AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರನ್ನು ಹೊಗಳಿದ ಯಡಿಯೂರಪ್ಪ, ಅಮಿತ್ ಶಾ ಟೀಕೆಗೆ ಉತ್ತರ ಎಂದ ಕುಮಾರಸ್ವಾಮಿ

ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ವಿಧಾನಸಭೆಯಲ್ಲಿಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೊಗಳಿಕೆಯ ಮಾತುಗಳನ್ನಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಇದು ಅಮಿತ್ ಶಾ ಅವರು ಜೆಡಿಎಸ್ ಪಕ್ಷವನ್ನು ಟೀಕಿಸಿದ್ದಕ್ಕೆ ಉತ್ತರ ಎಂದರು.

ದೇವೇಗೌಡರನ್ನು ಹೊಗಳಿದ ಯಡಿಯೂರಪ್ಪ, ಅಮಿತ್ ಶಾ ಟೀಕೆಗೆ ಉತ್ತರ ಎಂದ ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್.ಯಡಿಯೂರಪ್ಪ
Rakesh Nayak Manchi
|

Updated on:Feb 24, 2023 | 5:18 PM

Share

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ಅವರು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ (H.D.Deve Gowda) ಅವರನ್ನು ಹೊಗಳಿರುವುದು ಜೆಡಿಸ್ ಪಕ್ಷವನ್ನು ಟೀಕಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಉತ್ತರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಅಧಿವೇಶನದಲ್ಲಿ ತಮ್ಮ ವಿದಾಯ ಭಾಷಣವನ್ನು ಯಡಿಯೂರಪ್ಪ ಅವರು ಮಾಡಿದ್ದಾರೆ. ಅವರ ಈ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಇದು ಯಡಿಯೂರಪ್ಪ ಅವರ ದೊಡ್ಡತನವೂ ಹೌದು. ದೇವೇಗೌಡರ ವ್ಯಕ್ತಿತ್ವ ಹಾಗೇ ಇದೆ. ಅವರು ರಾಜಕೀಯ ಅನುಭವ ರಾಜ್ಯದ ಸಮಸ್ಯೆಗಳಿಗೆ ಸ್ಷಂಧಿಸಿದ್ದಾರೆ ಎಂದು ಹೇಳುವ ಮೂಲಕ ತಂದೆಯ ಕಾರ್ಯ ವೈಖರಿಯನ್ನು ಕೊಂಡಾಡಿದರು.

ಹಾಸನ ಕ್ಷೇತ್ರದ​ ಟಿಕೆಟ್​ಗಾಗಿ ಜೆಡಿಎಸ್ ಪಕ್ಷದೊಳಗೆ ನಡೆಯುತ್ತಿರುವ ಮುಸುಕಿನ ಗುದ್ದಾಟದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕುಟುಂಬ ಸದಸ್ಯರ ಸ್ಪರ್ಧೆ ಬಗ್ಗೆ ಈಗಾಗಲೇ ನಾನು ಹೇಳಿದ್ದೇನೆ. ನಾನು 120 ಸೀಟ್ ಗುರಿ ಇಟ್ಟುಕೊಂಡು ಯಾತ್ರೆ ಆರಂಭಿಸಿದ್ದೇನೆ. ನಾನೇ ಮುಖ್ಯಮಂತ್ರಿ ಆಗಬೇಕೆಂದು ಕರ್ನಾಟಕದ ಜನರ ಕೂಗು ಇದೆ. ಹೀಗಾಗಿ ಯಾರಿಗೆ ಟಿಕೆಟ್ ಕೊಡಬೇಕೆಂದು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆಯೂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇನ್ನೊಂದು ವಾರದಲ್ಲಿ ಜೆಡಿಎಸ್​ 2ನೇ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಯಡಿಯೂರಪ್ಪ ನಿರ್ಧಾರ ಸ್ವಾಗತಿಸಿದ ಮಾಜಿ ಸಿಎಂ ಎಸ್​.ಎಂ.ಕೃಷ್ಣ

ತಮ್ಮ ಸಾರ್ಥಕ ರಾಜಕೀಯ ಬದುಕಿನಲ್ಲಿ ಕೊನೆಯಬಾರಿಗೆ ಅಧಿವೇಶನದಲ್ಲಿ ಮಾತಾಡಿದ ಹಿರಿಯ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡರ ಬಗ್ಗೆ ತಮಗಿರುವ ಗೌರವಾದರಗಳನ್ನು ವ್ಯಕ್ತಪಡಿಸಿದರು. ಮಾಜಿ ಪ್ರಧಾನಿಗಳು ತಮ್ಮ ಈ ಇಳಿವಯಸ್ಸಿನಲ್ಲೂ ರಾಜಕೀಯವಾಗಿ ಸಕ್ರಿಯರಾಗಿ ರಾಜ್ಯದ ಹಲವಾರು ಸಮಸ್ಯೆಗಳಿಗೆ ಸಲಹೆಗಳನ್ನು ನೀಡುತ್ತಿರುತ್ತಾರೆ, ಅವರಿಂದ ನಾವು ಸಾಕಷ್ಟು ಕಲಿಯಬೇಕಿದೆ ಎಂದು ಹೇಳಿದರು.

ಎರಡು ದಿನ ಶೃಂಗೇರಿ ಪ್ರವಾಸ ಇದೆ: ಹೆಚ್​ಡಿಕೆ

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡುವ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಅವರು, ಎರಡು ದಿನ ಶೃಂಗೇರಿ ಪ್ರವಾಸ ಇದೆ. ಮೂರು ಕ್ಷೇತ್ರಗಳಲ್ಲಿ ನಾನು ಪ್ರಚಾರ ಮಾಡುತ್ತೇನೆ. ಈ ನಡುವೆ ಶೃಂಗೇರಿಯ ದೇವಿಯ ಭಕ್ತ ಆಗಿದ್ದರಿಂದ ದರ್ಶನ ಪಡೆಯುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Fri, 24 February 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ