AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು

ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಸಿಎಂ ಗಾದಿ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ತನ್ನನ್ನು ನಿರಾಶೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 140 ಶಾಸಕರ ಬೆಂಬಲ ತನಗಿದೆ ಎಂದು ಹೇಳಿದ ಅವರು, ಇದು ಮಾಧ್ಯಮದಲ್ಲಿ ಚರ್ಚಿಸುವ ವಿಷಯವಲ್ಲ. ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮ ಎಂದಿದ್ದಾರೆ.

ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು
ದಾವೋಸ್​​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​
ಪ್ರಸನ್ನ ಹೆಗಡೆ
|

Updated on: Jan 22, 2026 | 2:43 PM

Share

ಬೆಂಗಳೂರು, ಜನವರಿ 22: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​, ತಮ್ಮ ನಾಯಕರು ತಮಗೆ ನಿರಾಸೆ ಮಾಡಲಾರರು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆ ಮೂಲಕ ದಾವೋಸ್​​ನಲ್ಲಿಯೂ ಕರ್ನಾಟಕದಲ್ಲಿನ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾದಂತಾಗಿದೆ.

‘ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ’

ಹೌದು, ಎನ್​​ಡಿಟಿವಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಡಿಸಿಎಂ ಡಿಕೆಶಿ, ಎಲ್ಲ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದು ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ, ಇದು ನಮ್ಮಲ್ಲಿಯೇ ಆಗಬೇಕಾದ ಚರ್ಚೆ. ನಾನು ಸದಾ ಧನಾತ್ಮಕವಾಗಿದ್ದು, ಆಸೆಯ ಮೇಲೆಯೇ ಬದುಕುತ್ತೇನೆ. ಶ್ರಮಕ್ಕೆ ಯಾವಾಗಲೂ ಫಲ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ನಾಯಕರು ಖಂಡಿತವಾಗಿಯೂ ನನ್ನನ್ನು ನಿರಾಶೆಗೊಳಿಸುವುದಿಲ್ಲ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ!

‘140 ಶಾಸಕರ ಬೆಂಬಲ ತನಗಿದೆ’

ಡಿಕೆಶಿ ಅವರು ಸಿಎಂ ಆಗಲು ಶಾಸಕರ ಬೆಂಬಲ ಇಲ್ಲವಂತಲ್ಲ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು, ಹಾಗೆ ಹೇಳಿದ್ದು ಯಾರು? ಕೆಪಿಸಿಸಿ ಅಧ್ಯಕ್ಷನಾದ ತನಗೆ ಪಕ್ಷದ 140 ಶಾಸಕರ ಬೆಂಬಲವೂ ಇದೆ. ಹೀಗಾಗಿ ಸಂಖ್ಯೆಗಳ ಬಗ್ಗೆ ತೀರ್ಮಾನ ಬೇಕಿಲ್ಲ. ನಾವು ತಂಡವಾಗಿ ಕೆಲಸ ಮಾಡುತ್ತಿದ್ದು ಸಿದ್ದರಾಮಯ್ಯ ಮತ್ತು ತನಗೆ ಇಬ್ಬರಿಗೂ ಎಲ್ಲ ಶಾಸಕರ ಬೆಂಬಲ ಇದೆ. ನಾವು ಇಬ್ಬರೂ ಕೂತು ಚರ್ಚಿಸಿದ್ದು, ಎಲ್ಲವನ್ನೂ ಪಕ್ಷದ ನಾಯಕರ ತೀರ್ಮಾನಕ್ಕೆ ಬಿಟ್ಟಿದ್ದೇವೆ. ಸಿದ್ದರಾಮಯ್ಯ ಮತ್ತು ತಾನು ಇಬ್ಬರೂ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು