AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರಕ್ಕೆ ಸಜ್ಜಾದ ‘ಕೈ’ ಪಡೆ: ಕಾಂಗ್ರೆಸ್​ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಏ.17ರಂದು ರಾಜ್ಯದ 3 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಂತೆಯೇ, ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್​ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಉಪಸಮರಕ್ಕೆ ಸಜ್ಜಾದ ‘ಕೈ’ ಪಡೆ: ಕಾಂಗ್ರೆಸ್​ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್​ ಧ್ವಜ (ಪ್ರಾತಿನಿಧಿಕ ಚಿತ್ರ)
KUSHAL V
|

Updated on:Mar 25, 2021 | 7:29 PM

Share

ಬೆಂಗಳೂರ: ಏ.17ರಂದು ರಾಜ್ಯದ 3 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಂತೆಯೇ, ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್​ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇತ್ತ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವರಾಜ್ ತುರುವಿಹಾಳ್‌ ನಾಮಪತ್ರ ಸಲ್ಲಿಸಲಿದ್ದಾರೆ. ಬಸವರಾಜ್ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಜೊತೆಗೆ, ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮಾ.30ರಂದು ಮಲ್ಲಮ್ಮ ನಾರಾಯಣರಾವ್ ನಾಮಪತ್ರ ಸಲ್ಲಿಸಲಿದ್ದಾರೆ.

ಜೆಡಿಎಸ್ ಪಕ್ಷದ ಅಭ್ಯರ್ಥಿ ಬೆಂಬಲಿಗರಿಂದ ಹಣ ಹಂಚಿಕೆ ಈ ನಡುವೆ, ಏಪ್ರಿಲ್​ 17ರಂದು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಇರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಬೆಂಬಲಿಗರಿಂದ ಹಣ ಹಂಚಿಕೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೈಯದ್ ಯಸ್ರಬ್ ಅಲಿಖಾದ್ರಿ ಬೆಂಬಲಿಗರು ಹಣ ಹಂಚಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

BDR JDS MONEY 1

ಜೆಡಿಎಸ್​ ಅಭ್ಯರ್ಥಿ ಬೆಂಬಲಿಗರಿಂದ ಹಣ ಹಂಚಿಕೆ

ಅಭ್ಯರ್ಥಿ ಬೆಂಬಲಿಗರು ಬಹಿರಂಗ ಸಭೆಗೆ ಹಣ ಕೊಟ್ಟು ಜನರನ್ನ ಕರೆಸಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಹೀಗಾಗಿ, ಅಲಿಖಾದ್ರಿ ಬೆಂಬಲಿಗರು ಒಬ್ಬರಿಗೆ 500ರಂತೆ ಹಣ ಹಂಚಿದ್ದಾರಂತೆ.

ಮಾ.29ರಂದು ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆ ರಜೆ ಇತ್ತ, ಮಾ.29ರಂದು ಸ್ಥಳೀಯ ಸಂಸ್ಥೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿನ ಸರ್ಕಾರಿ, ಸಹಕಾರಿ ಶಿಕ್ಷಣ ಸಂಸ್ಥೆಗಳ, ಬ್ಯಾಂಕ್​ಗಳ, ಕೈಗಾರಿಕಾ ಸಂಸ್ಥೆಗಳ, ಔದ್ಯಮಿಕ ಸಂಸ್ಥೆಗಳ ಕಾಯಂ, ದಿನಗೂಲಿ ಮತದಾರರಿಗೆ ವೇತನ ಸಹಿತ ರಜೆ ನೀಡಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಆದರೆ, ಇದು ತುರ್ತು ಸೇವೆಗಳ ಮೇಲಿರುವ ನೌಕರರಿಗೆ ಅನ್ವಯಿಸಲ್ಲ ಎಂಬ ಮಾಹಿತಿ ಸಿಕ್ಕಿದೆ.

ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ಆಗಿದೆ. ಬಿಜೆಪಿ ಕೋರ್ ಕಮಿಟಿಗೆ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಬಿ.ಶ್ರೀರಾಮುಲು ಹಾಗೂ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರ್ಪಡೆ ಆಗಿದ್ದಾರೆ. ಕೋರ್ ಕಮಿಟಿ ಸದಸ್ಯರಾಗಿದ್ದ ಸಿ.ಟಿ.ರವಿ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದಾರೆ.

13 ಸದಸ್ಯರ, 3 ವಿಶೇಷ ಆಹ್ವಾನಿತರ ಕಮಿಟಿ ಪುನಾರಚನೆ ಆಗಿದೆ. ಪಕ್ಷದ ವರಿಷ್ಠರು ರಾಜ್ಯದ ಕೋರ್ ಕಮಿಟಿ ಪುನರ್ ರಚಿಸಿದ್ದಾರೆ. ಈ ನಡುವೆ, ಸಚಿವ ಲಿಂಬಾವಳಿ ಮತ್ತು ಶಾಸಕ ಸಿ.ಎಂ.ಉದಾಸಿ ಅವರನ್ನು ಕಮಿಟಿಯಿಂದ ಕೈಬಿಡಲಾಗಿದೆ.

ಇದನ್ನೂ  ಓದಿ:  ರೈತರ ಪ್ರತಿಭಟನೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್: ನಟಿ ಕಂಗನಾ ರಣಾವತ್ ವಿರುದ್ಧದ ಎಫ್ಐಆರ್ ರದ್ದು

Published On - 6:00 pm, Thu, 25 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್