AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ಕಾಂಗ್ರೆಸ್​ ಶಾಸಕರಿಗೆ, ಕಾರ್ಯಕರ್ತರಿಗೆ ಸಂಕ್ರಾಂತಿ ಗಿಫ್ಟ್: ಏನದು? ಡಿಕೆಶಿ ಹೇಳಿದ್ದಿಷ್ಟು

ಕಾಂಗ್ರೆಸ್‌ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸಂಕ್ರಾಂತಿಯ ಈ ದಿನವೇ ಶುಭ ಸುದ್ದಿ ಸಿಗಲಿದೆಯೇ? ಹೌದು ಎಂದು ಹೇಳುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ .‌ ಏನದು? ಡಿಕೆಶಿ ಕೊಟ್ಟ ಸುಹಿ ಸುದ್ದಿ ಇಲ್ಲಿದೆ.

ಕೆಲ ಕಾಂಗ್ರೆಸ್​ ಶಾಸಕರಿಗೆ, ಕಾರ್ಯಕರ್ತರಿಗೆ ಸಂಕ್ರಾಂತಿ ಗಿಫ್ಟ್: ಏನದು? ಡಿಕೆಶಿ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್
TV9 Web
| Edited By: |

Updated on: Jan 15, 2024 | 2:59 PM

Share

ಬೆಂಗಳೂರು, (ಜನವರಿ 15): ಸಂಕ್ರಾಂತಿಯೊಳಗೆ ನಿಗಮ-ಮಂಡಳಿ (corporation and board ) ಪಟ್ಟಿಯನ್ನು ಇಂದು (ಜನವರಿ 15) ಸಂಜೆಯೊಳಗೆ ಪ್ರಕಟಿಸುವುದಾಗಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಘೋಷಿಸಿದ್ದರು. ಹಾಗಾಗಿ ಪಟ್ಟಿ ಫೈನಲ್‌ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎಂಬ ಸುಳಿವನ್ನು ಸಹ ಕೊಟ್ಟಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ನ (Congress Karnataka) ಕೆಲ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸಂಕ್ರಾಂತಿಯ ಈ ದಿನವೇ ಶುಭ ಸುದ್ದಿ ಸಿಗುವುದು ಖಚಿತವಾದಂತಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿ ಪಟ್ಟಿ ಬಿಡುಗಡೆಯು ಸಂಕ್ರಾಂತಿಗಿಂತ ಮುಂದಕ್ಕೆ ಹೋಗುವುದಿಲ್ಲ. ಅದರ ಒಳಗಡೆಯೇ ಆಗಲಿದೆ. ಸಾಯಂಕಾಲದ ಒಳಗಡೆ ಇದರ ಸಲುವಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತೇನೆ. ಇನ್ನು ಚುನಾವಣೆ ಸಂದರ್ಭದಲ್ಲಿ ನಾವು ಕೊಟ್ಟಿದ್ದ ಮಾತನ್ನು ನಡೆಸಿಕೊಡುತ್ತೇವೆ ಎಂದು ಹೇಳಿದರು. ಈ ಮೂಲಕ ಇಂದು ಸಂಜೆ ವೇಳೆ ನಿಗಮ ಮಂಡಳಿ ಪಟ್ಟಿ ಪ್ರಕಟವಾಗುವ ಸುಳಿವು ನೀಡಿದರು.

ಜನವರಿ 19ರಂದು ಚುನಾವಣಾ ಸಮಿತಿ ಸಭೆ

ಇದೇ ಜನವರಿ 19ರಂದು ಸಂಜೆ 4 ಗಂಟೆಗೆ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಎಲೆಕ್ಷನ್ ಕಮಿಟಿ ಸಭೆ ಕರೆಯುತ್ತಿದ್ದೇನೆ. ಇದಕ್ಕೆ ನಮ್ಮ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬರುತ್ತಿದ್ದಾರೆ. ನಮ್ಮ ಪಕ್ಷದಿಂದ ಲೋಕಸಭೆ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಸಂಬಂಧ ಈ ಸಭೆಯನ್ನು ನಡೆಸಲಾಗುತ್ತಿದೆ. ಹಾಗೆಯೇ ಜನವರಿ 21ರಂದು ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್‌ ಮಾಹಿತಿ ನೀಡಿದರು.

ಇನ್ನು ಇದೇ ವೇಳೆ ಸಂಕ್ರಾಂತಿ ಶುಭಾಯಶ ಕೋರಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷವಾದರೂ ಸಮರ್ಪಕ ಮಳೆ ಬಂದು, ಮುಂದಿನ ವರ್ಷ ಒಳ್ಳೆಯ ಬೆಳೆ ಆಗುತ್ತದೆ ಎಂದು ಭಾವಿಸಿಕೊಂಡಿದ್ದೇನೆ. ಸುಮಾರು 200ಕ್ಕೂ ಹೆಚ್ಚು ತಾಲೂಕುಗಳು ಬರಗಾಲ ಎಂದು ಘೋಷಿಸಲ್ಪಟ್ಟಿವೆ. ಭವಿಷ್ಯದಲ್ಲಿ ಇಂಥದ್ದೊಂದು ಸ್ಥಿತಿ ಮತ್ತೆ ಬರುವುದಿಲ್ಲ ಮತ್ತು ಬರಬಾರದು. ರೈತರ ಬದುಕು ಹಸನಾಗಲಿ ಎಂದು ನಾವೆಲ್ಲರೂ ಭಗವಂತನಲ್ಲಿ ಪ್ರಾರ್ಥನೆ ಮಾಡೋಣ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ