AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Cabinet: ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ನಾಳೆಯೇ ಅಸ್ತಿತ್ವಕ್ಕೆ: 24 ಮಂದಿಗೆ ಅವಕಾಶ ಸಾಧ್ಯತೆ

ಕರ್ನಾಟಕ ರಾಜ್ಯ ಸಚಿವ ಸಂಪುಟದ ಪಟ್ಟಿ ಅಂತಿಮಗೊಂಡಿದ್ದು ಸಾಕಷ್ಟು ಹೊಸ ಮುಖಗಳು ಸ್ಥಾನಪಡೆದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Karnataka Cabinet: ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ನಾಳೆಯೇ ಅಸ್ತಿತ್ವಕ್ಕೆ: 24 ಮಂದಿಗೆ ಅವಕಾಶ ಸಾಧ್ಯತೆ
ಬಸವರಾಜ ಬೊಮ್ಮಾಯಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 03, 2021 | 7:25 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಆಗಸ್ಟ್​ 4ರ (ಬುಧವಾರ) ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂಬಂಧ ಈಗಾಗಲೇ ಹೈಕಮಾಂಡ್​ನಿಂದ ಪಟ್ಟಿ ರವಾನೆಯಾಗಿದ್ದು, 24 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ಹಸ್ತಾಂತರವಾಗುವವರೆಗೆ ದೆಹಲಿಯಲ್ಲಿಯೇ ಇರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸೂಚನೆ ನೀಡಿದೆ ಎಂದು ಬೊಮ್ಮಾಯಿ ಅವರ ಆಪ್ತರು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕ ರಾಜ್ಯದ ನೂತನ ಸಚಿವ ಸಂಪುಟದ ಪಟ್ಟಿ ಕೊನೆಗೂ ಅಂತಿಮಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ನಾಯಕರು ಸುದೀರ್ಘ ಸಮಾಲೋಚನೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಬೆಳವಣಿಗೆಗಳಲ್ಲಿ ಶಿಗ್ಗಾಂವಿ ವಿಧಾನಸಭೆ ಕ್ಷೇತದ ಶಾಸಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದರು. ಆದರೆ ಸಚಿವ ಸಂಪುಟ ರಚನೆ ಕಗ್ಗಂಟಾಗಿಯೇ ಉಳಿದಿತ್ತು.

ಇದೀಗ ಬಿಜೆಪಿ ಹೈಕಮಾಂಡ್ ಸಂಪುಟ ರಚನೆಗೆ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲಿಯೇ ಸಂಪುಟ ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಗಸ್ಟ್ 4ರಂದು ನಡೆಯಲಿದೆ.

ಹಳಬರು ಮತ್ತು ಹೊಸಬರ ಹದವರಿದ ಮಿಶ್ರಣ ಈ ಸಂಪುಟದ ವೈಶಿಷ್ಟ್ಯ. ಕೆಲ ಹಳಬರು ಅಧಿಕಾರ ಕಳೆದುಕೊಂಡಿದ್ದರೂ, ಹೊಸಬರಿಗೆ ಅಧಿಕಾರ ಸಿಕ್ಕಿದೆ. ಜಾತಿ ಮತ್ತು ಪ್ರಾದೇಶಿಕ ಪ್ರಾತಿನಿಧ್ಯಕ್ಕೆ ಬಿಜೆಪಿ ಹೆಚ್ಚು ಗಮನ ನೀಡಿದೆ. ಇದರ ಜೊತೆಗೆ 2023ರ ಕರ್ನಾಟಕ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಉದ್ದೇಶವನ್ನು ಹೊಸ ಸಂಪುಟ ರಚನೆಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

(Karnataka Cabinet Formation Ministers of Basavaraj Bommai Cabinet to take oath soon)

ಇದನ್ನೂ ಓದಿ: Cabinet Expansion: ಎಲ್ಲಾ ಶಾಸಕರೂ ಸಚಿವರಾಗಲು ಸಾಧ್ಯವಿಲ್ಲ, ಪ್ರಾದೇಶಿಕವಾಗಿ ಸಂಪುಟ ರಚಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ

Published On - 6:15 pm, Tue, 3 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ