AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದಾರೆ. ಒಂದು ವೇಳೆ ಭೇಟಿ ಅವಕಾಶ ಸಿಕ್ಕರೆ ರಾಜ್ಯದ ಕೆಲ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ
ಸಿದ್ದರಾಮಯ್ಯ, ನರೇಂದ್ರ ಮೋದಿ
ರಮೇಶ್ ಬಿ. ಜವಳಗೇರಾ
|

Updated on: Jun 15, 2023 | 3:44 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕನಸಿನ ಯೋಜನೆ ಅನ್ನಭಾಗ್ಯಕ್ಕೆ(Anna Bhagya scheme) ಇದೀಗ ಅಕ್ಕಿ ಕೊರತೆ ಎದುರಾಗಿದೆ. ಅಕ್ಕಿ(Rice) ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ಸಹ ಗರಂ ಆಗಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಅಕ್ಕಿ ಪಾಲಿಟಿಕ್ಸ್ ಜೋರಾಗಿದ್ದು, ಇದರ ನಡುವೆ ಖುದ್ದು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು(Narendra Modi) ಭೇಟಿ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ತಿರುಗೇಟು: ಪ್ರತಿಭಟನೆ ಎಚ್ಚರಿಕೆ

ಹೈಕಮಾಂಡ್‌ ಭೇಟಿಗಾಗಿ ಜೂ.21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಭೇಟಿಗೆ ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅದರಲ್ಲೂ ಮುಖ್ಯವಾಗಿ ಅನ್ನಭಾಗ್ಯಕ್ಕೆ ನೀಡುವ ಅಕ್ಕಿ ಬಗ್ಗೆ ಚರ್ಚೆ ನಡೆಸಲಿದ್ದು, ರಾಜ್ಯ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.  ಆದ್ರೆ,  ಇನ್ನು ಈವರೆಗೂ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳ ಕಚೇರಿಯಿಂದ ಅಧಿಕೃತ ಭೇಟಿ ಬಗ್ಗೆ ಸಮಯವಕಾಶದ ಬಗ್ಗೆ ಮಾಹಿತಿ ಬಂದಿಲ್ಲ. ಅವಕಾಶ ದೊರೆತ ತಕ್ಷಣ ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಅನ್ನಭಾಗ್ಯ ಯೋಜನೆ ಜಾರಿಗಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್​ ಟನ್ ಹೆಚ್ಚುವರಿ​ ಅಕ್ಕಿ ಬೇಕು. ಹೆಚ್ಚುವರಿ ಅಕ್ಕಿ ಪಡೆಯಲು ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಿತ್ತು. ಜೂನ್‌ 12 ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಎಫ್‌ಸಿಐ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿತ್ತಂತೆ. ಆದ್ರೆ ಈಗ ಉಲ್ಟಾ ಹೊಡೆಯುತ್ತಿದೆ ಅಕ್ಕಿ ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸಹ ಗರಂ ಆಗಿದ್ದು, ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಈ ಅಕ್ಕಿ ಗಲಾಟೆ ನಡುವೆ ಖುದ್ದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಹೆಚ್ಚುವರಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಅವರು ಏನು ಹೇಳಲಿದ್ದಾರೆ ಎನ್ನುವುದು ಕುತೂಃಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್