AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ಮುಚ್ಚಿದ ಶಾಲಾ ವಿದ್ಯಾರ್ಥಿಗಳು, ವಿಡಿಯೋ ಶೇರ್ ಮಾಡಿ ಸರ್ಕಾರಕ್ಕೆ ತಿವಿದ ಕಾಂಗ್ರೆಸ್ ಶಾಸಕ

ಸರಕಾರ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದ್ದರೆ, ವಿದ್ಯಾರ್ಥಿಗಳು ಗುಂಡಿಗಳನ್ನು ಮುಚ್ಚುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ವಿಡಿಯೋ ಶೇರ್ ಮಾಡಿ ಸರ್ಕಾರಕ್ಕೆ ತಿವಿದಿದ್ದಾರೆ.

ರಸ್ತೆ ಗುಂಡಿ ಮುಚ್ಚಿದ ಶಾಲಾ ವಿದ್ಯಾರ್ಥಿಗಳು, ವಿಡಿಯೋ ಶೇರ್ ಮಾಡಿ ಸರ್ಕಾರಕ್ಕೆ ತಿವಿದ ಕಾಂಗ್ರೆಸ್ ಶಾಸಕ
ರಸ್ತೆ ಗುಂಡಿ ಮುಚ್ಚಿದ ಶಾಲಾ ವಿದ್ಯಾರ್ಥಿಗಳು
TV9 Web
| Edited By: |

Updated on:Nov 22, 2022 | 12:32 AM

Share

ಬೆಂಗಳೂರು/ಮೈಸೂರು: ರಸ್ತೆ ಗುಂಡಿಗಳಿಂದ ಸಾಕಷ್ಟು ಅಪಘಾತ ಸಂಭವಿಸುತ್ತಲೇ ಇವೆ.ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾಕಷ್ಟು ಬೈಕ್ ಸವಾರರು ಪ್ರಾಣ ಕಳೆದುಕೊಂಡ ಉದಾಹರಣೆಗಳು ನಮ್ಮ ಕಣ್ಮುಂದೆ ಇವೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ ಬೇರೆ-ಬೇರೆ ಜಿಲ್ಲೆಗಳಲ್ಲಿ ರಸ್ತೆ ಗುಂಡಿಗಳಿಗೆ ಅವೆಷ್ಟು ಜೀವಗಳು ಬಲಿಯಾಗಿವೆಯೋ ಲೆಕ್ಕವಿಲ್ಲ. ಆದ್ರೆ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾತ್ರ ಏನು ಕಾಣದಂತೆ ಕಣ್ಮಿಚ್ಚಿ ಕುಳಿತುಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಈ ಸುದ್ದಿ.

ಹೌದು…ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನರಸಿಂಹಸ್ವಾಮಿ ಬಡಾವಣೆಯ ಸರ್ಕಾರಿ ಶಾಲೆ ಮುಂಭಾಗದ ರಸ್ತೆ ಗುಂಡಿಗಳನ್ನು ವಿದ್ಯಾರ್ಥಿಗಳೇ ಮುಚ್ಚಿದ್ದಾರೆ. ನಿಜವಾಗಲೂ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನಾಚಿಕೆ ಆಗಬೇಕು. ಈ ವಿಡಿಯೋವನ್ನು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್​ನಲ್ಲಿ ಶೇರ್ ಮಾಡಿದ್ದಾರೆ.

ಸರಕಾರ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದ್ದರೆ, ವಿದ್ಯಾರ್ಥಿಗಳು ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಈ ಮೂಲಕ ಸರ್ಕಾರದ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ಪ್ರಿಯಾಂಕ್ ಖರ್ಗೆ ವಿಡಿಯೋ ಸಮೇತ ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ವಿವೇಕ ಯೋಜನೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ಮುಂದಾಗಿದೆ. ಆದ್ರೆ, ಇದೀಗ ಇದಕ್ಕೆ ಪ್ರಿಯಾಂಕ್ ಖರ್ಗೆ ಶಾಲಾ ವಿದ್ಯಾರ್ಥಿಗಳು ರಸ್ತೆ ಗುಂಡಿ ಮುಚ್ಚುವ ವಿಡಿಯೋ ಶೇರ್ ಮಾಡಿಕೊಂಡು ಬೊಮ್ಮಾಮಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Published On - 12:28 am, Tue, 22 November 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ