AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ 10 ಲಕ್ಷ ರೂ. ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್, ಸಚಿವರ ಹೆಸರು ಬಹಿರಂಗ

ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್ ಎನ್ನುವರು ಅನಾಧಿಕೃತವಾಗಿ ವಿಧಾನಸೌಧದಲ್ಲಿ 10 ಲಕ್ಷ ರೂ. ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ.

ವಿಧಾನಸೌಧದಲ್ಲಿ 10 ಲಕ್ಷ ರೂ. ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್, ಸಚಿವರ ಹೆಸರು ಬಹಿರಂಗ
ಪಿಡಬ್ಲ್ಯೂಡಿ ಎಇ ಜಗದೀಶ್
TV9 Web
| Edited By: |

Updated on: Jan 06, 2023 | 6:54 PM

Share

ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಸಿಕ್ಕ 10 ಲಕ್ಷ ರೂ. ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಇದೀಗ ಹೊಸ ಬಾಂಬ್ ಸಿಡಿಸಿದೆ. 10 ಲಕ್ಷ ರೂ. ತಂದಿದ್ದ ಜಗದೀಶ್ ಫೋನಿನಲ್ಲಿ ಕೊನೆಯದಾಗಿ 3 ಬಾರಿ ಹೊರಹೋದ ಹಾಗೂ 2 ಬಾರಿ ಒಳಬಂದ ಕರೆ ಸಚಿವರೊಬ್ಬರ ಪಿಎಯದ್ದು ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ಇಂಜಿನಿಯರ್ 10.5 ಲಕ್ಷ ರೂ. ವಿಧಾನಸೌಧಕ್ಕೆ ತಂದಿದ್ದೇಕೆ? ಲಂಚ ಪಡೆದ ಹಣವೋ, ಮಂತ್ರಿಗೆ ಕೊಡಲು ತಂದ ಹಣವೋ? ಕೈ ಪ್ರಶ್ನೆ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಜಗದೀಶರನ್ನ ಬಿಟ್ಟು ಕಳಿಸುವಂತೆ ಪೊಲೀಸರಿಗೆ ಕರೆ ಮಾಡಿದ ಸಚಿವ ಯಾರು? ಬಸವರಾಜ ಬೊಮ್ಮಾಯಿ ಅವರೇ, ಈ ರಹಸ್ಯವನ್ನ ನೀವು ಹೇಳುವಿರಾ, ನಾವು ಹೇಳಬೇಕೆ? ಎಂದು ಪ್ರಶ್ನಿಸಿದೆ.

ವಿಧಾನಸೌಧಕ್ಕೆ 10 ಲಕ್ಷ ತಂದಿದ್ದು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್. ಆ ಸಮಯದಲ್ಲಿ ವಿಧಾನಸೌಧದಲ್ಲಿದ್ದಿದ್ದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್. ಬಸವರಾಜ ಬೊಮ್ಮಾಯಿ ಅವರೇ 40% ಕಮಿಷನ್ ಹಣದ ಮೂಲದ ರಹಸ್ಯ ಕಾಪಾಡುತ್ತಿರುವುದೇಕೆ ಸರ್ಕಾರ? ಇದು ನಿಮ್ಮ PayCM ಖಾತೆಗೆ ಜಮೆಯಾಗಲು ಬಂದ ಹಣವೇ ಅಥವಾ ಸಚಿವರ ಕಮಿಷನ್ ಪಾಲೇ? ಎಂದು ಪ್ರಶ್ನಿಸಿದೆ. ಎಂದು ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ 10 ಲಕ್ಷ ರೂ. ಹಣವನ್ನು ಸಚಿವ ಸಿಸಿ ಪಾಟೀಲ್ ಗೆ ಕೊಡಲು ತಂದಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಲಂಚ ಕೊಡಬೇಕೆಂದು ತೆಗೆದುಕೊಂಡು ಹೋಗ್ತಿದ್ದ ಹಣ ಅಲ್ಲ: PWD ಎಇ ಜಗದೀಶ್ ಪರ ವಕೀಲ ಹೇಳಿಕೆ

ಶಕ್ತಿ ಸೌಧಕ್ಕೆ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಪಿಡಬ್ಲ್ಯೂಡಿ  ಸಹಾಯಕ ಇಂಜಿನಿಯರ್ ಸಿಕ್ಕಿಬಿದ್ದಿದ್ದರು. ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್(Assistant Engineer of Public Works Department)  ಜಗದೀಶ್​​ ಎಂಬುವವರು ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು.

PWD ಎಇ ಜಗದೀಶ್ ಪರ ವಕೀಲ ಹೇಳಿಕೆ

ವಿಧಾನಸೌಧದಲ್ಲಿ 10 ಲಕ್ಷ ಹಣ ಜಪ್ತಿ ಮಾಡಿದ ಪ್ರಕರಣ ಸಂಬಂಧ ಆರೋಪಿ ಪಿಡಬ್ಲ್ಯೂಡಿ ಎಇ ಜಗದೀಶ್ (Assistant Engineer of Public Works Department) ಪರ ವೀಕಲ ಸ್ಪಷ್ಟನೆ ನೀಡಿದ್ದು, ಜಗದೀಶ್ ಲಂಚ ಕೊಡಬೇಕೆಂದು ತೆಗೆದುಕೊಂಡು ಹೋಗುತ್ತಿದ್ದ ಹಣ ಅಲ್ಲ, ಜಗದೀಶ್ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು, ಪ್ರಕರಣದ ಇತ್ಯರ್ಥಕ್ಕಾಗಿ ಬೆಂಗಳೂರಿಗೆ ಹಣ ತಂದಿದ್ದರು. ಈ ವೇಳೆ ಅರ್ಜೆಂಟ್ ಆಗಿ ಅಧಿಕಾರಿಯೊಬ್ಬರನ್ನು ಭೇಟಿ ಮಾಡಬೇಕಿತ್ತು. ಹೀಗಾಗಿ ವಿಧಾನಸೌಧಕ್ಕೆ ತೆರಳಿದ್ದರು. ಅಷ್ಟೇ ಹೊರತು ಯಾರಿಗೋ ಹಣ ನೀಡಬೇಕೆಂದು ಹೋಗಿಲ್ಲ ಎಂದರು. ಹಣದ ಬಗ್ಗೆ ಪೊಲೀಸರಿಗೆ ಎಲ್ಲಾ ಮಾಹಿತಿ ನೀಡಲಾಗಿದೆ. ಆದರೂ ಯಾಕೆ ಜಗದೀಶ್​ರನ್ನು ಬಂಧಿಸಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್