AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ದಾವಣಗೆರೆ ದಕ್ಷಿಣ ಉಪಚುನಾವಣೆ ವರದಿ ಕಾಂಗ್ರೆಸ್ ಹೈಕಮಾಂಡ್‌ಗೆ ತಲುಪಿದ ನಂತರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅಲ್ಪಸಂಖ್ಯಾತ ಶಾಸಕರಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಶಿಸ್ತು ಕ್ರಮದ ಭೀತಿ ಎದುರಾಗಿದೆ. ಅಬ್ದುಲ್ ಜಬ್ಬಾರ್ ಮತ್ತು ನಜೀರ್ ಅಹ್ಮದ್ ರಾಜೀನಾಮೆ ನೀಡಿದ್ದು, ಸಚಿವ ಸಂಪುಟ ಪುನಾರಚನೆಯಲ್ಲಿ ಜಮೀರ್ ಖಾನ್ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ. ಖರ್ಗೆ ಜಾಣ ಮೌನ ವಹಿಸಿದ್ದಾರೆ.

ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?
TV9 Web
| Edited By: |

Updated on:Apr 11, 2026 | 4:35 PM

Share

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣಿಗಳು ನಡೆದಿದೆ. ಕಾಂಗ್ರೆಸ್​​ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆ ಇದೆ. ದಾವಣಗೆರೆ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್​​ ಕೈಸೇರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯ ಬೆನ್ನಲ್ಲೇ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮದ ತೂಗುಕತ್ತಿ ನೇತಾಡುತ್ತಿದೆ.

ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಆತಂಕವನ್ನು ವರದಿ ಎತ್ತಿ ತೋರಿಸಿದೆ. ಪ್ರಮುಖವಾಗಿ ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ಆ್ಯಕ್ಷನ್ ಆರಂಭವಾಗುವ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷವು ಸಸ್ಪೆಂಡ್ ಮಾಡುವ ಮುನ್ಸೂಚನೆ ಅರಿತ ಜಬ್ಬಾರ್, ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಸದ್ಯದ ಬೆಳವಣಿಗೆಗಳು ಸಚಿವ ಜಮೀರ್ ಅಹ್ಮದ್ ಅವರನ್ನೇ ಗುರಿಯಾಗಿಸಿಕೊಂಡಿವೆ. ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಜಮೀರ್ ಅವರ ‘ತಲೆದಂಡ’ವಾಗುವುದು ಬಹುತೇಕ ನಿಶ್ಚಿತ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿವೆ. ಇತ್ತ ಈ ಭಾರಿ ಬೆಳವಣಿಗೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತರ ಕಾಯ್ದುಕೊಂಡಿದ್ದಾರೆ. ದಾವಣಗೆರೆ ವಿದ್ಯಮಾನ ಮತ್ತು ರಾಜೀನಾಮೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನನಗೇನೂ ಗೊತ್ತಿಲ್ಲ” ಎನ್ನುವ ಮೂಲಕ ಜಾಣ್ಮೆಯ ಮೌನ ವಹಿಸಿದ್ದಾರೆ.

ವರದಿ: ಈರಣ್ಣ ಬಸವ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Sat, 11 April 26

Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್