AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆ ಶಿವಕುಮಾರ್​

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್​ ಹುಸೇನ್ ನೀಡಿರುವ​ ಸ್ಫೋಟಕ ಹೇಳಿಕೆ ಸದ್ಯ ಸಂಚಲನ ಸೃಷ್ಟಿಸಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್​, ಶಾಸಕ ಇಕ್ಬಾಲ್​ ಹುಸೇನ್​ಗೆ​ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಹೇಳಿದ್ದಾರೆ.

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​, ಇಕ್ಬಾಲ್​ ಹುಸೇನ್
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 13, 2025 | 4:46 PM

Share

ದೇವನಹಳ್ಳಿ, ಡಿಸೆಂಬರ್​ 13: ರಾಜ್ಯ ಕಾಂಗ್ರೆಸ್ (congress) ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ದಿನಕ್ಕೊಬ್ಬರ ಹೇಳಿಕೆ ನಾನಾ ಊಹಾಪೋಹ ಸೃಷ್ಟಿಸುತ್ತಿವೆ. ಇದೀಗ ಡಿಕೆ ಶಿವಕುಮಾರ್​ ಆಪ್ತ ಇಕ್ಬಾಲ್ ಹುಸೇನ್, ಜನವರಿ 6ರಂದು ಡಿ.ಕೆ.ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ಕೊಟ್ಟಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್​, ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಲು ಹೋಗಬೇಡಿ. ಅವನ ಮೇಲೆ ಮೊದಲು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಇಕ್ಬಾಲ್​ ಹುಸೇನ್​ಗೆ​ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಸಿಡಿಮಿಡಿಗೊಂಡಿದ್ದಾರೆ.

ನನ್ನ ಹೇಳಿಕೆಗೆ ಬದ್ಧ ಎಂದ ಶಾಸಕ ಇಕ್ಬಾಲ್​ ಹುಸೇನ್​

ಇನ್ನು ಶಾಸಕ ಇಕ್ಬಾಲ್ ಹುಸೇನ್​ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 140 ಶಾಸಕರಿಗೂ ಡಿ.ಕೆ.ಶಿವಕುಮಾರ್​ ಅಧ್ಯಕ್ಷರು. ಮೊದಲು ನೋಟಿಸ್​ ಕೊಟ್ಟಿದ್ದಾರೆ, ಈಗಲೂ ಒಂದೆರಡು ಕೊಡಲಿ. ನೋಟಿಸ್​ ಕೊಟ್ಟರೆ ನಾನು ಪಾಲನೆ ಮಾಡಬೇಕಾಗುತ್ತೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

ಈ ವಿಚಾರವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾನು ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ ಎಂದಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಪರಮೇಶ್ವರ್ ಸಿಎಂ ಆಗಲಿ ಎಂದ ಸಚಿವ ವಿ.ಸೋಮಣ್ಣ

ಕಾಂಗ್ರೆಸ್​ನಲ್ಲಿ ಸದ್ಯ ಸಿದ್ದರಾಮಯ್ಯನಾ? ಅಥವಾ ಹೊಸ ನಾಯಕತ್ವ ಡಿಕೆಯದ್ದಾ? ಎನ್ನುವ ಗೊಂದಲ ಕೋಲಾಹಲವನ್ನೇ ಎಬ್ಬಿಸುತ್ತಿದೆ. ಈ ನಡುವೆ ಕೇಂದ್ರ ಸಚಿವ ವಿ.ಸೋಮಣ್ಣ, ಪರಮೇಶ್ವರ್ ಸಿಎಂ ಆಗಲಿ ಎಂಬ ಅಭಿಲಾಸೆ ಹೊರಹಾಕಿದ್ದಾರೆ.

ಡಿಕೆ ಶಿವಕುಮಾರ್​​ಗೆ ಪಟ್ಟಾಭಿಷೇಕವಾದರೆ ನಾನೇ ಮೊದಲು ಖುಷಿ ಪಡೋದು: ಶಿವಗಂಗಾ ಬಸವರಾಜ್

ದಾವಣಗೆರೆಯಲ್ಲಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದ್ದು, ಜ.6ರಂದು ಡಿಕೆ ಶಿವಕುಮಾರ್​​ಗೆ ಪಟ್ಟಾಭಿಷೇಕ ಆದರೆ ನಾನೇ ಮೊದಲು ಖುಷಿ ಪಡೋದು. ಡಿ.ಕೆ.ಶಿವಕುಮಾರ್​ ಅವರಿಗೆ 6 ಹಾಗೂ 9 ಅದೃಷ್ಟ ಸಂಖ್ಯೆಗಳು. ಈ ವೇಳೆ ಡಿಕೆ ಶಿವಕುಮಾರ್​ ಸಿಎಂ ಆದರೆ ನಾನೇ ಮೊದಲು ಖುಷಿ ಪಡೋದು. ಡಿಕೆ ಶಿವಕುಮಾರ್​ ನನ್ನ ಆರಾಧ್ಯ ದೈವ ಎಂದಿದ್ದಾರೆ.

ಇದನ್ನೂ ಓದಿ: ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಸ್ಫೋಟಕ ಹೇಳಿಕೆ ನೀಡಿದ ಶಾಸಕ ಇಕ್ಬಾಲ್ ಹುಸೇನ್

ಕಾಂಗ್ರೆಸ್​ನಲ್ಲಿ ಎಲ್ಲವೂ ಅಂದುಕೊಂಡಂತಿಲ್ಲ. ಮೇಲ್ನೋಟಕ್ಕೆ ಸಿಎಂ ಹಾಗೂ ಡಿಸಿಎಂ ನಾವು ಜೋಡೆತ್ತು, ಜೊತೆ ಜೊತೆಗೆ ಇದ್ದೇವೆ ಎನ್ನುವ ಸಂದೇಶ ಸಾರುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ​ ಹೇಳಿಕೆಗಳು, ಅದಕ್ಕೆ ಬರುವ ಪ್ರತಿಕ್ರಿಯೆ ಬೆಳವಣಿಗೆಗಳನ್ನ ಹೊಸ ದಿಕ್ಕಿಗೆ ಕೊಂಡೊಯ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:45 pm, Sat, 13 December 25