AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ; ಸೋನಿಯಾಗೆ ಕರ್ನಾಟಕ ವಾಣಿಜ್ಯ ವಾಹನಗಳ ಚಾಲಕರ ಒಕ್ಕೂಟ ಪತ್ರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ; ಸೋನಿಯಾಗೆ ಕರ್ನಾಟಕ ವಾಣಿಜ್ಯ ವಾಹನಗಳ ಚಾಲಕರ ಒಕ್ಕೂಟ ಪತ್ರ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: May 15, 2023 | 6:10 PM

Share

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. ಡಿಕೆ ಶಿವಕುಮಾರ್ ಅವರು ಚುನಾವನೆಗೂ ಮುನ್ನ ಸ್ವಯಂಪ್ರೇರಣೆಯಿಂದ ನಮ್ಮನ್ನು ಸಂಪರ್ಕಿಸಿ ನಮ್ಮ ಚಾಲಕ ಸಮುದಾಯಕ್ಕೆ ಸಹಾಯ ಮಾಡುತ್ತಾರೆ ಎಂಬ ಭರವಸೆಯನ್ನು ನೀಡಿದ್ದರು. ಅಂದಿನಿಂದ ಶಿವಕುಮಾರ್ ಸರ್ ನಿರಂತರವಾಗಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ ಎಂದು ಚಾಲಕರ ಒಕ್ಕೂಟ ಪತ್ರದಲ್ಲಿ ಉಲ್ಲೇಖಿಸಿದೆ.

ಚಾಲಕರ ಸಮುದಾಯಕ್ಕೆ ಉಜ್ವಲ ಭವಿಷ್ಯವನ್ನು ತರುತ್ತೇನೆ ಎಂದು ಭರವಸೆ ನೀಡಿದ ಡಿಕೆ ಶಿವಕುಮಾರ್, ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಹಲವಾರು ಸಭೆಗಳನ್ನೂ ನಡೆಸಿದ್ದಾರೆ. ಇದು ನಮ್ಮ ಚಾಲಕ ಸಮುದಾಯವು ಅವರನ್ನು ಬೆಂಬಲಿಸಲು ಕಾರಣವಾಯಿತು. ಏಕೆಂದರೆ ಅವರು ನಮಗೆ ಏಕೈಕ ಭರವಸೆಯಾಗಿದ್ದಾರೆ ಎಂದು ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ತನ್ವೀರ್ ಪಾಷಾ ಪತ್ರದಲ್ಲಿ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಕರ್ನಾಟಕದ ಸಾರಥಿಯನ್ನಾಗಿ ನೋಡಲು ಚಾಲಕರು ಬಯಸುತ್ತಿದ್ದಾರೆ ಎಂದು ಪಾಷಾ ಹೇಳಿದ್ದಾರೆ. ಸಮಾಜದಲ್ಲಿ ಗೌರವಾನ್ವಿತ ಸ್ಥಾನದೊಂದಿಗೆ ನಮಗೆ ಉತ್ತಮ ಜೀವನಕ್ಕೆ ಒದಗಿಸಬಲ್ಲ ಏಕೈಕ ವ್ಯಕ್ತಿ ಅವರು. ನಾವೆಲ್ಲರೂ ಅವರ ಸೂಚನೆ, ಸಿದ್ಧಾಂತಗಳ ಪ್ರಕಾರ ನಮ್ಮ ಪ್ರೀತಿಯ ನಾಯಕ ಶಿವಕುಮಾರ್ ಅವರ ಪರ ಶ್ರಮಿಸಿದ್ದೇವೆ. ಪಕ್ಷ ಮತ್ತು ಪಕ್ಷದ ಮುಖಂಡರಿಂದ ಏನನ್ನೂ ನಿರೀಕ್ಷಿಸದೆ ಸ್ವಯಂಪ್ರೇರಿತರಾಗಿ ಕೆಲಸ ಮಾಡಿದ್ದೇವೆ. ಶಿವಕುಮಾರ್ ನಮಗೆ ಮುಖ್ಯಮಂತ್ರಿಯಾಗಬೇಕು ಎಂಬುದು ಪಕ್ಷ ಮತ್ತು ಪಕ್ಷದ ನಾಯಕರ ಏಕೈಕ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ; ಡಿಕೆ ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಜಯಿಸುವ ಮೂಲಕ ಭರ್ಜರಿ ಬಹುಮತ ಪಡೆದಿದೆ. ಮುಖ್ಯಮಂತ್ರಿ ಹುದ್ದೆಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ