AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್​ಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿಯಾಗಲಿರುವ ಡಿಕೆ ಶಿವಕುಮಾರ್

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ.

ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್​ಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿಯಾಗಲಿರುವ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: May 30, 2023 | 6:29 PM

Share

ಬೆಂಗಳೂರು: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್‌ (Jagadish Shettar) ಹಾಗೂ ಲಕ್ಷ್ಮಣ ಸವದಿಗೆ (Laxman Savadi) ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಲಕ್ಷ್ಮಣ ಸವದಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವ ಡಿಕೆ ಶಿವಕುಮಾರ್ ನಂತರ ಹುಬ್ಬಳ್ಳಿಗೆ ತೆರಳಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಅವರ ಜತೆ ಚರ್ಚಿಸಲಿದ್ದಾರೆ.

ಜಗದೀಶ್ ಶೆಟ್ಟರ್‌ ಅವರಿಗೆ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ಡಿಕೆ ಶಿವಕುಮಾರ್‌ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸವದಿಗೆ ಹುದ್ದೆ ನೀಡುವ ಸಾಧ್ಯತೆ ಇದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ್ದರು. ಮತ್ತೊಂದೆಡೆ, ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಶೆಟ್ಟರ್ ಅವರು ಪ್ರಮುಖ ಹುದ್ದೆ ನಿರೀಕ್ಷಿಸಿದ್ದರು.

ಇದನ್ನೂ ಓದಿ: ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಉತ್ತಮ ವ್ಯಕ್ತಿ, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ; ಡಿಕೆ ಶಿವಕುಮಾರ್

ಈ ಮಧ್ಯೆ, ಕಾಂಗ್ರೆಸ್ ನೂತನ ಸರ್ಕಾರದ ಸಚಿವ ಸಂಪುಟ ಭರ್ತಿಯಾಗಿದ್ದು, ಶನಿವಾರ ಎಲ್ಲ ಸಚಿವರ ಪ್ರಮಾಣವಚನ ಸ್ವೀಕಾರ ನೆರವೇರಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹೆಚ್ಚು ಖಾತೆಗಳಿದ್ದರೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಖಾತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್