AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು

ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Anil Kalkere
| Edited By: |

Updated on: Oct 28, 2023 | 11:24 AM

Share

ಬೆಂಗಳೂರು ಅ.28: ದಲಿತ ನಾಯಕನನ್ನು ಸಿಎಂ (CM) ಮಾಡುವ ವಿಚಾರ ರಾಜ್ಯ ಕಾಂಗ್ರೆಸ್​ನಲ್ಲಿ ಚುನಾವಣೆ ಪೂರ್ವದಿಂದಲೂ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ನಲ್ಲಿ (Congress) ದಲಿತ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಹಿಂದೆ ಕಾಂಗ್ರೆಸ್​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ (BK Hariprasad) ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಕೂಡ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ಬೂದಿ ಮುಚ್ಚಿದ ಕೆಂಡದಂತಿದ್ದ ಈ ವಿಚಾರ ಶುಕ್ರವಾರ ನಡೆದ ಸಿಎಂ, ಡಿಸಿಎಂ ಮತ್ತು ಸಚಿವರ ಸಭೆ ಬಳಿಕ ಮುನ್ನೆಲೆಗೆ ಬಂದಿದೆ. ಹೌದು ದಲಿತ ನಾಯಕನನ್ನು ಮುಖ್ಯಮಂತ್ರಿ ಮಾಡುವ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಮಾತನಾಡಿ ದಲಿತ ಸಿಎಂ ವಿಚಾರ ನಮ್ಮ ವ್ಯಾಪ್ತಿಯಲ್ಲಿ ಬರಲ್ಲ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾಗುತ್ತಾರೋ, ಮುಂದುವರಿಯುತ್ತಾರೋ ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ನಮ್ಮ ಮಟ್ಟದಲ್ಲಿ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಆಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಸಭೆ ನಡೆಸಿರುವ ವಿಚಾರವಾಗಿ ಮಾತನಾಡಿದ ಅವರು ಗೃಹ ಸಚಿವರು ತಮ್ಮ ನಿವಾಸದಲ್ಲಿ ಔತಣಕೂಟ ಇಟ್ಟುಕೊಂಡಿದ್ದರು. ಮುಂದಿನ ಬಾರಿ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ನಮ್ಮ ಮನೆಗೆ ಆಹ್ವಾನಿಸುತ್ತೇನೆ. ಎಲ್ಲರನ್ನೂ ಕರೆದು ಊಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಎರಡೂ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಇನ್ನು ಗೃಹ ಸಚಿವ ಜಿ ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಮಾತನಾಡಿ ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ. ಔತಣಕೂಟದ ಜೊತೆ ಕೆಲವು ರಾಜಕೀಯ ವಿಚಾರ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Anil Kalkere
Anil Kalkere
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ