AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ 80% ಲೂಟಿ ಮಾಡುತ್ತಿದ್ದು, ಮುಖ್ಯಮಂತ್ರಿಗಳೆ ಪೇ ಸಿದ್ದರಾಮಯ್ಯ ಅಂತ ಪೋಸ್ಟರ್ ಅಂಟಿಸಿಕೊಳ್ಳಿ: ಆರ್​ ಅಶೋಕ್ ವಾಗ್ದಾಳಿ​​

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್​ ಸರ್ಕಾರದ ಮೇಲೂ 40% ಕಮಿಷನ್​ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಕಳೆದ ಎಂಟು ತಿಂಗಳಿಂದ ನಿರಂತರವಾಗಿ ಸರ್ಕಾರ ಕಮಿಷನ್ ಪಡೆಯುತ್ತಿದೆ. ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ಗುತ್ತಿಗೆದಾರರು ಆರೋಪ ಮಾಡುತ್ತಿದ್ದಾರೆ. ಇದು ಲೂಟಿಕೋರರ ಸರ್ಕಾರ ಎಂಬುದು ಸಾಬೀತು ಆಗಿದೆ. 80% ಲೂಟಿ ಮಾಡುತ್ತಿರುವುದು ನಿಜ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಆರೋಪ ಮಾಡಿದರು.

ಸರ್ಕಾರ 80% ಲೂಟಿ ಮಾಡುತ್ತಿದ್ದು, ಮುಖ್ಯಮಂತ್ರಿಗಳೆ ಪೇ ಸಿದ್ದರಾಮಯ್ಯ ಅಂತ ಪೋಸ್ಟರ್ ಅಂಟಿಸಿಕೊಳ್ಳಿ: ಆರ್​ ಅಶೋಕ್ ವಾಗ್ದಾಳಿ​​
ವಿಪಕ್ಷ ನಾಯಕ ಆರ್​ ಅಶೋಕ್​
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Feb 10, 2024 | 2:45 PM

Share

ಬೆಂಗಳೂರು, ಫೆಬ್ರವರಿ 10: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಕಾಂಗ್ರೆಸ್​ ಸರ್ಕಾರದ (Congress Government) ಮೇಲೂ 40% ಕಮಿಷನ್​ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಕಳೆದ ಎಂಟು ತಿಂಗಳಿಂದ ನಿರಂತರವಾಗಿ ಸರ್ಕಾರ ಕಮಿಷನ್ ಪಡೆಯುತ್ತಿದೆ. ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ಗುತ್ತಿಗೆದಾರರು ಆರೋಪ ಮಾಡುತ್ತಿದ್ದಾರೆ. ಇದು ಲೂಟಿಕೋರರ ಸರ್ಕಾರ ಎಂಬುದು ಸಾಬೀತು ಆಗಿದೆ. ಎಲ್ಲ ಮಂತ್ರಿಗಳು ಅವರವರ ಹೆಸರಲ್ಲಿ ಟ್ಯಾಕ್ಸ್​ ಹಾಕಿಕೊಂಡಿದ್ದಾರೆ. ಡೆವಲಪರ್​ಗಳು, ಗುತ್ತಿಗೆದಾರರು ಹೇಳುವ ಪ್ರಕಾರ ಸ್ಕ್ವೇರ್ ಫೀಟ್ ಜಾಗಕ್ಕೆ ಹಣ ನಿಗದಿ ಮಾಡಿದ್ದರೆ. ಸ್ಕ್ವೇರ್ ಫೀಟ್​ ಜಾಗಕ್ಕೆ 75 ರೂ. ಹಣ ನಿಗದಿಪಡಿಸಿದ್ದಾರೆ. 4000 ಚದರ ಅಡಿ ಮೇಲೆ ಬಿಲ್ಡಿಂಗ್ ಕಟ್ಟುವವರಿಂದ ಹಣ ವಸೂಲಿ ಮಾಡಿದ್ದಾರೆ. 80% ಲೂಟಿ ಮಾಡುತ್ತಿರುವುದು ನಿಜ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ (R Ashok) ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಪೇಸಿಎಂ ಪೋಸ್ಟರ್ ಅಂಟಿಸಿದ್ದರು. ನಿಮ್ಮ ಮುಖದ ಮೇಲೆ ಯಾವ ಪೋಸ್ಟರ್ ಅಂಟಿಸಿಕೊಳ್ಳುತ್ತೀರಾ? ಈಗ ಪೇಸಿದ್ದರಾಮಯ್ಯ ಅಂತಾ ಪೋಸ್ಟರ್ ಅಂಟಿಸಿಕೊಳ್ಳುತ್ತೀರಾ? ಪಂಚ ರಾಜ್ಯ ಚುನಾವಣೆಗೆ ದುಡ್ಡು ಲೂಟಿ ಮಾಡಿ ಕಳಿಸಿದ್ದಾಯ್ತು. ಈಗ ಲೋಕಸಭಾ ಚುನಾವಣೆಗೂ ಲೂಟಿ ಮಾಡಿ ಕಳಿಸುತ್ತಿದ್ದೀರಾ?ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮತ್ತೆ ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರರ ಸಂಘ: ಈ ಬಾರಿ ಅಧಿಕಾರಿಗಳೇ ಹಣ ಕೇಳ್ತಿದ್ದಾರೆ ಎಂದ ಕೆಂಪಣ್ಣ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮಿಷನ್ ಇದೆ ಅಂತ ಸರ್ಕಾರದ ಮೇಲೆ ಗುರುತರ ಆರೋಪ‌ ಮಾಡಿದ್ದಾರೆ. ಭ್ರಷ್ಟಾಚಾರದ ಆರೋಪ ಇರುವ ಸರ್ಕಾರಕ್ಕೆ ಮುಂದುವರಿಯುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ನಿಜವಾಗಿಯೂ ಪ್ರಾಮಾಣಿಕರಾಗಿದ್ದರೆ, ಕೆಂಪಣ್ಣ ಅವರು ಆರೋಪಿಸಿದ್ದನ್ನು ಸಿಬಿಐ ತನಿಖೆಗೆ ನೀಡಲಿ. ಕೆಂಪಣ್ಣ ಯಾರ ಯಾರ ಬಗ್ಗೆ ಹೇಳಿದ್ದಾರೆ ಅವರೆಲ್ಲರದ್ದೂ ತನಿಖೆಗೆ ನೀಡಿ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ನಾವು ಅಸೆಂಬ್ಲಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಿದ ನಂತರ ಕಾಂಗ್ರೆಸ್​ನವರು ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್​ ಅವರು ಹಾದಿ ಬೀದಿಯಲ್ಲಿ ನಿಂತು ಉತ್ತರ ನೀಡಿಲ್ಲ. ನಿಮಗೆ ಧಮ್​ ಇದ್ದರೆ ಸಚಿವೆ ನಿರ್ಮಲಾ ಸೀತಾರಾಮನ್​ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಿ ಎಂದು​ ಸವಾಲು ಹಾಕಿದರು.

ದೇಶದ್ರೋಹಿಗಳನ್ನ ಗುಂಡಿಕ್ಕಿ‌ ಕೊಲ್ಲುವ ಕಾನೂನು ತರಬೇಕು ಎಂಬ್​ ಕೆಎಸ್​ ಈಶ್ವರಪ್ಪ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದು ಕೆ.ಎಸ್​.ಈಶ್ವರಪ್ಪ ಅವರ ವೈಯಕ್ತಿಕ ಹೇಳಿಕೆ. ಕೆ.ಎಸ್​. ಈಶ್ವರಪ್ಪ ಅವರು ಯಾರೋ ಒಬ್ಬರಿಗೆ ಗುಂಡಿಕ್ಕಿ ಎಂದು ಹೇಳಿಲ್ಲ. ದೇಶದ್ರೋಹ ಕೆಲಸ ಮಾಡುವವರ ವಿರುದ್ಧ ಕಾನೂನು ತನ್ನಿ ಅಂದಿದ್ದಾರೆ ಎಂದರು.

ಇದನ್ನೂ ಓದಿ: ಅಧಿಕಾರಿಗಳು ಕಮೀಶನ್ ಕೇಳಿದ್ದರೆ ಕೆಂಪಣ್ಣನವರು ನಾಗಮೋಹನ್ ದಾಸ್ ಸಮಿತಿಗೆ ದೂರು ಸಲ್ಲಿಸಲಿ: ಸಿದ್ದರಾಮಯ್ಯ

ಸುಧಾಕರ್​​ ಭ್ರಮ ನಿರಸನ ಆಗುವುದು ಬೇಡ

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ. ಕೆ. ಸುಧಾಕರ್​​ಗೆ ಟಿಕೆಟ್ ಕೊಡಲ್ಲ ಅಂತಲೂ ಹೇಳಿಲ್ಲ ಕೊಡುತ್ತೇವೆ ಅಂತಲೂ ಹೇಳಿಲ್ಲ. ಪಾರ್ಟಿ ಇನ್ನೂ ಏನೂ ನಿರ್ಧಾರವೇ ಮಾಡಿಲ್ಲ. ಸುಧಾಕರ ಈಗಲೇ ಭ್ರಮ ನಿರಸನ ಆಗುವುದು ಬೇಡ. ಪಾರ್ಟಿ ನಾಯಕರು ಗೆಲ್ಲುವ ಮಾನದಂಡದ ಮೇಲೆ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಮಂಗಳೂರಿನಲ್ಲಿ ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂ ವಿರುದ್ಧ ಹೋರಾಟಕ್ಕೆ ಎಸ್​ಡಿಪಿಐ ಕರೆ ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಇದು ದೇಶದ್ರೋಹದ ಹೇಳಿಕೆ. ಪಿಎಫ್​ಐ ಬ್ಯಾನ್ ಆಗಿದೆ. ಎಸ್​ಸಿಪಿಐನ ಒಂದು ಅಂಗ ಸಂಸ್ಥೆ ಪಿಎಫ್​ಐ. ಪಿಎಫ್​ಐನಲ್ಲಿರುವವರು ಈಗ ಎಸ್​ಸಿಪಿಐಗೆ ಬಂದು ಇಲ್ಲಿ ಸೇರಿಕೊಂಡಿದ್ದಾರೆ. ಕೋರ್ಟ್ ಆದೇಶದ ಪ್ರಕಾರ ಅಲ್ಲಿ ಪೂಜೆ ಆಗುತ್ತಿದೆ. ಜ್ಞಾನವಾಪಿ ಅದು ಹಿಂದು ದೇವಾಲಯ ಅಂತ ಕುರುಹು ಸಿಕ್ಕಿದೆ. ಇದಕ್ಕೆ ಎಲ್ಲಾ ಪೂರಕ ದಾಖಲೆ ಸಿಕ್ಕಿದೆ. ರಾಮನ ಮಂದಿರ ಕಟ್ಟಿರುವುದು ಕೋರ್ಟ್ ಆದೇಶದ ಮೇರೆಗೆ. ಅಲ್ಲಿ ಉರ್ದು, ಅರೇಬಿಕ್ ಸಾಕ್ಷಿ ಸಿಕ್ಕಿದ್ದರೆ ಹೇಳಬಹುದಿತ್ತು. ಆದರೆ ಜ್ಞಾನವಾಪಿಯಲ್ಲಿ ಸಿಕ್ಕಿರುವುದು ಹಿಂದೂ ದೇವಾಲಯದ ಪೂರವೆಗಳು. ಕೋರ್ಟ್ ತೀರ್ಪು ನಿಮಗೆ ಒಪ್ಪಿಗೆ‌ ಇಲ್ಲ ಅಂದರೆ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಹೋಗಬಹುದು‌ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:45 pm, Sat, 10 February 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!