AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಪರ ಸಂಘಟನೆ, ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಕರ್ನಾಟಕ ಸಚಿವ ಸಂಪುಟ ನಿರ್ಧಾರ

ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಕೌನ್ಸಿಲ್​ನಿಂದ ಕೆಲವು ತಿದ್ದುಪಡಿಗೆ ಸೂಚಿಸಲಾಗಿದೆ. ಅವುಗಳಲ್ಲಿ 2 ತಿದ್ದುಪಡಿಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಪಾಟೀಲ್ ತಿಳಿಸಿದರು.

ಕನ್ನಡಪರ ಸಂಘಟನೆ, ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಕರ್ನಾಟಕ ಸಚಿವ ಸಂಪುಟ ನಿರ್ಧಾರ
ಕರ್ನಾಟಕ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ
ಗಣಪತಿ ಶರ್ಮಾ
|

Updated on:Jun 28, 2023 | 3:54 PM

Share

ಬೆಂಗಳೂರು: ಕನ್ನಡಪರ ಸಂಘಟನೆ, ರೈತರು ಹಾಗೂ ಹೋರಾಟಗಾರರ ಮೇಲಿನ ವಿಚಾರಣೆ ಹಂತದಲ್ಲಿರುವ ಕೇಸ್​​ಗಳನ್ನು​ ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ (Karnataka Cabinet) ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಸ್​​ಗಳನ್ನು ಹಿಂಪಡೆಯುವ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಸಚಿವ ಹೆಚ್​ಕೆ ಪಾಟೀಲ್​ ತಿಳಿಸಿದರು. ಕೇಸ್​​ಗಳನ್ನು ಹಿಂಪಡೆಯಲು ಸಂಪುಟ ಉಪಸಮಿತಿ ರಚನೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೃಷ್ಣ, ಕಾವೇರಿ ಸೇರಿದಂತೆ ವಿವಿಧ ನೀರಾವರಿ ವಿವಿಧ ನೀರಾವರಿ ನ್ಯಾಯಾಧಿಕರಣ ಕಾನೂನು ವಿಷಯಗಳ ಅನುಷ್ಠಾನ, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಪುಟ ಉಪಸಮಿತಿ ರಚನೆ ಮಾಡಲಾಗುವುದು. ಆನೇಕಲ್, ಚಂದಾಪುರ ಒಳಚರಂಡಿ ಕಾಮಗಾರಿಗೆ 106 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಪಾಟೀಲ್ ತಿಳಿಸಿದರು.

ಜಿಎಸ್​ಟಿ ಕೌನ್ಸಿಲ್​ ಸೂಚಿಸಿದ 2 ತಿದ್ದುಪಡಿಗಿಲ್ಲ ಸಮ್ಮತಿ

ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಕೌನ್ಸಿಲ್​ನಿಂದ ಕೆಲವು ತಿದ್ದುಪಡಿಗೆ ಸೂಚಿಸಲಾಗಿದೆ. ಅವುಗಳಲ್ಲಿ 2 ತಿದ್ದುಪಡಿಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಪಾಟೀಲ್ ತಿಳಿಸಿದರು. ಸರಕು ಮತ್ತು ಸೇವಾ ತೆರಿಗೆ ಪದ್ಧತಿಯ ಕೆಲವು ತಿದ್ದುಪಡಿಗೆ ಮಾತ್ರ ಒಪ್ಪಿಗೆ ಸೂಚಿಸಲಾಗಿದೆ. ಉಳಿದವು ಜಿಎಸ್​​ಟಿ ಕೌನ್ಸಿಲ್​ನಲ್ಲಿ ಮರು ಪ್ರಸ್ತಾಪ ಆಗಿ ಚರ್ಚೆಗೆ ಬರಲಿವೆ. ಈ ಬಗ್ಗೆ ಮುಂಬರುವ ಅಧಿವೇಶನದಲ್ಲೂ ಪ್ರಸ್ತಾಪ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Anna Bhagya Scheme; ಐದು ಕೆಜಿ ಅಕ್ಕಿ ಬದಲಿಗೆ ಹಣ; ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Wed, 28 June 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!