AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ಟಾಸ್ಕ್​: ಮುನಿಸು ಶಮನಕ್ಕೆ ಇಂದಿನಿಂದ ಸಚಿವರು-ಶಾಸಕರ ಜೊತೆ ಸಿದ್ದರಾಮಯ್ಯ ಸಭೆ

ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ವಿಚಾರ ತಾರಕ್ಕೇರಿದ ಬೆನ್ನಲ್ಲೇ, ಶಾಸಕರ ಅಹವಾಲು ಆಲಿಕೆಗೆ ಸಿಎಂ ಹಾಗೂ ಡಿಸಿಎಂ ಅಖಾಡಕ್ಕಿಳಿದಿದ್ದಾರೆ.

ಹೈಕಮಾಂಡ್ ಟಾಸ್ಕ್​: ಮುನಿಸು ಶಮನಕ್ಕೆ ಇಂದಿನಿಂದ ಸಚಿವರು-ಶಾಸಕರ ಜೊತೆ ಸಿದ್ದರಾಮಯ್ಯ ಸಭೆ
ಸಂಗ್ರಹ ಚಿತ್ರ
TV9 Web
| Edited By: |

Updated on: Aug 07, 2023 | 7:56 AM

Share

ಬೆಂಗಳೂರು, (ಆಗಸ್ಟ್ -7): ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಪಾಲಿಗೆ ಆಶಾಕಿರಣ ಜೀವಂತವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Elections 2024) ಕನಿಷ್ಠ 20 ಸ್ಥಾನ ಗೆಲ್ಲುವ ಗುರಿ ನೀಡಿರುವ ಹೈಕಮಾಂಡ್ ಕರ್ನಾಟಕವನ್ನೇ ಲೋಕಸಭೆಯ ಅಡಿಪಾಯ ಮಾಡಿಕೊಳ್ಳಲು ಹೊರಟಿದೆ. ಹೀಗಾಗಿ ಕಾಂಗ್ರೆಸ್ ತಂತ್ರಗಳ ಮೇಲೆ ತಂತ್ರ ಹೆಣೆಯುತ್ತಿದೆ. ಅದಕ್ಕೂ ಮೊದಲ ಪಕ್ಷದಲ್ಲಿರುವ ಅಸಮಾಧಾನಗಳನ್ನು ಶಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಹೌದು.. ಒಂದೊಂದಾಗಿ ತಂತ್ರಗಾರಿಕೆ ಹೆಣೆಯುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಕೂಡ ಮಾಡಿದ್ದಾರೆ. ಶಾಸಕರ ಮುನಿಸು ಶಮನಕ್ಕೆ ಇಂದಿನಿಂದ (ಆಗಸ್ಟ್ 07) ಸಿಎಂ ಹಾಗೂ ಡಿಸಿಎಂ ನೇತೃತ್ರವದಲ್ಲಿ ಸಭೆ ನಡೆಯಲಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲ್ಯಾನ್, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಮಹತ್ವದ ಹುದ್ದೆ?

ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ವಿಚಾರ ತಾರಕ್ಕೇರಿದ ಬೆನ್ನಲ್ಲೇ, ಶಾಸಕರ ಅಹವಾಲು ಆಲಿಕೆಗೆ ಸಿಎಂ ಹಾಗೂ ಡಿಸಿಎಂ ಅಖಾಡಕ್ಕಿಳಿದಿದ್ದಾರೆ. ಆರು ಜಿಲ್ಲೆಗಳ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಭೆ ನಡೆಯಲಿದೆ. ಆರು ಜಿಲ್ಲೆಗಳ ಸಚಿವರು, ಶಾಸಕರ ಸಮಸ್ಯೆ ಆಲಿಸಲು ಸಿಎಂ ಸಭೆ ಕರೆದಿದ್ದಾರೆ. , ಇಂದು ಫಸ್ಟ್​ ಡೇ 6 ಜಿಲ್ಲೆಗಳ 31 ಶಾಸಕರು, ಸಚಿವರ ಜೊತೆ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಸಭೆ ಮಾಡಲಿದ್ದಾರೆ . ಈ ವೇಳೆ ಶಾಸಕರ ದೂರು, ಅಹವಾಲು ಆಲಿಸಲಿದ್ದಾರೆ.

ಸಚಿವರು, ಶಾಸಕರ ಜೊತೆ ಮುಖಾಮುಖಿ

ಇಂದು(ಆಗಸ್ಟ್ 07) ಬೆಳಗ್ಗೆ 11 ಕ್ಕೆ ತುಮಕೂರು, ಯಾದಗಿರಿ, ಚಿತ್ರದುರ್ಗ ಜಿಲ್ಲೆ ಉಸ್ತುವಾರಿ ಸಚಿವರು ಶಾಸಕರ ಜೊತೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 4ಕ್ಕೆ ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಯಲಿದೆ. ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊಂದಿದ್ದು, ಆರು ಜಿಲ್ಲೆಗಳ ಎಲ್ಲ ಶಾಸಕರೂ ಕೂಡ ಸಭೆಯಲ್ಲಿ ಭಾಗಿಯಾಗೋ ನಿರೀಕ್ಷೆ ಇದೆ. ಉಸ್ತುವಾರಿ ಸಚಿವರಿಗೆ ಶಾಸಕರ ಬೇಡಿಕೆಗಳ ಬಗ್ಗೆ ಸಿಎಂ ನೇರವಾಗಿ ಗಮನಕ್ಕೆ ತರಲಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು