AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ

ಕಾಂಗ್ರೆಸ್​ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಕೂಗು ಕೇಳಿಬಂದಿವೆ

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್
TV9 Web
| Edited By: |

Updated on: Oct 27, 2022 | 3:05 PM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಅಸಮಾಧಾನಗಳು ಸ್ಫೋಟಗಳ್ಳುತ್ತಲ್ಲೇ ಇವೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಬಸ್ ಯಾತ್ರೆ ಸಂಬಂಧ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್​ ಹಾಕಿದ ಬೆನ್ನಲ್ಲೇ ಇದೀಗ ಮಹಿಳಾ ಕಾಂಗ್ರೆಸ್​ನಲ್ಲಿ ಬಿನ್ನಮತ ಭುಗಿಲೆದ್ದಿದೆ.

ಹೌದು….ಕರ್ನಾಟಕ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದ್ದ, ಅವರನ್ನು ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಅವರಿಗೂ ಮಾಹಿತಿ ನೀಡದೆ ಮಹಿಳಾ ಘಟಕಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪುಷ್ಪಾ ಅಮರನಾಥ್​ರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.

ಒಂದೆಡೆ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೊಂದು ಮಹಿಳಾ ಕ್ರಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ದೊಡ್ಡತಲೆನೋವಾಗಿದೆ. ಒಂದು ವೇಳೆ ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸಿದರೆ, ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಯಾರು ಎನ್ನುವುದು ಸಹ ಕುತೂಹಲ ಮೂಡಿಸಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್