AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್! ಏನದು?

ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರ ರಚನೆಗೂ ಮುನ್ನವೇ ಮುಖ್ಯಮಂತ್ರಿ ಆಯ್ಕೆ ವಿಚಾರ ಪಕ್ಷದ ಹೈಕಮಾಂಡ್​ಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿದ್ದು, ಹೈಕಮಾಂಡ್ ಜತೆ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್! ಏನದು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
Ganapathi Sharma
|

Updated on:May 16, 2023 | 7:57 PM

Share

ನವದೆಹಲಿ: ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರ ರಚನೆಗೂ ಮುನ್ನವೇ ಮುಖ್ಯಮಂತ್ರಿ ಆಯ್ಕೆ ವಿಚಾರ ಪಕ್ಷದ ಹೈಕಮಾಂಡ್​ಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿದ್ದು, ಹೈಕಮಾಂಡ್ ಜತೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕೀಯದ ಬೆಳವಣಿಗೆಗಳಿಗೆ ಸಂಬಂಧಿಸಿ ಮಂಗಳವಾರ ಸಂಜೆ ಸಮಾಲೋಚನೆ ನಡೆಸಿದರು.

ಇದೇ ವೇಳೆ, ಶಿವಕುಮಾರ್ ಅವರು ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಾಗಿನಿಂದ ಈವರೆಗೆ ನಡೆದಿರುವ ಸಂಪೂರ್ಣ ರಾಜಕೀಯ ಚಿತ್ರಣವನ್ನು ಖರ್ಗೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರ ಪತನವನ್ನೇ ಟ್ರಂಪ್ ಕಾರ್ಡ್ ಮಾಡಿರುವ ಡಿಕೆ ಶಿವಕುಮಾರ್, 2021ರಲ್ಲಿ ಸರ್ಕಾರ ಬೀಳಲು ಕಾರಣ ಯಾರೆಂದು ನಿಮಗೆ ತಿಳಿದಿದೆ. ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗೆ ನಾನೇ ಕಾರಣ. ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ಕಟ್ಟಿದ್ದೇನೆ ಎಂದು ಖರ್ಗೆ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಲಿತರೆಲ್ಲರೂ ಸಿದ್ದರಾಮಯ್ಯ ಹಿಂದೆ ಇದ್ದಾ ಎಂಬುದು ನಿಮಗೆ ತಿಳಿದಿಲ್ವಾ? ನೀವೇ ಹೇಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಡಿಕೆಶಿ ಪ್ರಶ್ನಿಸಿದ್ದಾರೆ. ಈ ಬಾರಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳು ನಮ್ಮ ಕೈ ಹಿಡಿದಿವೆ. ಇದನ್ನು ಪರಿಗಣಿಸಿ ಈ ಬಾರಿ ನನಗೆ ಅವಕಾಶ ನೀಡಲೇಬೇಕೆಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಹಾಭಾರತ ಕಥೆ ಉಲ್ಲೇಖಿಸಿದ ಡಿಕೆ ಶಿವಕುಮಾರ್, ಹೋರಾಟದಲ್ಲಿ ಯಶಸ್ಸು ಗಳಿಸುವ ಸೂತ್ರವನ್ನು ವಿವರಿಸಿದ್ದು ಹೀಗೆ

ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಪೈಪೋಟಿ ಮುಂದುವರಿದಿರುವ ಮಧ್ಯೆಯೇ, ಕುರುಬ ಸಮುದಾಯದ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಮತ್ತೆ ಸಭೆ ಸೇರಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ. ಡಿಕೆಶಿ ಪರ ಇಂದು ಪಾದಯಾತ್ರೆಗಾಗಿ ಮುಂದಾಗಿದ್ದ ಒಕ್ಕಲಿಗರು ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಪಾದಯಾತ್ರೆ ರದ್ದುಪಡಿಸಿದ್ದರು.

ಕುರುಬ ಸಮುದಾಯದ ಮುಖಂಡರಿಂದ ಪದೇಪದೆ ಒತ್ತಡ ಹಿನ್ನೆಲೆಯಲ್ಲಿ ಇದೀಗ ಒಕ್ಕಲಿಗ ಸಮುದಾಯದ ಮುಖಂಡರಿಂದಲೂ ಆಕ್ರೋಶ ವ್ಯಕ್ತವಾಗುತ್ತಿದೆ. ನಾಳೆಯೊಳಗೆ ಮುಖ್ಯಮಂತ್ರಿ ಯಾರೆಂಬ ತೀರ್ಮಾನ ಆಗದಿದ್ರೆ ಪಾದಯಾತ್ರೆ ನಡೆಸಲು ಒಕ್ಕಲಿಗ ಮುಖಂಡರು ಯೋಜನೆ ರೂಪಿಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಡಿಕೆ ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂಬ ಆಗ್ರಹ ವ್ಯಕ್ತಪಡಿಸಲು ಅವರು ನಿರ್ಧರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Tue, 16 May 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!