Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು

ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Follow us
Anil Kalkere
| Updated By: ವಿವೇಕ ಬಿರಾದಾರ

Updated on: Oct 28, 2023 | 11:24 AM

ಬೆಂಗಳೂರು ಅ.28: ದಲಿತ ನಾಯಕನನ್ನು ಸಿಎಂ (CM) ಮಾಡುವ ವಿಚಾರ ರಾಜ್ಯ ಕಾಂಗ್ರೆಸ್​ನಲ್ಲಿ ಚುನಾವಣೆ ಪೂರ್ವದಿಂದಲೂ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ನಲ್ಲಿ (Congress) ದಲಿತ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಹಿಂದೆ ಕಾಂಗ್ರೆಸ್​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ (BK Hariprasad) ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಕೂಡ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ಬೂದಿ ಮುಚ್ಚಿದ ಕೆಂಡದಂತಿದ್ದ ಈ ವಿಚಾರ ಶುಕ್ರವಾರ ನಡೆದ ಸಿಎಂ, ಡಿಸಿಎಂ ಮತ್ತು ಸಚಿವರ ಸಭೆ ಬಳಿಕ ಮುನ್ನೆಲೆಗೆ ಬಂದಿದೆ. ಹೌದು ದಲಿತ ನಾಯಕನನ್ನು ಮುಖ್ಯಮಂತ್ರಿ ಮಾಡುವ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಮಾತನಾಡಿ ದಲಿತ ಸಿಎಂ ವಿಚಾರ ನಮ್ಮ ವ್ಯಾಪ್ತಿಯಲ್ಲಿ ಬರಲ್ಲ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾಗುತ್ತಾರೋ, ಮುಂದುವರಿಯುತ್ತಾರೋ ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ನಮ್ಮ ಮಟ್ಟದಲ್ಲಿ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಆಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಸಭೆ ನಡೆಸಿರುವ ವಿಚಾರವಾಗಿ ಮಾತನಾಡಿದ ಅವರು ಗೃಹ ಸಚಿವರು ತಮ್ಮ ನಿವಾಸದಲ್ಲಿ ಔತಣಕೂಟ ಇಟ್ಟುಕೊಂಡಿದ್ದರು. ಮುಂದಿನ ಬಾರಿ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ನಮ್ಮ ಮನೆಗೆ ಆಹ್ವಾನಿಸುತ್ತೇನೆ. ಎಲ್ಲರನ್ನೂ ಕರೆದು ಊಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಎರಡೂ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಇನ್ನು ಗೃಹ ಸಚಿವ ಜಿ ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಮಾತನಾಡಿ ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ. ಔತಣಕೂಟದ ಜೊತೆ ಕೆಲವು ರಾಜಕೀಯ ವಿಚಾರ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್