AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ

ಕಾಂಗ್ರೆಸ್​ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಕೂಗು ಕೇಳಿಬಂದಿವೆ

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್
TV9 Web
| Edited By: |

Updated on: Oct 27, 2022 | 3:05 PM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಅಸಮಾಧಾನಗಳು ಸ್ಫೋಟಗಳ್ಳುತ್ತಲ್ಲೇ ಇವೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಬಸ್ ಯಾತ್ರೆ ಸಂಬಂಧ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್​ ಹಾಕಿದ ಬೆನ್ನಲ್ಲೇ ಇದೀಗ ಮಹಿಳಾ ಕಾಂಗ್ರೆಸ್​ನಲ್ಲಿ ಬಿನ್ನಮತ ಭುಗಿಲೆದ್ದಿದೆ.

ಹೌದು….ಕರ್ನಾಟಕ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದ್ದ, ಅವರನ್ನು ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಅವರಿಗೂ ಮಾಹಿತಿ ನೀಡದೆ ಮಹಿಳಾ ಘಟಕಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪುಷ್ಪಾ ಅಮರನಾಥ್​ರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.

ಒಂದೆಡೆ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೊಂದು ಮಹಿಳಾ ಕ್ರಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ದೊಡ್ಡತಲೆನೋವಾಗಿದೆ. ಒಂದು ವೇಳೆ ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸಿದರೆ, ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಯಾರು ಎನ್ನುವುದು ಸಹ ಕುತೂಹಲ ಮೂಡಿಸಿದೆ.

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ