AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರನ್ನು ಹೊಗಳಿದ ಯಡಿಯೂರಪ್ಪ, ಅಮಿತ್ ಶಾ ಟೀಕೆಗೆ ಉತ್ತರ ಎಂದ ಕುಮಾರಸ್ವಾಮಿ

ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ವಿಧಾನಸಭೆಯಲ್ಲಿಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೊಗಳಿಕೆಯ ಮಾತುಗಳನ್ನಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಇದು ಅಮಿತ್ ಶಾ ಅವರು ಜೆಡಿಎಸ್ ಪಕ್ಷವನ್ನು ಟೀಕಿಸಿದ್ದಕ್ಕೆ ಉತ್ತರ ಎಂದರು.

ದೇವೇಗೌಡರನ್ನು ಹೊಗಳಿದ ಯಡಿಯೂರಪ್ಪ, ಅಮಿತ್ ಶಾ ಟೀಕೆಗೆ ಉತ್ತರ ಎಂದ ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್.ಯಡಿಯೂರಪ್ಪ
Rakesh Nayak Manchi
|

Updated on:Feb 24, 2023 | 5:18 PM

Share

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ಅವರು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ (H.D.Deve Gowda) ಅವರನ್ನು ಹೊಗಳಿರುವುದು ಜೆಡಿಸ್ ಪಕ್ಷವನ್ನು ಟೀಕಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಉತ್ತರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಅಧಿವೇಶನದಲ್ಲಿ ತಮ್ಮ ವಿದಾಯ ಭಾಷಣವನ್ನು ಯಡಿಯೂರಪ್ಪ ಅವರು ಮಾಡಿದ್ದಾರೆ. ಅವರ ಈ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಇದು ಯಡಿಯೂರಪ್ಪ ಅವರ ದೊಡ್ಡತನವೂ ಹೌದು. ದೇವೇಗೌಡರ ವ್ಯಕ್ತಿತ್ವ ಹಾಗೇ ಇದೆ. ಅವರು ರಾಜಕೀಯ ಅನುಭವ ರಾಜ್ಯದ ಸಮಸ್ಯೆಗಳಿಗೆ ಸ್ಷಂಧಿಸಿದ್ದಾರೆ ಎಂದು ಹೇಳುವ ಮೂಲಕ ತಂದೆಯ ಕಾರ್ಯ ವೈಖರಿಯನ್ನು ಕೊಂಡಾಡಿದರು.

ಹಾಸನ ಕ್ಷೇತ್ರದ​ ಟಿಕೆಟ್​ಗಾಗಿ ಜೆಡಿಎಸ್ ಪಕ್ಷದೊಳಗೆ ನಡೆಯುತ್ತಿರುವ ಮುಸುಕಿನ ಗುದ್ದಾಟದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕುಟುಂಬ ಸದಸ್ಯರ ಸ್ಪರ್ಧೆ ಬಗ್ಗೆ ಈಗಾಗಲೇ ನಾನು ಹೇಳಿದ್ದೇನೆ. ನಾನು 120 ಸೀಟ್ ಗುರಿ ಇಟ್ಟುಕೊಂಡು ಯಾತ್ರೆ ಆರಂಭಿಸಿದ್ದೇನೆ. ನಾನೇ ಮುಖ್ಯಮಂತ್ರಿ ಆಗಬೇಕೆಂದು ಕರ್ನಾಟಕದ ಜನರ ಕೂಗು ಇದೆ. ಹೀಗಾಗಿ ಯಾರಿಗೆ ಟಿಕೆಟ್ ಕೊಡಬೇಕೆಂದು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆಯೂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇನ್ನೊಂದು ವಾರದಲ್ಲಿ ಜೆಡಿಎಸ್​ 2ನೇ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಯಡಿಯೂರಪ್ಪ ನಿರ್ಧಾರ ಸ್ವಾಗತಿಸಿದ ಮಾಜಿ ಸಿಎಂ ಎಸ್​.ಎಂ.ಕೃಷ್ಣ

ತಮ್ಮ ಸಾರ್ಥಕ ರಾಜಕೀಯ ಬದುಕಿನಲ್ಲಿ ಕೊನೆಯಬಾರಿಗೆ ಅಧಿವೇಶನದಲ್ಲಿ ಮಾತಾಡಿದ ಹಿರಿಯ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡರ ಬಗ್ಗೆ ತಮಗಿರುವ ಗೌರವಾದರಗಳನ್ನು ವ್ಯಕ್ತಪಡಿಸಿದರು. ಮಾಜಿ ಪ್ರಧಾನಿಗಳು ತಮ್ಮ ಈ ಇಳಿವಯಸ್ಸಿನಲ್ಲೂ ರಾಜಕೀಯವಾಗಿ ಸಕ್ರಿಯರಾಗಿ ರಾಜ್ಯದ ಹಲವಾರು ಸಮಸ್ಯೆಗಳಿಗೆ ಸಲಹೆಗಳನ್ನು ನೀಡುತ್ತಿರುತ್ತಾರೆ, ಅವರಿಂದ ನಾವು ಸಾಕಷ್ಟು ಕಲಿಯಬೇಕಿದೆ ಎಂದು ಹೇಳಿದರು.

ಎರಡು ದಿನ ಶೃಂಗೇರಿ ಪ್ರವಾಸ ಇದೆ: ಹೆಚ್​ಡಿಕೆ

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡುವ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಅವರು, ಎರಡು ದಿನ ಶೃಂಗೇರಿ ಪ್ರವಾಸ ಇದೆ. ಮೂರು ಕ್ಷೇತ್ರಗಳಲ್ಲಿ ನಾನು ಪ್ರಚಾರ ಮಾಡುತ್ತೇನೆ. ಈ ನಡುವೆ ಶೃಂಗೇರಿಯ ದೇವಿಯ ಭಕ್ತ ಆಗಿದ್ದರಿಂದ ದರ್ಶನ ಪಡೆಯುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Fri, 24 February 23

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ