AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಿಸಬೇಡಿ ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ: ಪ್ರತಾಪ್ ಸಿಂಹಗೆ ಭರವಸೆ ನೀಡಿದ ಕಾಂಗ್ರೆಸ್​

ಬಿಜೆಪಿ ಸರ್ಕಾರದ ಭಷ್ಟ್ರಾಚಾರಗಳನ್ನು ತನಿಖೆ ಮಾಡಿಸಿ ಎಂದಿದ್ದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್​ ಪ್ರತಿಕ್ರಿಯಿಸಿದ್ದು, ಚಿಂತಿಸಬೇಡಿ ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ ಎಂದು ಭರವಸೆ ನೀಡಿದೆ.

ಚಿಂತಿಸಬೇಡಿ ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ: ಪ್ರತಾಪ್ ಸಿಂಹಗೆ ಭರವಸೆ ನೀಡಿದ ಕಾಂಗ್ರೆಸ್​
ಸಂಸದ ಪ್ರತಾಪ್​ ಸಿಂಹ
ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 5:32 PM

Share

ಬೆಂಗಳೂರು: ಈ ಹಿಂದೆ ಕಾಂಗ್ರೆಸ್​ನವರು ಬಿಜೆಪಿ ಸರ್ಕಾರದ ಮೇಲೆ ಸರಣಿ ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದರು. ಇದೀಗ ಅವರದ್ದೇ ಸರ್ಕಾರ ಇದೆ ತನಿಖೆ ಮಾಡಲಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಹೇಳಿದ್ದು, ಇದಕ್ಕೆ ಇದೀಗ ಕಾಂಗ್ರೆಸ್​ ಸಹ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ಪ್ರತಾಪ್ ಸಿಂಹ ಅವರೇ, ಚಿಂತಿಸಬೇಡಿ, ಬಿಜೆಪಿಯ ಎಲ್ಲಾ ಹಗರಣಗಳು, ಅಕ್ರಮಗಳು, ಲೂಟಿಗಳನ್ನು ತನಿಖೆಗೆ ವಹಿಸುತ್ತೇವೆ. ಮುಲಾಜು ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಯಾರೊಬ್ಬರ ಅಂಜಿಕೆಯೂ ನಮಗಿಲ್ಲ. ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ

ತನಿಖೆಗೆ ತಾವೂ ಕೂಡ ಸಾಕ್ಷಿಗಳನ್ನು ನೀಡುವ ಮೂಲಕ ಸಹಾಯ ಮಾಡಬಹುದು, ನಿಮ್ಮ ನಾಯಕರ ಲೂಟಿಯ ಬಗ್ಗೆ ನಿಮಗೆ ಹೆಚ್ಚು ತಿಳಿದಿರುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರತಾಪ್ ಸಿಂಹ ಅವರ ಕಾಲೆಳದಿದೆ. ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್‌ನವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಸಿದ್ದರು, ಈಗ ತನಿಖೆ ಮಾಡಿಸಿ, ಭ್ರಷ್ಟಾಚಾರಿಗಳಿಗೆ ಶಿಕ್ಷೆ ಕೊಡಿಸಲಿ, ಇದರಿಂದ ಬಿಜೆಪಿ ಸ್ವಚ್ಛವಾಗುತ್ತದೆ ಎಂದು ಈ ಮೊದಲು ಹೇಳಿಕೆ ನೀಡಿದ್ದರು.

ಇನ್ನು ಬಿಜೆಪಿ ಸರ್ಕಾರ ಇದ್ದಾಗ ಹಲವು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಅದರಲ್ಲೂ ಪಿಎಸ್‌ಐ ನೇಮಕಾತಿ ಅಕ್ರಮ ಹಗರಣ, 40 ಪರ್ಸೆಂಟ್ ಕಮೀಷನ್ ಆರೋಪ, ಕೋವಿಡ್ ಸಮಯದಲ್ಲಿ ಅಕ್ರಮ ಆರೋಪ ಮುಖ್ಯವಾಗಿ ಕಾಂಗ್ರೆಸ್‌ನ ಅಸ್ತ್ರಗಳಾಗಿದ್ದವು. ರಾಜ್ಯಾದ್ಯಂತ ಪ್ರತಿಭಟನೆ ಕೂಡ ಮಾಡಿದ್ದ ಕಾಂಗ್ರೆಸ್, ತಾನು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದಲ್ಲಿ ಆಗಿರುವ ಭ್ರಷ್ಟಾಚಾರ, ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ಹೇಳಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ನುಡಿದಂತೆ ಬಿಜೆಪಿ ಅಕ್ರಮಗಳ ತನಿಖೆ ನಡೆಸಲಿ ಎನ್ನುವ ಕೂಗು ಕೇಳಿಬಂದಿದೆ.

ಇದರ ಮಧ್ಯೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಹಗ್ಗ ಜಗ್ಗಾಟ ಜೋರಾಗಿದೆ. ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಮತ್ತು ಸಿ.ಟಿ. ರವಿ ಆರೋಪ ಮಾಡಿದ ಬಳಿಕ ರಾಜಕಾರಣ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ