AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ಕಾಂಗ್ರೆಸ್​ ಶಾಸಕರಿಗೆ, ಕಾರ್ಯಕರ್ತರಿಗೆ ಸಂಕ್ರಾಂತಿ ಗಿಫ್ಟ್: ಏನದು? ಡಿಕೆಶಿ ಹೇಳಿದ್ದಿಷ್ಟು

ಕಾಂಗ್ರೆಸ್‌ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸಂಕ್ರಾಂತಿಯ ಈ ದಿನವೇ ಶುಭ ಸುದ್ದಿ ಸಿಗಲಿದೆಯೇ? ಹೌದು ಎಂದು ಹೇಳುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ .‌ ಏನದು? ಡಿಕೆಶಿ ಕೊಟ್ಟ ಸುಹಿ ಸುದ್ದಿ ಇಲ್ಲಿದೆ.

ಕೆಲ ಕಾಂಗ್ರೆಸ್​ ಶಾಸಕರಿಗೆ, ಕಾರ್ಯಕರ್ತರಿಗೆ ಸಂಕ್ರಾಂತಿ ಗಿಫ್ಟ್: ಏನದು? ಡಿಕೆಶಿ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 15, 2024 | 2:59 PM

ಬೆಂಗಳೂರು, (ಜನವರಿ 15): ಸಂಕ್ರಾಂತಿಯೊಳಗೆ ನಿಗಮ-ಮಂಡಳಿ (corporation and board ) ಪಟ್ಟಿಯನ್ನು ಇಂದು (ಜನವರಿ 15) ಸಂಜೆಯೊಳಗೆ ಪ್ರಕಟಿಸುವುದಾಗಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಘೋಷಿಸಿದ್ದರು. ಹಾಗಾಗಿ ಪಟ್ಟಿ ಫೈನಲ್‌ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎಂಬ ಸುಳಿವನ್ನು ಸಹ ಕೊಟ್ಟಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ನ (Congress Karnataka) ಕೆಲ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸಂಕ್ರಾಂತಿಯ ಈ ದಿನವೇ ಶುಭ ಸುದ್ದಿ ಸಿಗುವುದು ಖಚಿತವಾದಂತಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿ ಪಟ್ಟಿ ಬಿಡುಗಡೆಯು ಸಂಕ್ರಾಂತಿಗಿಂತ ಮುಂದಕ್ಕೆ ಹೋಗುವುದಿಲ್ಲ. ಅದರ ಒಳಗಡೆಯೇ ಆಗಲಿದೆ. ಸಾಯಂಕಾಲದ ಒಳಗಡೆ ಇದರ ಸಲುವಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತೇನೆ. ಇನ್ನು ಚುನಾವಣೆ ಸಂದರ್ಭದಲ್ಲಿ ನಾವು ಕೊಟ್ಟಿದ್ದ ಮಾತನ್ನು ನಡೆಸಿಕೊಡುತ್ತೇವೆ ಎಂದು ಹೇಳಿದರು. ಈ ಮೂಲಕ ಇಂದು ಸಂಜೆ ವೇಳೆ ನಿಗಮ ಮಂಡಳಿ ಪಟ್ಟಿ ಪ್ರಕಟವಾಗುವ ಸುಳಿವು ನೀಡಿದರು.

ಜನವರಿ 19ರಂದು ಚುನಾವಣಾ ಸಮಿತಿ ಸಭೆ

ಇದೇ ಜನವರಿ 19ರಂದು ಸಂಜೆ 4 ಗಂಟೆಗೆ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಎಲೆಕ್ಷನ್ ಕಮಿಟಿ ಸಭೆ ಕರೆಯುತ್ತಿದ್ದೇನೆ. ಇದಕ್ಕೆ ನಮ್ಮ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬರುತ್ತಿದ್ದಾರೆ. ನಮ್ಮ ಪಕ್ಷದಿಂದ ಲೋಕಸಭೆ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಸಂಬಂಧ ಈ ಸಭೆಯನ್ನು ನಡೆಸಲಾಗುತ್ತಿದೆ. ಹಾಗೆಯೇ ಜನವರಿ 21ರಂದು ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್‌ ಮಾಹಿತಿ ನೀಡಿದರು.

ಇನ್ನು ಇದೇ ವೇಳೆ ಸಂಕ್ರಾಂತಿ ಶುಭಾಯಶ ಕೋರಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷವಾದರೂ ಸಮರ್ಪಕ ಮಳೆ ಬಂದು, ಮುಂದಿನ ವರ್ಷ ಒಳ್ಳೆಯ ಬೆಳೆ ಆಗುತ್ತದೆ ಎಂದು ಭಾವಿಸಿಕೊಂಡಿದ್ದೇನೆ. ಸುಮಾರು 200ಕ್ಕೂ ಹೆಚ್ಚು ತಾಲೂಕುಗಳು ಬರಗಾಲ ಎಂದು ಘೋಷಿಸಲ್ಪಟ್ಟಿವೆ. ಭವಿಷ್ಯದಲ್ಲಿ ಇಂಥದ್ದೊಂದು ಸ್ಥಿತಿ ಮತ್ತೆ ಬರುವುದಿಲ್ಲ ಮತ್ತು ಬರಬಾರದು. ರೈತರ ಬದುಕು ಹಸನಾಗಲಿ ಎಂದು ನಾವೆಲ್ಲರೂ ಭಗವಂತನಲ್ಲಿ ಪ್ರಾರ್ಥನೆ ಮಾಡೋಣ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ