ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ

Congress CLP Meeting: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆಯಿತು. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಏನೇನು ಚರ್ಚೆಯಾಯಿತು? ಏನೇನೂ ಸೂಚನೆ ನೀಡಲಾಯಿತು ಎಂಬ ವಿವರ ಇಲ್ಲಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ
Edited By:

Updated on: Feb 15, 2024 | 6:54 AM

ಬೆಂಗಳೂರು, ಫೆಬ್ರವರಿ 15: ಮುಂಬರುವ ರಾಜ್ಯಸಭೆ ಚುನಾವಣೆಗೆ (Rajya Sabha Election) ಪಕ್ಷವು 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಎಲ್ಲರೂ ಮತದಾನ ಮಾಡಬೇಕು ಎಂದು ಕಾಂಗ್ರೆಸ್ (Congress) ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಸಭೆ ಚುನಾವಣೆ, ಗ್ಯಾರಂಟಿ ಅನುಷ್ಠಾನ, ಲೋಕಸಭೆ ಚುನಾವಣೆ ಸಿದ್ಧತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯವಾಗಿ ಸಿಎಲ್​ಪಿ ಸಭೆಯಲ್ಲಿ 3 ಪ್ರಮುಖ ವಿಚಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಸಿಎಲ್​​ಪಿ ಮೀಟಿಂಗ್​ನಲ್ಲಿ ನಡೆದ ಚರ್ಚೆ ಹೀಗಿದೆ

  1. ರಾಜ್ಯಸಭೆಗೆ 5ನೇ ಅಭ್ಯರ್ಥಿ ಹಾಕಿದರೆ ಎಲ್ಲರೂ ವೋಟ್ ಹಾಕಬೇಕು.
  2. ಚುನಾವಣೆಗೆ ಮುನ್ನ ನಾಯಕರು ಸೂಚಿಸುವ ರೆಸಾರ್ಟ್​ಗೆ ಬರಬೇಕು.
  3. ಸಿಎಂ, ಡಿಸಿಎಂ, ಸಚಿವರು, ಶಾಸಕರು ರೆಸಾರ್ಟ್​ಗೆ ಬಂದು ಇರಬೇಕು.
  4. ಗ್ಯಾರಂಟಿ ಸಮಿತಿ ಘೋಷಣೆಮಾಡಿ ಆದೇಶಿಸಿದ್ದರೂ ಸಮತಿ ರಚಿಸಿಲ್ಲ.
  5. ಗ್ಯಾರಂಟಿ ಸಮಿತಿ ರಚನೆಗೆ ಉಸ್ತುವಾರಿ ಸಚಿವರು, ಶಾಸಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲರಿಂದ ಗಡುವು.
  6. 2 ವಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಹೆಸರು ಶಿಫಾರಸುಮಾಡಬೇಕು.
  7. ವಿಧಾನಸಭಾ ಕ್ಷೇತ್ರವಾರು ಸಮಿತಿಗೆ ಹೆಸರು ಕಳುಹಿಸುವಂತೆ ಸೂಚನೆ.
  8. ಶಾಸಕರು ಹೆಸರು ಕಳುಹಿಸುವಂತೆ ರಣದೀಪ್ ಸುರ್ಜೇವಾಲ ಸೂಚನೆ.
  9. ಜಿಲ್ಲಾ ಸಮಿತಿಗೆ ಸಚಿವರು ಹೆಸರು ಅಂತಿಮಗೊಳಿಸಿ ಪಟ್ಟಿ ರವಾನಿಸಬೇಕು.
  10. ಕಾಂಗ್ರೆಸ್ ಕಾರ್ಯಕರ್ತರ ಪಟ್ಟಿ ನೀಡುವಂತೆ ಸಚಿವರಿಗೆ 2 ದಿನ ಗಡುವು.
  11. ರಾಜ್ಯ ಸಮಿತಿಗೆ 2 ದಿನದೊಳಗೆ ಹೆಸರು ಅಂತಿಮಗೊಳಿಸುವಂತೆ ಸೂಚನೆ.
  12. 15 ಜಿಲ್ಲೆ ವಿಂಗಡಿಸಿ ಸಿಎಂ, ಡಿಸಿಎಂ ಇಬ್ಬರೂ ಸಮಾವೇಶ ಮಾಡಬೇಕು.
  13. ಸಿಎಂಗೆ 15 ಜಿಲ್ಲೆಗಳಲ್ಲಿ ಸಮಾವೇಶ ಆಯೋಜನೆ, ಪ್ರಚಾರ ಜವಾಬ್ದಾರಿ.
  14. ಡಿಸಿಎಂಗೆ 15 ಜಿಲ್ಲೆಗಳಲ್ಲಿ ಸಮಾವೇಶ ಆಯೋಜನೆ, ಪ್ರಚಾರ ಜವಾಬ್ದಾರಿ.
  15. ಶಾಸಕರ ಮುಂದೆ ತಮ್ಮ ಜವಾಬ್ದಾರಿಗಳನ್ನು ತಿಳಿಸಿದ ಸಿಎಂ, ಡಿಸಿಎಂ.

ಇದನ್ನೂ ಓದಿ: ಕಾಂಗ್ರೆಸ್​ ಸ್ಕ್ರೀನಿಂಗ್ ಕಮಿಟಿ ಸಭೆ ಅಂತ್ಯ: ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಇನ್ನು ಲೋಕಸಭೆ ಹಾಗೂ ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ಮತ್ತೊಂದು ಸುತ್ತಿನ ಸಭೆ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಅವರು ಬುಧವಾರ ರಾತ್ರಿ ಈ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us