AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಖರ್ಗೆ ಕುರಿತ ಮೋದಿ ಹೇಳಿಕೆ ಕೀಳು ಮಟ್ಟದ ಪ್ರಚಾರ; ಎಂಬಿ ಪಾಟೀಲ್ ಕಿಡಿ

ವಿಧಾನಸಭಾ ಚುನಾವಣೆಗೆ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅಭಿವೃದ್ಧಿ ಎಂಬುದೇ ನಮ್ಮ ಮುಖ್ಯ ಘೋಷಣೆಯಾಗಿದೆ. ಈ ಐದು ಅಂಶಗಳೊಂದಿಗೆ ಪ್ರಚಾರ ಆರಂಭಿಸುತ್ತೇವೆ ಎಂದು ಎಂಬಿ ಪಾಟೀಲ್ ತಿಳಿಸಿದರು.

Karnataka Politics: ಖರ್ಗೆ ಕುರಿತ ಮೋದಿ ಹೇಳಿಕೆ ಕೀಳು ಮಟ್ಟದ ಪ್ರಚಾರ; ಎಂಬಿ ಪಾಟೀಲ್ ಕಿಡಿ
ಎಂಬಿ ಪಾಟೀಲ್
ಗಣಪತಿ ಶರ್ಮಾ
|

Updated on: Feb 28, 2023 | 6:53 PM

Share

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಛತ್ತೀಸ್​ಗಢ ಅಧಿವೇಶನದಲ್ಲಿ ಕೊಡೆ ಹಿಡಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿರುವುದು ಕೀಳು ಮಟ್ಟದ ಪ್ರಚಾರದ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ಟೀಕಿಸಿದರು. ಬಿಜೆಪಿ ಹಿರಿಯ ನಾಯಕ ಎಲ್​​ಕೆ ಅಡ್ವಾಣಿ ಅವರು ಕೈ ಮುಗಿದು ನಿಂತಾಗ, ಅವರ ಎದುರಿಗೇ ಹಾದುಹೋದ ಮೋದಿ ಕೈ ಮುಗಿದಿರಲಿಲ್ಲ. ಅಡ್ವಾಣಿ ಅವರಿಗೆ ಅಪಮಾನ ಮಾಡಿದ್ದರು. ಇನ್ನು ಅದೇ ಪರಿಸ್ಥಿತಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬರಲಿದೆ ಎಂದು ಪಾಟೀಲ್ ಹೇಳಿದರು.

‘ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅಭಿವೃದ್ಧಿ ಕಾಂಗ್ರೆಸ್ ಘೋಷಣೆ’

ವಿಧಾನಸಭಾ ಚುನಾವಣೆಗೆ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅಭಿವೃದ್ಧಿ ಎಂಬುದೇ ನಮ್ಮ ಮುಖ್ಯ ಘೋಷಣೆಯಾಗಿದೆ. ಈ ಐದು ಅಂಶಗಳೊಂದಿಗೆ ಪ್ರಚಾರ ಆರಂಭಿಸುತ್ತೇವೆ ಎಂದು ಎಂಬಿ ಪಾಟೀಲ್ ತಿಳಿಸಿದರು. ಉಚಿತ ಘೋಷಣೆಗಳನ್ನು ಮನೆ ಮನೆಗೆ ತೆಗೆದುಕೊಂಡು ಹೋಗುತ್ತೇವೆ. ಬಿಜೆಪಿ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡುತ್ತಿದೆ. ಆದರೆ, ನಾವು ರಾಜ್ಯದ ಜನರಿಗೆ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಸ್ಟಾರ್ ಪ್ರಚಾರಕರ ಕೊರತೆ ಇಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅಧಿಕಾರದ ರಿಮೋಟ್ ಪರಿವಾರದ ಕೈಯಲ್ಲಿ; ಪ್ರಧಾನಿ ಮೋದಿ ವಾಗ್ದಾಳಿ ​ ಸಿದ್ದರಾಮಯ್ಯ, ಡಿಕೆಶಿ, ‌ಪ್ರಿಯಾಂಕಾ, ರಾಹುಲ್ ಸ್ಟಾರ್‌ ಪ್ರಚಾರಕರೇ. ರಾಜ್ಯ ಬಿಜೆಪಿ ನಾಯಕರಿಗೆ ಅವರು ಸೋಲುತ್ತಾರೆ ಎಂಬುದು ಚೆನ್ನಾಗಿ ಗೊತ್ತಾಗಿದೆ. ಅದೇ ಕಾರಣಕ್ಕೆ ಪದೇಪದೆ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬರ್ತಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ಮ್ಯಾಜಿಕ್ ನಡೆಯಲ್ಲ ಎಂದು ಅವರು ಹೇಳಿದರು.

‘ಮೋದಿ ನಾಟಕ ಎಲ್ಲರಿಗೂ ಅರ್ಥವಾಗಿದೆ’​

ಕಾಂಗ್ರೆಸ್​ ನಾಯಕ, ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್​ಗೆ ಕಾಂಗ್ರೆಸ್ ಪಕ್ಷ​ ಅಪಮಾನ ಮಾಡಿತ್ತು ಎಂಬ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಎಂಬಿ ಪಾಟೀಲ್, ವೀರೇಂದ್ರ ಪಾಟೀಲ್​​​​ಗೆ ಅನಾರೋಗ್ಯ ಆಗಿತ್ತು. ಆದರೆ ಬಿಎಸ್​ ಯಡಿಯೂರಪ್ಪ ಅವರಿಗೆ ಏನಾಗಿತ್ತು ಎಂದು ಪ್ರಶ್ನಿಸಿದರು. ಸಿಎಂ ಸ್ಥಾನದಿಂದ ಬಿಎಸ್​ವೈಯನ್ನು ಯಾಕೆ ಇಳಿಸಿದರು? ಅವರನ್ನು ಹುದ್ದೆಯಿಂದ ಕೆಳಗಿಳಿಸಿ ಇನ್ನೊಬ್ಬ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದರು. ತಿರುಗುಬಾಣ ಆಗುತ್ತದೆ ಎಂದು ಲಿಂಗಾಯತರನ್ನು ಸಿಎಂ ಮಾಡಿದರು. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದರು. ಅಂಥವರು ಈ ಬಾರಿ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎನ್ನುತ್ತಾರೆ. ಲಿಂಗಾಯತರ ಮನವೊಲಿಸಲು ಮೋದಿ ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ನಾಟಕ ಎಲ್ಲರಿಗೂ ಅರ್ಥ ಆಗಿದೆ ಎಂದು ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ