ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು

ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Follow us
| Updated By: ವಿವೇಕ ಬಿರಾದಾರ

Updated on: Oct 28, 2023 | 11:24 AM

ಬೆಂಗಳೂರು ಅ.28: ದಲಿತ ನಾಯಕನನ್ನು ಸಿಎಂ (CM) ಮಾಡುವ ವಿಚಾರ ರಾಜ್ಯ ಕಾಂಗ್ರೆಸ್​ನಲ್ಲಿ ಚುನಾವಣೆ ಪೂರ್ವದಿಂದಲೂ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ನಲ್ಲಿ (Congress) ದಲಿತ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಹಿಂದೆ ಕಾಂಗ್ರೆಸ್​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ (BK Hariprasad) ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಕೂಡ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ಬೂದಿ ಮುಚ್ಚಿದ ಕೆಂಡದಂತಿದ್ದ ಈ ವಿಚಾರ ಶುಕ್ರವಾರ ನಡೆದ ಸಿಎಂ, ಡಿಸಿಎಂ ಮತ್ತು ಸಚಿವರ ಸಭೆ ಬಳಿಕ ಮುನ್ನೆಲೆಗೆ ಬಂದಿದೆ. ಹೌದು ದಲಿತ ನಾಯಕನನ್ನು ಮುಖ್ಯಮಂತ್ರಿ ಮಾಡುವ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಮಾತನಾಡಿ ದಲಿತ ಸಿಎಂ ವಿಚಾರ ನಮ್ಮ ವ್ಯಾಪ್ತಿಯಲ್ಲಿ ಬರಲ್ಲ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾಗುತ್ತಾರೋ, ಮುಂದುವರಿಯುತ್ತಾರೋ ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ನಮ್ಮ ಮಟ್ಟದಲ್ಲಿ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಆಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಸಭೆ ನಡೆಸಿರುವ ವಿಚಾರವಾಗಿ ಮಾತನಾಡಿದ ಅವರು ಗೃಹ ಸಚಿವರು ತಮ್ಮ ನಿವಾಸದಲ್ಲಿ ಔತಣಕೂಟ ಇಟ್ಟುಕೊಂಡಿದ್ದರು. ಮುಂದಿನ ಬಾರಿ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ನಮ್ಮ ಮನೆಗೆ ಆಹ್ವಾನಿಸುತ್ತೇನೆ. ಎಲ್ಲರನ್ನೂ ಕರೆದು ಊಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಎರಡೂ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಇನ್ನು ಗೃಹ ಸಚಿವ ಜಿ ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಮಾತನಾಡಿ ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ. ಔತಣಕೂಟದ ಜೊತೆ ಕೆಲವು ರಾಜಕೀಯ ವಿಚಾರ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್