AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀಡುವ ಚಿಂತನೆ; ಸರಣಿ ಟ್ವೀಟ್ ಮೂಲಕ ಸವಾಲೆಸೆದ ರಾಜ್ಯ ಬಿಜೆಪಿ

ತಮ್ಮ ಪಳೆಯುಳಿಕೆಗಳನ್ನೂ ಅಧಿಕಾರದಲ್ಲಿ ಪ್ರತಿಷ್ಠಾಪಿಸಬೇಕೆಂಬ ವಾಂಛೆ ಕಾಂಗ್ರೆಸ್ ರಕ್ತದಲ್ಲಿದೆ. ನೆಹರು, ಇಂದಿರಾ, ರಾಜೀವ್, ಸೋನಿಯಾ, ರಾಹುಲ್ ಪ್ರಿಯಾಂಕಾ ಇವೆರಲ್ಲರೂ ಇದಕ್ಕೆ ಜ್ವಲಂತ ಉದಾಹರಣೆಗಳು ಎಂದು ಬಿಜೆಪಿ ಕಾಲೆಳಿದಿದೆ.

ಕಾಂಗ್ರೆಸ್​ನಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀಡುವ ಚಿಂತನೆ; ಸರಣಿ ಟ್ವೀಟ್ ಮೂಲಕ ಸವಾಲೆಸೆದ ರಾಜ್ಯ ಬಿಜೆಪಿ
ಕಾಂಗ್ರೆಸ್, ಬಿಜೆಪಿ ಪಕ್ಷದ ಚಿಹ್ನೆಗಳು
TV9 Web
| Edited By: |

Updated on:May 15, 2022 | 12:57 PM

Share

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಮುಂದಿನ ಚುನಾವಣಾ ತಯಾರಿಗಳು ನಡೆಯುತ್ತಿವೆ. ಒಂದು ಕಡೆ ಕಾಂಗ್ರೆಸ್ (Congress) ನಲ್ಲಿ ಟಿಕೆಟ್ಗೆ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀಡುವ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ (Karnataka BJP), ದೇಶವೇ ಬೆರಗುಗಣ್ಣಿನಿಂದ ನೋಡುತ್ತಿದ್ದ ಯುಪಿ ಚುನಾವಣೆಯಲ್ಲಿ ಮೋದಿ ಅವರು ವಂಶವಾದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡರು. ವಂಶವಾದಕ್ಕೆ ಪೋಷಣೆ ನೀಡದೆ ಬಲಾಢ್ಯರ ಮಕ್ಕಳಿಗೆ ಟಿಕೆಟ್ ನಿರಾಕರಿಸಿದ್ದರು. ಈ ನಿರ್ಧಾರದಿಂದ ಪಕ್ಷಕ್ಕೆ ಸೋಲಾದರೆ ತಾವೇ ಹೊಣೆ ಎಂದಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಈ ಧೈರ್ಯ ತೋರಿಸುವ ತಾಕತ್ತಿದೆಯೇ? ಎಂದು ಸವಾಲೆಸೆದಿದೆ.

‘ಧೃತರಾಷ್ಟ್ರ ಮೋಹ’ ಎಂಬ ಮಾತು ರಾಜಕಾರಣದಲ್ಲಿ ಸದಾ ಜೀವಂತವಾಗಿರಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಟ್ವೀಟ್ ಮಾಡಿರುವ ಬಿಜೆಪಿ, ಏಕೆಂದರೆ ತಮ್ಮ ನಂತರ ತಮ್ಮ ಪಳೆಯುಳಿಕೆಗಳನ್ನೂ ಅಧಿಕಾರದಲ್ಲಿ ಪ್ರತಿಷ್ಠಾಪಿಸಬೇಕೆಂಬ ವಾಂಛೆ ಕಾಂಗ್ರೆಸ್ ರಕ್ತದಲ್ಲಿದೆ. ನೆಹರು, ಇಂದಿರಾ, ರಾಜೀವ್, ಸೋನಿಯಾ, ರಾಹುಲ್ ಪ್ರಿಯಾಂಕಾ ಇವೆರಲ್ಲರೂ ಇದಕ್ಕೆ ಜ್ವಲಂತ ಉದಾಹರಣೆಗಳು ಎಂದು ಕಾಲೆಳಿದಿದೆ.

ಇದನ್ನೂ ಓದಿ
Image
ಪಿತ್ರಾರ್ಜಿತ ಆಸ್ತಿ ಮಾರಿದರೆ ತೆರಿಗೆ ಕಟ್ಟಬೇಕೇ? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
Image
ಇಸ್ಪೀಟ್ ಕ್ಲಬ್​ಗೆ ಲೈಸೆನ್ಸ್ ಕೊಡಿಸುತ್ತೇನೆ ಎಂಬ ಆಡಿಯೋ ವೈರಲ್‌: ಪೊಲೀಸ್ ಆಯುಕ್ತ ಕಮಲ್‌ಪಂತ್ ಸ್ಪಷ್ಟನೆ
Image
Mouth Sore:ಬಾಯಿ ಹುಣ್ಣಿನ ಬಗ್ಗೆ ನಿರ್ಲಕ್ಷ್ಯ ಬೇಡ, ಕಾರಣ ಹಾಗೂ ಲಕ್ಷಣಗಳೇನು?
Image
ರಾಮನಗರ: 2023ರ ಚುನಾವಣೆ ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಬಿಗ್ ಫೈಟ್! ಡಿಕೆ ಶಿವಕುಮಾರ್ ಭಾವ ಶರತ್ ಚಂದ್ರ ಪಕ್ಷ ತೊರೆಯುವ ಸಾಧ್ಯತೆ

ಕೆಲವು ಕುಟುಂಬಗಳಿಗೆ ಕಾಂಗ್ರೆಸ್ ನಿಯಮ ಅನ್ವಯವಾಗುವುದಿಲ್ಲ ಎಂಬ ಮಾತಿನ ಅರ್ಥವೇನು? ಯಾವುದು ಆ ಕುಟುಂಬಗಳು? ಇಡಿ ದೇಶಕ್ಕೆ ಕುಟುಂಬ ರಾಜಕಾರಣವನ್ನು ಪರಿಚಯಿಸಿದ ಕಾಂಗ್ರೆಸ್ ಪಕ್ಷಕ್ಕೆ  ಈಗ ಅದನ್ನು ಪೋಷಿಸುವುದು ಅನಿವಾರ್ಯವಾಗಿದೆ. ಕಾಂಗ್ರೆಸ್ ನೀತಿಯ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ವಂಶವಾದವನ್ನು ಮಾತ್ರ‌ ಬಿಡುವುದಿಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಚಿಂತನಾ ಸಭೆಯಿಂದ ದೇಶಕ್ಕೆ ಲಭ್ಯವಾದ ವಿಶೇಷ ವಾರ್ತೆ ಏನು? ಎಂದು ಪ್ರಶ್ನಿಸಿರುವ ಬಿಜೆಪಿ, ಬೆಳಗ್ಗೆ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ಪ್ರಸ್ತಾಪ ಸಂಜೆಯಾಗುತ್ತಲೇ ಈ ನಿಯಮ ಗಾಂಧಿ ಕುಟುಂಬಕ್ಕೆ ಅನ್ವಯವಾಗದು. ರಾತ್ರಿಯಾಗುತ್ತಲೇ, ಗಾಂಧಿ ನಿಷ್ಠ ಕೆಲವು ಕುಟುಂಬಗಳಿಗೆ ಇದು ಅನ್ವಯವಿಲ್ಲ ಎಂದು

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:52 pm, Sun, 15 May 22

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ