AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬೊಬ್ಬ ಸಚಿವರನ್ನೇ ಭೇಟಿಯಾಗುತ್ತಿರುವ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಭೇಟಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರೇ ಅಸಮಾಧಾನ ಹೊರಹಾಕುತ್ತಿದ್ದು, ಸಚಿವರು, ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯರಿಗೆ ಪತ್ರದ ಮೂಲಕ ದೂರು ನೀಡುತ್ತಿದ್ದಾರೆ. ಇನ್ನೊಂದೆಡೆ ಬಿಕೆ ಹರಿಪ್ರಸಾದ್ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಸಿದ್ದರಾಮಯ್ಯ ಅವರು ಒಬ್ಬೊಬ್ಬ ಸಚಿವರನ್ನೇ ಭೇಟಿಯಾಗಿ ರಹಸ್ಯವಾಗಿ ಮಾತುಕತೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಒಬ್ಬೊಬ್ಬ ಸಚಿವರನ್ನೇ ಭೇಟಿಯಾಗುತ್ತಿರುವ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಭೇಟಿ
ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎನ್ ಚಲುವರಾಯಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 15, 2023 | 10:39 AM

Share

ಬೆಂಗಳೂರು, ಸೆ.15: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬೆನ್ನಲ್ಲೇ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N.Chaluvarayaswamy) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭೇಟಿಯಾಗಿ ರಹಸ್ಯವಾಗಿ ಮಾತುಕತೆ ನಡೆಸುತ್ತಿದ್ದಾರೆ. ಒಬ್ಬೊಬ್ಬ ಸಚಿವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸುತ್ತಿರುವ ಸಿದ್ದರಾಮಯ್ಯ ಅವರ ನಡೆ ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ಒಬ್ಬ ಮುಖ್ಯಮಂತ್ರಿ ಯಾರನ್ನೇ ಭೇಟಿಯಾಗಲು ಹೋಗುವ ಸಂದರ್ಭದಲ್ಲಿ ಭದ್ರತೆಯೊಂದಿಗೆ ತೆರಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ಭದ್ರತೆ ಇಲ್ಲದೆಯೇ ನೈಟ್ ಡಿನ್ನರ್ ನೆಪದಲ್ಲಿ ಸದ್ದಿಲ್ಲದೆ ಒಬ್ಬಬ್ಬ ಆಪ್ತ ಸಚಿವರನ್ನು ಭೇಟಿಯಾಗುತ್ತಿದ್ದಾರೆ. ಭೇಟಿ ವೇಳೆ ಇಬ್ಬರ ಹೊರತಾಗಿ ಬೇರೆ ಯಾರು ಕೂಡ ಜೊತೆಗಿಲ್ಲ.

ಸಚಿವ ಚಲುವರಾಯಸ್ವಾಮಿ ಅವರ ಜೆಪಿ‌ ನಗರ‌ ನಿವಾಸಕ್ಕೆ ರಾತ್ರಿ ಊಟದ ನೆಪದಲ್ಲಿ ನಿನ್ನೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಇತ್ತಿಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ, ವಸ್ತುಸ್ಥಿತಿ ವಿವರಿಸಿ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ; ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರೇ ಅಸಮಾಧಾನ ಹೊರಹಾಕುತ್ತಿದ್ದು, ಸಚಿವರು, ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯರಿಗೆ ಪತ್ರದ ಮೂಲಕ ದೂರು ನೀಡುತ್ತಿದ್ದಾರೆ. ಇನ್ನೊಂದೆಡೆ ಬಿಕೆ ಹರಿಪ್ರಸಾದ್ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆ ನಡುವೆ ಸಿದ್ದರಾಮಯ್ಯ ಅವರ ಸಚಿವರನ್ನು ರಹಸ್ಯ ಭೇಟಿ ನಡೆಸುತ್ತಿದ್ದಾರೆ. ತನ್ನ ಆಡಳಿತದ ವಿರುದ್ಧ ಮುನಿಸು ವ್ಯಕ್ತವಾಗುತ್ತಿರುವ ನಡುವೆ ತಮ್ಮ ಆಪ್ತ ಸಚಿವರ ವಿಶ್ವಾಸಕ್ಕೆ ತೆಗೆದುಕೊಳ್ಳುವ ಭೇಟಿ ಇದಾಗಿದೆಯೇ? ಅಥವಾ ಲೋಕಸಭೆ ಚುನಾವಣೆಗೆ ಸದ್ದಿಲ್ಲದೆ ಆಪ್ತ ವಲಯವನ್ನು ಸಜ್ಜುಗೊಳಿಸುವ ಭೇಟಿ ಇದಾಗಿದೆಯೇ ಎಂಬದು ಪ್ರಶ್ನೆಯಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?