ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ; ಸೋನಿಯಾಗೆ ಕರ್ನಾಟಕ ವಾಣಿಜ್ಯ ವಾಹನಗಳ ಚಾಲಕರ ಒಕ್ಕೂಟ ಪತ್ರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ; ಸೋನಿಯಾಗೆ ಕರ್ನಾಟಕ ವಾಣಿಜ್ಯ ವಾಹನಗಳ ಚಾಲಕರ ಒಕ್ಕೂಟ ಪತ್ರ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್

Updated on: May 15, 2023 | 6:10 PM

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. ಡಿಕೆ ಶಿವಕುಮಾರ್ ಅವರು ಚುನಾವನೆಗೂ ಮುನ್ನ ಸ್ವಯಂಪ್ರೇರಣೆಯಿಂದ ನಮ್ಮನ್ನು ಸಂಪರ್ಕಿಸಿ ನಮ್ಮ ಚಾಲಕ ಸಮುದಾಯಕ್ಕೆ ಸಹಾಯ ಮಾಡುತ್ತಾರೆ ಎಂಬ ಭರವಸೆಯನ್ನು ನೀಡಿದ್ದರು. ಅಂದಿನಿಂದ ಶಿವಕುಮಾರ್ ಸರ್ ನಿರಂತರವಾಗಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ ಎಂದು ಚಾಲಕರ ಒಕ್ಕೂಟ ಪತ್ರದಲ್ಲಿ ಉಲ್ಲೇಖಿಸಿದೆ.

ಚಾಲಕರ ಸಮುದಾಯಕ್ಕೆ ಉಜ್ವಲ ಭವಿಷ್ಯವನ್ನು ತರುತ್ತೇನೆ ಎಂದು ಭರವಸೆ ನೀಡಿದ ಡಿಕೆ ಶಿವಕುಮಾರ್, ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಹಲವಾರು ಸಭೆಗಳನ್ನೂ ನಡೆಸಿದ್ದಾರೆ. ಇದು ನಮ್ಮ ಚಾಲಕ ಸಮುದಾಯವು ಅವರನ್ನು ಬೆಂಬಲಿಸಲು ಕಾರಣವಾಯಿತು. ಏಕೆಂದರೆ ಅವರು ನಮಗೆ ಏಕೈಕ ಭರವಸೆಯಾಗಿದ್ದಾರೆ ಎಂದು ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ತನ್ವೀರ್ ಪಾಷಾ ಪತ್ರದಲ್ಲಿ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಕರ್ನಾಟಕದ ಸಾರಥಿಯನ್ನಾಗಿ ನೋಡಲು ಚಾಲಕರು ಬಯಸುತ್ತಿದ್ದಾರೆ ಎಂದು ಪಾಷಾ ಹೇಳಿದ್ದಾರೆ. ಸಮಾಜದಲ್ಲಿ ಗೌರವಾನ್ವಿತ ಸ್ಥಾನದೊಂದಿಗೆ ನಮಗೆ ಉತ್ತಮ ಜೀವನಕ್ಕೆ ಒದಗಿಸಬಲ್ಲ ಏಕೈಕ ವ್ಯಕ್ತಿ ಅವರು. ನಾವೆಲ್ಲರೂ ಅವರ ಸೂಚನೆ, ಸಿದ್ಧಾಂತಗಳ ಪ್ರಕಾರ ನಮ್ಮ ಪ್ರೀತಿಯ ನಾಯಕ ಶಿವಕುಮಾರ್ ಅವರ ಪರ ಶ್ರಮಿಸಿದ್ದೇವೆ. ಪಕ್ಷ ಮತ್ತು ಪಕ್ಷದ ಮುಖಂಡರಿಂದ ಏನನ್ನೂ ನಿರೀಕ್ಷಿಸದೆ ಸ್ವಯಂಪ್ರೇರಿತರಾಗಿ ಕೆಲಸ ಮಾಡಿದ್ದೇವೆ. ಶಿವಕುಮಾರ್ ನಮಗೆ ಮುಖ್ಯಮಂತ್ರಿಯಾಗಬೇಕು ಎಂಬುದು ಪಕ್ಷ ಮತ್ತು ಪಕ್ಷದ ನಾಯಕರ ಏಕೈಕ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ; ಡಿಕೆ ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಜಯಿಸುವ ಮೂಲಕ ಭರ್ಜರಿ ಬಹುಮತ ಪಡೆದಿದೆ. ಮುಖ್ಯಮಂತ್ರಿ ಹುದ್ದೆಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us