AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಂಗ್ರೆಸ್​ ಶಾಸಕರಿಗೆ ಕರೆ ಮಾಡಿ ಸುರ್ಜೇವಾಲ ಫುಲ್ ಕ್ಲಾಸ್, ಜೊತೆಗೊಂದು ಖಡಕ್ ಸೂಚನೆ

ಕರ್ನಾಟಕಕ್ಕೆ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಖಡಕ್ ಸೂಚನೆ ಕೊಟ್ಟಿದ್ದಾರೆ.

TV9 Web
| Edited By: |

Updated on: Oct 05, 2022 | 7:57 PM

Share

ಬೆಂಗಳೂರು: ದೇಶದಲ್ಲಿ ಒಗ್ಗಟ್ಟು ಮೂಡಿಸುವ ಅಭಿಲಾಷೆಯೊಂದಿಗೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆ (Bharat Jodo Yatra)  ಕರ್ನಾಟಕದಲ್ಲಿ ನಡೆಯುತ್ತಿದ್ದು, ಇದೀಗ ಪುತ್ರ ರಾಹುಲ್ ಗಾಂಧಿ ಸಾಥ್ ನೀಡಲು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದಾರೆ.

ಎರಡು ದಿನದ ವಿಶ್ರಾಂತಿ ಬಳಿಕ ನಾಳೆ(ಅ.6) ಭಾರತ್ ಜೋಡೋ ಯಾತ್ರೆ ಆರಂಭವಾಗಲಿದ್ದು, ಇದರಲ್ಲಿ ಸೋನಿಯಾ ಗಾಂಧಿ ಅವರು ಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸುರ್ಜೇವಾಲ ಬೆಂಗಳೂರು ನಗರ ಶಾಸಕರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ಜನರನ್ನ ಕರೆದುಕೊಂಡು ಬಾರದ ಶಾಸಕರ ಮೇಲೆ ಎಐಸಿಸಿ ಗರಂ

ಬೆಂಗಳೂರು ನಗರ ಕಾಂಗ್ರೆಸ್ ಶಾಸಕರಿಗೆ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಕರೆ ಮಾಡಿ, ನಾಳೆಯ ಸೋನಿಯಾ ಗಾಂಧಿ ಕಾರ್ಯಕ್ರಮಕ್ಕೆ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದ್ದಾರೆ.  ಇನ್ನೇನು ಆರೇಳು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿರುವುದರಿಂದ ಕಾಂಗ್ರೆಸ್ ವರಿಷ್ಠರು ಕರ್ನಾಟಕವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಇದರಿಂದ ಭಾರತ್ ಜೋಡೋ ಯಾತ್ರೆ ಮೂಲಕವೂ ಸಹ ಕಾಂಗ್ರೆಸ್ ಅಲೆ ಎಬ್ಬಿಸಲು ಪ್ಲಾನ್ ಮಾಡಿದೆ.

ಆದ್ರೆ, ಮೊನ್ನೆ ಪಾಂಡವಪುರ ಬಳಿ ಶಾಸಕರು – ಜನರು ಆಗಮಿಸದಿರುವುದಕ್ಕೆ ಸುರ್ಜೆವಾಲಾ ಗರಂ ಆಗಿದ್ದರು. ಶ್ರೀರಂಗಪಟ್ಟಣ ಸಮಯ ಬದಲಾಗಿರುವ ಬಗ್ಗೆ ಮಾಹಿತಿ ನೀಡಿರಲಿಲ್ಲ ಎಂದು ಬೆಂಗಳೂರು ಶಾಸಕರ ಸಮಜಾಯಿಷಿ ನೀಡಿದ್ರು. ಇದೀಗ ಮಂಡ್ಯ ಜಿಲ್ಲೆಯಲ್ಲಿ ಭಾರತ್ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಿರುವುದರಿಂದ ಬೆಂಗಳೂರಿನ ಎಲ್ಲಾ ಶಾಸಕರು ಹಾಜರಿರುವಂತೆ ಸಂದೇಶ ರವಾನಿಸಿದ್ದಾರೆ.

ಶಾಸಕರಿಗೆ ಕರೆ ಮಾಡಿ ತರಾಟೆ

ಭಾರತ್ ಜೋಡೋ ಯಾತ್ರೆಗೆ ಕನಿಷ್ಠ ಐದು ಸಾವಿರ ಜನರನ್ನ ಕರೆದುಕೊಂಡು ಬರುವಂತೆ ಮೊದಲೇ ಎಐಸಿಸಿ ನಾಯಕರು ಸ್ಪಷ್ಟ ಸೂಚನೆ ನೀಡಿದ್ದರು. ಆದರೆ, ಎಐಸಿಸಿ ನಾಯಕರ ಆದೇಶವಿದ್ದರೂ ಶಾಸಕರು ಅಷ್ಟಾಗಿ ಆಸಕ್ತಿ ತೋರಿಲ್ಲ. ಆದ್ರೆ, ಮೊನ್ನೇ ಯಾತ್ರೆಯಲ್ಲಿ ಜನರು ಇರಲಿಲ್ಲ. ಅಲ್ಲದೇ ಬೆಂಗಳೂರು ಶಾಸಕರು ಸಹ ಕಾಣಲಿಲ್ಲ. ಇದರಿಂದ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಅಣಕಿಸಿತ್ತು. ಇದರಿಂದ ಗರಂ ಆಗಿದ್ದ ಸುರ್ಜೆವಾಲ ಇಂದು(ಬುಧವಾರ) ಬೆಂಗಳೂರು ನಗರ ಶಾಸಕರಿಗೆ ಖುದ್ದು ಅವರೇ ಕರೆ ಮಾಡಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ನಾಳೆ ಐಕ್ಯತಾ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಕಡ್ಡಾಯವಾಗಿ ಯಾತ್ರೆಯಲ್ಲಿ ಭಾಗಿಯಾಗಲು ಖಡಕ್ ಸೂಚನೆ ನೀಡಿದ್ದಾರೆ.

ದಸರಾ ಹಿನ್ನೆಲೆಯಲ್ಲಿ ಅ.4 ಹಾಗೂ 5ರಂದು ಭಾರತ್ ಜೋಡೋ ಯಾತ್ರೆಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಮತ್ತೆ ನಾಳೆಯಿಂದ ಪುನಾರಂಭವಾಗಲಿದ್ದು, ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ.

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!