Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮುಂದಿನ ನಡೆ ಕ್ಷೇತ್ರದ ಮತದಾರರು ತೀರ್ಮಾನಿಸುತ್ತಾರೆ: ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ

ನಾನು ಯಾವುದೇ ಗೊಂದಲದಲ್ಲಿ ಇಲ್ಲ, ಫೆ.12ರಂದು ಅರಸೀಕೆರೆಯಲ್ಲಿ ಸಮಾವೇಶ ನಡೆಯಲಿದೆ. ಇಲ್ಲಿ ಏನು ತೀರ್ಮಾನ ಆಗುತ್ತೋ ಅದರ ಮೇಲೆ ನಾನು ನಿರ್ಧಾರ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

ನನ್ನ ಮುಂದಿನ ನಡೆ ಕ್ಷೇತ್ರದ ಮತದಾರರು ತೀರ್ಮಾನಿಸುತ್ತಾರೆ: ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ (ಎಡ ಚಿತ್ರ)
Follow us
TV9 Web
| Updated By: Rakesh Nayak Manchi

Updated on:Feb 10, 2023 | 3:16 PM

ಬೆಂಗಳೂರು: ಯಾವ ಪಕ್ಷಕ್ಕೆ ಸೇರಬೇಕು ಅಥವಾ ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕೇ ಎಂಬುದು ಫೆ.12ರಂದು ನಡೆಯುವ ಸಮಾವೇಶದ ನಂತರ ನಿರ್ಧಾರ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ (K.M.Shivalingegowda) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಗೊಂದಲದಲ್ಲಿ ಇಲ್ಲ. ಫೆ.12ರಂದು ಅರಸೀಕೆರೆಯಲ್ಲಿ ಸಮಾವೇಶ ನಡೆಯಲಿದೆ. ಇಲ್ಲಿ ಏನು ತೀರ್ಮಾನ ಆಗುತ್ತದೆಯೋ ಅದರ ಆಧಾರದ ಮೇಲೆ ನಾನು ನಿರ್ಧಾರ ಮಾಡುತ್ತದೆ. ಕಾಂಗ್ರೆಸ್​ಗೆ ಹೋಗಿ ಅಂತಾ ನನ್ನ ಕ್ಷೇತ್ರದ ಜನರು ಹೇಳುತ್ತಿದ್ದಾರೆ. ಕ್ಷೇತ್ರದ ಜನರು ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹೇಳಿದರೆ ಅದಕ್ಕೂ ಸಿದ್ಧ ಎಂದರು.

ನನ್ನ ವಿರುದ್ಧ ಅಭ್ಯರ್ಥಿ ಕರೆತಂದು ಸಮಾವೇಶ ಮಾಡಿದರೆ ನಾನ್ಯಾಕೆ ಹೋಗಲಿ ಎಂದು ಪ್ರಶ್ನಿಸಿದ ಶಿವಲಿಂಗೇಗೌಡ, ಬೇರೆ ಪಕ್ಷ ಸೇರುವ ಬಗ್ಗೆ ಯಾರ ಜೊತೆಗೂ ನಾನು ಚರ್ಚೆ ಮಾಡಿಲ್ಲ. ನನಗೆ ಯಾಕೆ ಅಸಮಾಧಾನ ಇದೆ ಅಂತಾ ಕ್ಷೇತ್ರದ ಜನರಿಗೆ ಗೊತ್ತು. ನಾನು ಬಿಜೆಪಿಗೆ ಸೇರಲ್ಲ, ನಾನು ಇನ್ನೂ ಜೆಡಿಎಸ್​ನಲ್ಲೇ ಇದ್ದೇನೆ. ನನ್ನ ವಿರುದ್ಧ ಕ್ಯಾಂಡಿಡೇಟ್ ಮಾಡಿದರೆ ಹೋಗೋಕೆ ಆಗುತ್ತಾ? ನಾನೊಬ್ಬ ಶಾಸಕ, ನನ್ನ ನಾಯಕತ್ವದಲ್ಲಿ ಸಮಾವೇಶ ಆಗಬೇಕು. ನಾನು ಫೆಬ್ರವರಿ 12ರವರೆಗೆ ನೋಡುತ್ತೇನೆ, ಅವರ ಸಮಾವೇಶ ನೋಡುತ್ತೇನೆ, ನಂತರ ಸಮಾವೇಶ ಮಾಡಿ ನಿರ್ಧರಿಸುತ್ತೇನೆ. ಈ ಅಧಿವೇಶನದೊಳಗೆ ನಾನು ನಿರ್ಧರಿಸುತ್ತೇನೆ ಎಂದರು.

ಇದನ್ನೂ ಓದಿ: ಹಾಸನ ಜೆಡಿಎಸ್​ ಟಿಕೆಟ್​ ಫೈಟ್ ಮಧ್ಯೆ ಹೊಸ ಬಾಂಬ್ ಸಿಡಿಸಿದ ಹೆಚ್​.ಡಿ.ರೇವಣ್ಣ

ಯಾವುದೋ ಒಂದು ಘಟನೆ ನಡೆಯಿತು. ಆಗಿನಿಂದ ನಾನು ಸೈಲೆಂಟಾಗಿದ್ದೇನೆ. ಇದು ನಮ್ಮ ವರಿಷ್ಠರಿಗೂ ಗೊತ್ತಿದೆ. ನನ್ನನ್ನ ಬಿಟ್ಟು ಸಮಾವೇಶ ಮಾಡುತ್ತಿದ್ದಾರೆ. ಇವರು ಸಮಾವೇಶವನ್ನ ಮಾಡಲಿ. ಆದರೆ ನಾನು ಮತದಾರರ ನಿರ್ಧಾರದ ಮೇಲೆ ಇದ್ದೇನೆ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಲ್ಲ, ನಾನು ಕ್ಷೇತ್ರದ ಮತದಾರರ ನಿರ್ಧಾರಕ್ಕೆ ಬದ್ಧನಾದವನು. ನಾನು ಜನರನ್ನ ಕೇಳುವ ಪ್ರಯತ್ನ ನಡೆಸಿದ್ದೆ, ಅಷ್ಟರೊಳಗೆ ಇವರು ಸಮಾವೇಶ ಮಾಡುತ್ತಿದ್ದಾರೆ ಎಂದರು.

ಒಬ್ಬ ವ್ಯಕ್ತಿ ನನಗೆ ಟಿಕೆಟ್ ಅಂತ ಹೇಳುತ್ತಾ ಓಡಾಡುತ್ತಿದ್ದಾರೆ. ಇದನ್ನ ನೋಡಿದರೆ ನಾಮಕಾವಸ್ತೆಗೆ ಕರೆಯುತ್ತಿದ್ದಾರೆ ಅನ್ನಿಸುತ್ತದೆ. ಮಾತಿಗೆ ಮಾತ್ರ ಜೆಡಿಎಸ್​​ನಲ್ಲೇ ಉಳಿಯಿರಿ ಅಂತಾರೆ, ಕೊನೆ ಗಳಿಗೆಯಲ್ಲಿ ಏನಾದರು ಯಡವಟ್ಟಾದರೆ ಹೇಗೆ? ಎಂದರು. ಇನ್ನು ತಮ್ಮ ಆಡಿಯೋ ವೈರಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಆಡು ಭಾಷೆಯಲ್ಲಿ ಮಾತಾಡುತ್ತೇನೆ, ರೆಕಾರ್ಡ್ ಮಾಡಿ ವೈರಲ್​ ಮಾಡುತ್ತಾರೆ. ಒಂದು ವರ್ಷದ ಹಿಂದೆ ಮಾತನಾಡಿದ್ದನ್ನು ಈಗ ಬಿಡುಗಡೆ ಮಾಡುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Fri, 10 February 23

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್