‌ನವರಿಂದ ಧಕ್ಕೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕಿವಿಗೆ ಹೂವಿಟ್ಟ ಕಾಂಗ್ರೆಸ್ಸಿಗರು ಚೆನ್ನಾಗಿ ಕಾಣುತ್ತಿದ್ದರು, ಸದಾ ಕಾಲ ಹೂವು ಇಟ್ಟುಕೊಂಡೇ ಇರಲಿ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 17, 2023 | 7:21 PM

Share

ಬೆಂಗಳೂರು: ಕಿವಿಗೆ ಹೂವು ಇಟ್ಟುಕೊಂಡಿದ್ದರಿಂದ ಇಂದು ಕಾಂಗ್ರೆಸ್ ನಾಯಕರು (Congress Leaders) ಚೆನ್ನಾಗಿ ಕಾಣುತ್ತಿದ್ದರು. ಹೀಗಾಗಿ ಅವರು ಖಾಯಂ ಆಗಿ ಕಿವಿಗೆ ಹೂವು ಇಟ್ಟುಕೊಂಡು ಓಡಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಇಂದು ತಮ್ಮ ಅಧಿಕಾರವಾಧಿಯ ಕೊನೆಯ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ ಅವರು ಟಿವಿ9 ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಮಾತನಾಡಿ, ಕಾಂಗ್ರೆಸ್​ನವರು ಬಜೆಟ್ ಟೀಕಿಸಲು ಕಿವಿಗೆ ಹೂವು ಇಡುವ ಮೂಲಕ ಹಳ್ಳಿಗಳ ಜನರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಹಳ್ಳಿಗಳಲ್ಲಿ ದೇವರಪೂಜೆ, ತೇರಿನ ವೇಳೆ ಹೂವು ಇಟ್ಟುಕೊಳ್ಳುತ್ತಾರೆ ಎಂದರು.

ಇನ್ನು, ಬಜೆಟ್​ನಲ್ಲಿ ರಾಮನಗರದಲ್ಲಿ ಬೃಹತ್ ರಾಮ ಮಂದಿರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಾಗಿದ್ದು, ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಇಷ್ಟು ವರ್ಷಗಳಿಂದ ರಾಮನಗರದ ಜನತೆ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದರು. ರಾಮನಗರದಲ್ಲಿ ಅಷ್ಟು ನಂಟಿದ್ದು ಮಂದಿರವನ್ನು ಮಾಡಿಲ್ಲ. ಆದರೆ ಈಗ ನಾವು ಘೋಷಣೆ ಮಾಡಿದಾಗ ನಾನೇ ರಾಮನಗರದಲ್ಲಿ ರಾಮಮಂದಿರ ಮಾಡುತ್ತೇನೆ ಎನ್ನುತ್ತಿದ್ದಾರೆ. ಅವರ ಮನಸ್ಸಿನಲ್ಲಿ ರಾಮ ಬಂದಿದ್ದಾನಲ್ಲ ಅಷ್ಟೇ ಸಮಾಧಾನ ಎಂದು ಟಾಂಗ್ ನೀಡಿದರು.

ಇದನ್ನೂ ಓದಿ: ಕರ್ನಾಟಕ ಬಜೆಟ್​​​ನ ಹಲವು ವಿಶೇಷಗಳು

ರಾಮಮಂದಿರ ಬಿಜೆಪಿಯವರು ಘೋಷಣೆ ಮಾಡಿದರೂ ಅದನ್ನು ಕಟ್ಟುವ ಜವಾಬ್ದಾರಿ ನನ್ನ ಮೇಲೆ ಬರಬಹುದು. ಏಕೆಂದರೆ ಮುಂದಿನ ಬಾರಿ ಬಿಜೆಪಿ ಸರ್ಕಾರ ಬರುವುದಿಲ್ಲ, ನನ್ನ ನೇತೃತ್ವದಲ್ಲೇ ಸರ್ಕಾರ ಬರಲಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಕುಮಾರಸ್ವಾಮಿ ಹೀಗೆಯೇ ಮಾತಾಡಿಕೊಂಡು ಇರಲಿ. ರಾಜ್ಯದಲ್ಲಿ ಮತ್ತೆ ನಮ್ಮದೇ ಸರ್ಕಾರ ಬಂದು ರಾಮಮಂದಿರ ನಾವೇ ಕಟ್ಟುತ್ತೇವೆ. ಮಂದಿರ ಲೋಕಾರ್ಪಣೆಗೆ ಕುಮಾರಸ್ವಾಮಿಗೆ ಆಹ್ವಾನ ನೀಡುತ್ತೇವೆ ಎಂದರು.

ಆಗದಿರುವಂತಹ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ

ಚುನಾವಣೆ ಹೊಸ್ತಿಲಲ್ಲಿ ಮಂಡಿಸಿರುವ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಘೋಷಿಸಿರುವ ಯೋಜನೆಗಳನ್ನು ಜನರಿಗೆ ತಲುಪಿಸಲು ಬದ್ಧರಿದ್ದೇವೆ. ಆಗದಿರುವಂತಹ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ಅಧಿಕಾರ, ಹಣಕಾಸು ವಿಕೇಂದ್ರೀಕರಣಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹೆಚ್ಚು ಜನಸಂಖ್ಯೆಯಿರುವ ಗ್ರಾಮ ಪಂಚಾಯಿತಿಗಳಿಗೆ 68 ಲಕ್ಷ ಅನುದಾನ ಘೋಷಿಸಿದ್ದೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Fri, 17 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?