ಚಿಂತಿಸಬೇಡಿ ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ: ಪ್ರತಾಪ್ ಸಿಂಹಗೆ ಭರವಸೆ ನೀಡಿದ ಕಾಂಗ್ರೆಸ್​

ಬಿಜೆಪಿ ಸರ್ಕಾರದ ಭಷ್ಟ್ರಾಚಾರಗಳನ್ನು ತನಿಖೆ ಮಾಡಿಸಿ ಎಂದಿದ್ದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್​ ಪ್ರತಿಕ್ರಿಯಿಸಿದ್ದು, ಚಿಂತಿಸಬೇಡಿ ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ ಎಂದು ಭರವಸೆ ನೀಡಿದೆ.

ಚಿಂತಿಸಬೇಡಿ ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ: ಪ್ರತಾಪ್ ಸಿಂಹಗೆ ಭರವಸೆ ನೀಡಿದ ಕಾಂಗ್ರೆಸ್​
ಸಂಸದ ಪ್ರತಾಪ್​ ಸಿಂಹ
Follow us
|

Updated on: Jun 14, 2023 | 5:32 PM

ಬೆಂಗಳೂರು: ಈ ಹಿಂದೆ ಕಾಂಗ್ರೆಸ್​ನವರು ಬಿಜೆಪಿ ಸರ್ಕಾರದ ಮೇಲೆ ಸರಣಿ ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದರು. ಇದೀಗ ಅವರದ್ದೇ ಸರ್ಕಾರ ಇದೆ ತನಿಖೆ ಮಾಡಲಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಹೇಳಿದ್ದು, ಇದಕ್ಕೆ ಇದೀಗ ಕಾಂಗ್ರೆಸ್​ ಸಹ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ಪ್ರತಾಪ್ ಸಿಂಹ ಅವರೇ, ಚಿಂತಿಸಬೇಡಿ, ಬಿಜೆಪಿಯ ಎಲ್ಲಾ ಹಗರಣಗಳು, ಅಕ್ರಮಗಳು, ಲೂಟಿಗಳನ್ನು ತನಿಖೆಗೆ ವಹಿಸುತ್ತೇವೆ. ಮುಲಾಜು ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಯಾರೊಬ್ಬರ ಅಂಜಿಕೆಯೂ ನಮಗಿಲ್ಲ. ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ

ತನಿಖೆಗೆ ತಾವೂ ಕೂಡ ಸಾಕ್ಷಿಗಳನ್ನು ನೀಡುವ ಮೂಲಕ ಸಹಾಯ ಮಾಡಬಹುದು, ನಿಮ್ಮ ನಾಯಕರ ಲೂಟಿಯ ಬಗ್ಗೆ ನಿಮಗೆ ಹೆಚ್ಚು ತಿಳಿದಿರುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರತಾಪ್ ಸಿಂಹ ಅವರ ಕಾಲೆಳದಿದೆ. ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್‌ನವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಸಿದ್ದರು, ಈಗ ತನಿಖೆ ಮಾಡಿಸಿ, ಭ್ರಷ್ಟಾಚಾರಿಗಳಿಗೆ ಶಿಕ್ಷೆ ಕೊಡಿಸಲಿ, ಇದರಿಂದ ಬಿಜೆಪಿ ಸ್ವಚ್ಛವಾಗುತ್ತದೆ ಎಂದು ಈ ಮೊದಲು ಹೇಳಿಕೆ ನೀಡಿದ್ದರು.

ಇನ್ನು ಬಿಜೆಪಿ ಸರ್ಕಾರ ಇದ್ದಾಗ ಹಲವು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಅದರಲ್ಲೂ ಪಿಎಸ್‌ಐ ನೇಮಕಾತಿ ಅಕ್ರಮ ಹಗರಣ, 40 ಪರ್ಸೆಂಟ್ ಕಮೀಷನ್ ಆರೋಪ, ಕೋವಿಡ್ ಸಮಯದಲ್ಲಿ ಅಕ್ರಮ ಆರೋಪ ಮುಖ್ಯವಾಗಿ ಕಾಂಗ್ರೆಸ್‌ನ ಅಸ್ತ್ರಗಳಾಗಿದ್ದವು. ರಾಜ್ಯಾದ್ಯಂತ ಪ್ರತಿಭಟನೆ ಕೂಡ ಮಾಡಿದ್ದ ಕಾಂಗ್ರೆಸ್, ತಾನು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದಲ್ಲಿ ಆಗಿರುವ ಭ್ರಷ್ಟಾಚಾರ, ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ಹೇಳಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ನುಡಿದಂತೆ ಬಿಜೆಪಿ ಅಕ್ರಮಗಳ ತನಿಖೆ ನಡೆಸಲಿ ಎನ್ನುವ ಕೂಗು ಕೇಳಿಬಂದಿದೆ.

ಇದರ ಮಧ್ಯೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಹಗ್ಗ ಜಗ್ಗಾಟ ಜೋರಾಗಿದೆ. ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಮತ್ತು ಸಿ.ಟಿ. ರವಿ ಆರೋಪ ಮಾಡಿದ ಬಳಿಕ ರಾಜಕಾರಣ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ