AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಧಾರವಾಡದಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್​ ಶೋ, ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ

ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾದರು. ಗೋಡೆ ಬರಹ ಮೂಲಕ ಅಭಿಯಾನದಲ್ಲಿ ಭಾಗಿಯಾದ ಅಮಿತ್ ಶಾ, ಭರ್ಜರಿ ರೋಡ್ ಶೋ ಕೂಡ ನಡೆಸಿದ್ದಾರೆ.

Amit Shah: ಧಾರವಾಡದಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್​ ಶೋ, ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ
ಜನ ಸಂಕಲ್ಪ ಯಾತ್ರೆಗೆ ಅಮಿತ್ ಶಾ ಚಾಲನೆ (ಎಡ ಚಿತ್ರ) ಮತ್ತು ಅಮಿತ್ ಶಾ ರೋಡ್ ಶೋ (ಬಲ ಚಿತ್ರ)
TV9 Web
| Edited By: Rakesh Nayak Manchi|

Updated on:Jan 28, 2023 | 6:59 PM

Share

ಧಾರವಾಡ: ಜೆಡಿಎಸ್ ಹಾಗೂ ಕಾಂಗ್ರೆಸ್ ಕರ್ನಾಟಕವನ್ನು ಲೂಟಿ ಮಾಡಿದ್ದು, ಸಿದ್ದರಾಮಯ್ಯ (Siddaramaiah) ಅವರು ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್​ ಹೈಕಮಾಂಡ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಆರೋಪಿಸಿದ್ದಾರೆ. ಧಾರವಾಡದಲ್ಲಿ ಭರ್ಜರಿ ರೋಡ್​ ಶೋ ನಡೆಸಿ ಮಾತನಾಡಿದ ಅಮಿತ್ ಶಾ (Amit Shah Road Show In Dharwad), ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ದೇಶದಲ್ಲಿ ಭಯೋತ್ಪಾದನೆ ಮಟ್ಟಹಾಕಿದೆ. ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ರಾಜ್ಯದಲ್ಲಿ ಬಹುಮತದಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಗುರಿ ಹೊಂದಬೇಕಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ರಾಜ್ಯದ ಜನರಿಗೆ ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದರು.

ಜಿಲ್ಲೆಯ ಕುಂದಗೋಳದಲ್ಲಿ ಕಾರ್ಯಕರ್ತ ಬಸವರಾಜ್ ಹಂಚಿನಮನಿ ಅವರ ಮನೆ ಗೋಡೆ ಮೇಲೆ ಕಮಲ ಚಿತ್ರ ಬಿಡಿಸುವ ಮೂಲಕ ಅಮಿತ್ ಶಾ ಅವರು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು. ತಮ್ಮ ಮನೆಗೆ ಆಗಮಿಸಿದ ಅಮಿತ್ ಶಾ ಅವರಿಗೆ ಬಸವರಾಜ್ ಹಂಚಿನಮನಿ ಕುಟುಂಬಸ್ಥರು ಆರತಿ ಬೆಳಗಿದರು. ಈ ವೇಳೆ ಅಮಿತ್ ಶಾ ಮನೆಯ ಪುಟ್ಟ ಬಾಲಕಿಗೆ ಹಾರ ಹಾಕಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸಾಥ್​​ ನೀಡಿದರು.

ಕುಂದಗೋಳದಿಂದ ಬೆಳಗಾವಿಯತ್ತ ಹೊರಟ ಶಾ, ಒಂದೇ ಹೆಲಿಕಾಪ್ಟರ್​ನಲ್ಲಿ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಪ್ರಯಾಣ ಮಾಡಿದರು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕಾರ್​ನಲ್ಲಿ ತೆರಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Sat, 28 January 23

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು