AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu: ಕೋಟಿ ಕುಬೇರ ಕೆಜಿಎಫ್‌ ಬಾಬುನನ್ನು ಪಕ್ಷದಿಂದ ಅಮಾನತು ಮಾಡಿದ ಕಾಂಗ್ರೆಸ್

ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಕೆಜಿಎಫ್​ ಬಾಬು ಅವರನ್ನು ಕಾಂಗ್ರೆಸ್​ನಿಂದ ಅಮಾನತು ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

KGF Babu: ಕೋಟಿ ಕುಬೇರ ಕೆಜಿಎಫ್‌ ಬಾಬುನನ್ನು ಪಕ್ಷದಿಂದ ಅಮಾನತು ಮಾಡಿದ ಕಾಂಗ್ರೆಸ್
ಕೆಜಿಎಫ್‌ ಬಾಬು
TV9 Web
| Edited By: |

Updated on:Jan 07, 2023 | 9:01 AM

Share

ಬೆಂಗಳೂರು: ಕೋಟಿ ಕುಬೇರ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್‌ ಬಾಬು (KGF Babu) ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ. ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಕೆಜಿಎಫ್​ ಬಾಬು ಅವರನ್ನು ಅಮಾನತುಗೊಳಿಸಿ ಕೆಪಿಸಿಸಿ ಶಿಸ್ತು ಸಮಿತಿ(Karnataka congress disciplinary committee) ಇಂದು(ಜನವರಿ 06) ಆದೇಶ ಹೊರಡಿಸಿದೆ. ಕೆಜಿಎಫ್​ ಬಾಬು ನಡೆಯಿಂದ ಈ ಹಿಂದೆ ನೀಡಲಾಗಿದ್ದ 3 ಶೋಕಾಸ್​ ನೋಟಿಸ್​ಗೆ ಉತ್ತರ ನೀಡಿರಲಿಲ್ಲ. ಇದೀಗ ಅಂತಿಮವಾಗಿ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಮುಖ್ಯಸ್ಥ ರಹಮಾನ್ ಖಾನ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ಹೀಗೇ ಆಡಿದರೆ 80 ಸೀಟೂ ಬರೋಲ್ಲ ಎಂದ ಕೆಜಿಎಫ್ ಬಾಬು; ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ವಾಗ್ವಾದ

ಕಾಂಗ್ರೆಸ್ ನವರು ಅತಿಯಾದ ಆತ್ಮವಿಶ್ವಾಸದಲ್ಲಿ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸೀಟ್ ಬರಲ್ಲ ಎಂದ‌ ಕೆಪಿಸಿಸಿ ಕಚೇರಿಯಲ್ಲೇ ಕೆಜಿಎಫ್ ಬಾಬು ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಕೆಜಿಎಫ್​ ಬಾಬು ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಆಕಾಂಕ್ಷಿಯಾಗಿರುವ ಕೆಜಿಎಫ್ ಬಾಬು ಹಾಗೂ ಕಾಂಗ್ರೆಸ್‌ ಮುಖಂಡ ಮನೋಹರ್ ನಡುವೆ ಕೆಪಿಸಿಸಿ ಕಚೇರಿಯಲ್ಲಿ ಜಟಾಪಟಿ ನಡೆದಿತ್ತು.

ಕೆ.ಜಿ.ಎಫ್‌ ಬಾಬು ಅಲಿಯಾಸ್‌ ಯೂಸುಫ್ ಶರೀಫ್. ಕಳೆದ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಅಭ್ಯರ್ಥಿ. ತನ್ನ ಆಸ್ತಿ 1,741 ಕೋಟಿ ಎಂದು ಘೋಷಿಸಿಕೊಂಡು ದೇಶಾದ್ಯಂತ ಸುದ್ದಿ ಮಾಡಿದ್ದ ವ್ಯಕ್ತಿ ಇವರು. ಆದರೆ ಇದೀಗ ಈ ಕುಬೇರ ಕಾಂಗ್ರೆಸ್‌ ಪಾಲಿಗೆ ತಲೆನೋವಾಗಿದ್ದಾರೆ. ಕಾರಣ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಪಾಲಿನ ಕಾಂಟ್ರವರ್ಸಿ ಕಿಂಗ್ ಆಗುತ್ತಿರುವ ಕೋಟಿ ಕುಬೇರ ಕೆಜಿಎಫ್ ಬಾಬು; ಡಿಕೆಶಿಗೆ ಮುಜುಗರ

ಕೆಜಿಎಫ್‌ ಬಾಬು ಮೂಲತಃ ಉದ್ಯಮಿ. ಐಶಾರಾಮಿ ಕಾರು ದಾಖಲೆ ವಿಚಾರವಾಗಿ ಅವರು ಮುನ್ನಲೆಗೆ ಬಂದಿದ್ದರು. ನಂತರದಲ್ಲಿ ಅವರ ಕಾರು ಶೋಕಿ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದಾದ ಬಳಿಕ ಇದೇ ಸಂದರ್ಭದಲ್ಲಿ ಅವರ ಕೌಟುಂಬಿಕ ವಿವಾದ ಮುನ್ನಲೆಗೆ ಬಂದಿತ್ತು. ಮಾಧ್ಯಮಗಳ ಮುಂದೆ ಅವರು ಕಣ್ಣೀರು ಹಾಕಿದ್ದರು.

ಈ ನಡುವೆ ಕೆಜಿಎಫ್‌ ಬಾಬು ಮನೆಗೆ ಜಾರಿ ನಿರ್ದೇಶನಾಲಯ ಇ.ಡಿ ದಾಳಿ ನಡೆಸಿತ್ತು. ಸತತ 18 ಗಂಟೆಗಳ ಕಾಲ ತಪಾಸಣೆ ನಡೆಸಿತ್ತು. ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು.

Published On - 9:02 pm, Fri, 6 January 23

Follow Us
Web contact
Web contact

TV9 Kannada

Read More
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿ ರಿಯಾಕ್ಷನ್ ಏನು
ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿ ರಿಯಾಕ್ಷನ್ ಏನು