AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಮುನ್ನುಡಿ; 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

28 ಲೋಕಸಭಾ ಕ್ಷೇತ್ರಗಳಿಗೆ 28 ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಪ್ರತಿ ಕ್ಷೇತ್ರದಲ್ಲೂ 2 ಅಥವಾ 3 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಹೊಣೆಗಾರಿಕೆ ನೀಡಲಾಗಿದೆ.

ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಮುನ್ನುಡಿ; 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 24, 2023 | 10:45 AM

Share

ಬೆಂಗಳೂರು, ಸೆ.24: ಲೋಕಸಭಾ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಭರ್ಜರಿ ತಯಾರಿ ನಡೆಸುತ್ತಿದೆ. ಏಳು ತಿಂಗಳು ಮಾತ್ರ ಬಾಕಿ ಉಳಿದಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕೃತವಾಗಿ ತಯಾರಿ ಆರಂಭಿಸಿದೆ. ರಾಜ್ಯದ 28 ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ. 28 ಮಂದಿ ಸಚಿವರಿಗೆ ಕ್ಷೇತ್ರಗಳ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಕ್ಷೇತ್ರಗಳಲ್ಲಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ಸೂಚನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಎಲ್ಲ ಸಚಿವರಿಗೂ ಸ್ವಂತ ಜಿಲ್ಲೆಯನ್ನು ಬಿಟ್ಟು ಬೇರೆ ಬೇರೆ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ.

28 ಲೋಕಸಭಾ ಕ್ಷೇತ್ರಗಳಿಗೆ 28 ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಪ್ರತಿ ಕ್ಷೇತ್ರದಲ್ಲೂ 2 ಅಥವಾ 3 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಹೊಣೆಗಾರಿಕೆ ನೀಡಲಾಗಿದೆ. ಆಯಾ ಕ್ಷೇತ್ರಗಳಿಗೆ ನೇಮಕಗೊಂಡ ವೀಕ್ಷಕರು ತಮಗೆ ನೀಡಿರುವ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಸಂಭಾವ್ಯ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಿ, ಕೆಪಿಸಿಸಿಗೆ ವರದಿ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ

ಯಾವ ಕ್ಷೇತ್ರಕ್ಕೆ ಯಾರು ವೀಕ್ಷಕರು?

  1. ಬಾಗಲಕೋಟೆ -ಪ್ರಿಯಾಂಕ್ ಖರ್ಗೆ
  2. ಬೆಂಗಳೂರು ಕೇಂದ್ರ -ಎನ್.ಎಸ್.ಬೋಸರಾಜು
  3. ಬೆಂಗಳೂರು ಉತ್ತರ -ಡಾ.ಜಿ.ಪರಮೇಶ್ವರ
  4. ಬೆಂಗಳೂರು ಗ್ರಾಮಾಂತರ -ಕೆ.ವೆಂಕಟೇಶ್
  5. ಬೆಂಗಳೂರು ದಕ್ಷಿಣ -ಶರಣ ಪ್ರಕಾಶ ಪಾಟೀಲ್
  6. ಬೆಳಗಾವಿ -ಶಿವರಾಜ್ ತಂಗಡಗಿ
  7. ಗುಲ್ಬರ್ಗಾ -ನಾಗೇಂದ್ರ
  8. ಬೀದರ್ -ಸಂತೋಷ್ ಲಾಡ್
  9. ವಿಜಯಪುರ -ಸತೀಶ್ ಜಾರಕಿಹೊಳಿ
  10. ಚಾಮರಾಜನಗರ -ದಿನೇಶ್ ಗುಂಡೂರಾವ್
  11. ಚಿಕ್ಕಬಳ್ಳಾಪುರ -ಜಮೀರ್ ಅಹಮದ್ ಖಾನ್
  12. ಚಿಕ್ಕೋಡಿ -ಡಿ.ಸುಧಾಕರ್
  13. ಚಿತ್ರದುರ್ಗ -ಡಾ.ಹೆಚ್.ಸಿ.ಮಹದೇವಪ್ಪ
  14. ದಕ್ಷಿಣ ಕನ್ನಡ -ಮಧು ಬಂಗಾರಪ್ಪ
  15. ದಾವಣಗೆರೆ -ಈಶ್ವರ ಖಂಡ್ರೆ
  16. ಧಾರವಾಡ -ಲಕ್ಷ್ಮೀ ಹೆಬ್ಬಾಳ್ಕರ್ಬ
  17. ಬಳ್ಳಾರಿ -ಚೆಲುವರಾಯಸ್ವಾಮಿ
  18. ಹಾಸನ -ಎನ್ ಚಲುವರಾಯಸ್ವಾಮಿ
  19. ಹಾವೇರಿ -ಎಸ್.ಎಸ್.ಮಲ್ಲಿಕಾರ್ಜುನ
  20. ಕೋಲಾರ -ರಾಮಲಿಂಗಾರೆಡ್ಡಿ
  21. ಕೊಪ್ಪಳ -ಆರ್.ಬಿ.ತಿಮ್ಮಾಪುರ
  22. ಮಂಡ್ಯ -ಡಾ.ಎ.ಸಿ.ಸುಧಾಕರ್ಮೈ
  23. ಮೈಸೂರು -ಭೈರತಿ ಸುರೇಶ್
  24. ರಾಯಚೂರು -ಕೆ.ಎಚ್.ಮುನಿಯಪ್ಪ
  25. ಶಿವಮೊಗ್ಗ -ಕೆ.ಎನ್.ರಾಜಣ್ಣ
  26. ತುಮಕೂರು -ಕೃಷ್ಣ ಭೈರೇಗೌಡ
  27. ಉಡುಪಿ – ಚಿಕ್ಕಮಗಳೂರು -ಮಂಕಾಳ ವೈದ್ಯ
  28. ಉತ್ತರ ಕನ್ನಡ -ಎಚ್.ಕೆ.ಪಾಟೀಲ್.

    ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಸಚಿವರಿಗೆ ನೀಡಲಾಗಿದೆ. ಹಾಘೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ವೀಕ್ಷಕ ಸಚಿವರಿಗೆ ಸೂಚಿಸಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಈಗಾಗಲೇ ಒಂದು ಸುತ್ತಿನ ಮಾಹಿತಿ ಕಲೆ ಹಾಕಿದ್ದಾರೆ. ಕ್ಷೇತ್ರದಲ್ಲಿರುವ ಆ್ಯಕ್ಟಿವ್ ಅಭ್ಯರ್ಥಿಗಳು ಯಾರು? ಸಮುದಾಯವಾರು ಪ್ರಾಬಲ್ಯ ಯಾರಿಗಿದೆ? ಅಭ್ಯರ್ಥಿ ಬದಲಾವಣೆ ಯಿಂದ ಲಾಭ ನಷ್ಟಗಳೆನು? ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಪ್ರತಿ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಟ್ಟು ಸಚಿವರು ಸಭೆ ನಡೆಸಬೇಕು. ಕ್ಷೇತ್ರದ ವ್ಯಾಪ್ತಿಯ ಶಾಸಕರು, ಸಂಬಂಧಪಟ್ಟ ಪ್ರಮುಖ ನಾಯಕರ ಜೊತೆಗೆ ಸೂಕ್ತ ಸಮಾಲೋಚನೆ ನಡೆಸಬೇಕು. ಬಳಿಕ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿ ಕೆಪಿಸಿಸಿಗೆ ರವಾನಿಸಬೇಕು ಎಂದು ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಟಾಸ್ಕ್ ನೀಡಿದ್ದಾರೆ. ಹಿಂದೆ ವಿಧಾನಸಭೆ ಚುನಾವಣೆ ವೇಳೆ ಇದೇ ಮಾದರಿ ಅನುಸರಿಸಿ ಕಾಂಗ್ರೆಸ್ ಸಕ್ಸಸ್ ಕಂಡಿತ್ತು. ಕಾರ್ಯಾಧ್ಯಕ್ಷರಿಗೆ ಅಭ್ಯರ್ಥಿ ಆಯ್ಕೆಯ ಸಭೆಗಳನ್ನು ನಡೆಸಿ ವರದಿ ನೀಡುವಂತೆ ಹಿಂದೆ ಪ್ಲ್ಯಾನ್ ಮಾಡಿದ್ದ ರೀತಿ ಈ ಬಾರಿಯೂ ಪ್ಲ್ಯಾನ್ ಮಾಡಲಾಗಿದೆ. ಪ್ಲ್ಯಾನ್ ವರ್ಕೌಟ್ ಆಗಿದ್ದ ಕಾರಣಕ್ಕೆ ಅದೇ ಮಾದರಿಯಲ್ಲಿ ಲೋಕಸಭೆಗೂ ರಾಜ್ಯ ಕಾಂಗ್ರೆಸ್ ಘಟಕ ಮುನ್ನುಡಿ ಬರೆದಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:58 am, Sun, 24 September 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ