AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್​ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
TV9 Web
| Edited By: |

Updated on:Mar 25, 2024 | 1:14 PM

Share

ಬೆಂಗಳೂರು, ಮಾರ್ಚ್​ 25: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ, ಕೇಂದ್ರ  ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ (Congress) ಮುಖಂಡ ಕುಶಾಲ್​ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂನ್ಸ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ ಜನರು ಸಹೋದರತ್ವದಿಂದ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ!

ಇಂತಹ ಶಾಂತಿ ಸೌಹಾರ್ದತೆಯ ಬೀಡು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ಪ್ರಚೋದನಕಾರಿ ಭಾಷಳಿಗೆ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಲ್ಲಿ ಆತಂಕ ಬಹಳಷ್ಟು ಮೂಡಿಸಿದೆ.

ಅವರ ರಾಜಕೀಯ ಇತಿಹಾಸದೂದ್ದಕ್ಕೂ ಶಾಂತಿ-ಸೌಹಾರ್ದತೆ ಕದಡುವಂತಹ ಕೋಮುಗಲಭೆಗೆ ಪ್ರಚೋದಿಸುವಂತಹ ಭಾಷಣಗಳಿಂದಲೇ ಕುಖ್ಯಾತಿ ಹೊಂದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ಭಾಷಣಕ್ಕೆ ಅವಕಾಶ ನೀಡದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಾದ್ಯಂತ ಇಂತಹ ದುರ್ಘಟನೆಗಳು ಆಗದಂತ ಮುನ್ನೆಚ್ಚರಿಕೆ ವಹಿಸಿ ಶೋಭಾ ಕರಂದ್ಲಾಜೆ ಅವರ ಚುನಾವಣಾ ಭಾಷಣಗಳಿಗೆ ಅನುಮತಿ ನೀಡದೆ ನಿರ್ಬಂಧಿಸಬೇಕೆಂದು ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Mon, 25 March 24

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ