AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ

ಕಾಂಗ್ರೆಸ್​ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಕೂಗು ಕೇಳಿಬಂದಿವೆ

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್
TV9 Web
| Edited By: |

Updated on: Oct 27, 2022 | 3:05 PM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಅಸಮಾಧಾನಗಳು ಸ್ಫೋಟಗಳ್ಳುತ್ತಲ್ಲೇ ಇವೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಬಸ್ ಯಾತ್ರೆ ಸಂಬಂಧ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್​ ಹಾಕಿದ ಬೆನ್ನಲ್ಲೇ ಇದೀಗ ಮಹಿಳಾ ಕಾಂಗ್ರೆಸ್​ನಲ್ಲಿ ಬಿನ್ನಮತ ಭುಗಿಲೆದ್ದಿದೆ.

ಹೌದು….ಕರ್ನಾಟಕ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದ್ದ, ಅವರನ್ನು ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಅವರಿಗೂ ಮಾಹಿತಿ ನೀಡದೆ ಮಹಿಳಾ ಘಟಕಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪುಷ್ಪಾ ಅಮರನಾಥ್​ರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.

ಒಂದೆಡೆ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೊಂದು ಮಹಿಳಾ ಕ್ರಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ದೊಡ್ಡತಲೆನೋವಾಗಿದೆ. ಒಂದು ವೇಳೆ ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸಿದರೆ, ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಯಾರು ಎನ್ನುವುದು ಸಹ ಕುತೂಹಲ ಮೂಡಿಸಿದೆ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ