40 ಕಿಲೋ ಮೀಟರ್ ಪ್ರಯಾಣಕ್ಕೆ 2 ಗಂಟೆ, ಲೋಕೋಪಯೋಗಿ ಸಚಿವರ ತವರಿನಲ್ಲೇ ರಸ್ತೆ ಸರಿಯಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್​ ಕ್ಷೇತ್ರದಲ್ಲೇ ರಸ್ತೆ ಸರಿಯಿಲ್ಲ. 40 ಕಿಲೋ ಮೀಟರ್​ ದೂರ ಪ್ರಯಾಣಿಸಲು 2 ಗಂಟೆ ಬೇಕಾಯಿತು. ಇನ್ನು ರಾಜ್ಯದ ರಸ್ತೆಗಳು ಯಾವ ರೀತಿ ಇರಬಹುದು ನೀವೇ ಊಹಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

40 ಕಿಲೋ ಮೀಟರ್ ಪ್ರಯಾಣಕ್ಕೆ 2 ಗಂಟೆ, ಲೋಕೋಪಯೋಗಿ ಸಚಿವರ ತವರಿನಲ್ಲೇ ರಸ್ತೆ ಸರಿಯಿಲ್ಲ: ಸಿದ್ದರಾಮಯ್ಯ ವಾಗ್ದಾಳಿ
ಸಿದ್ದರಾಮಯ್ಯ
Rakesh Nayak Manchi

Updated on: Feb 28, 2023 | 9:56 PM

ಗದಗ: ರಸ್ತೆ ಸರಿಯಿಲ್ಲದ ಹಿನ್ನಲೆ ಹೀಗಾಗಿ ನಾವು ತಡವಾಗಿ ಬಂದಿದ್ದೇವೆ ಕ್ಷಮಿಸಬೇಕು. ಲೋಕೋಪಯೋಗಿ ಸಚಿವರ​ ಕ್ಷೇತ್ರದಲ್ಲೇ ರಸ್ತೆ ಸರಿಯಿಲ್ಲ. 40 ಕಿಲೋ ಮೀಟರ್​ ದೂರ ಪ್ರಯಾಣಿಸಲು 2 ಗಂಟೆ ಬೇಕಾಯಿತು. ಇನ್ನು ರಾಜ್ಯದ ರಸ್ತೆಗಳು ಯಾವ ರೀತಿ ಇರಬಹುದು ನೀವೇ ಊಹಿಸಿ ಎಂದು ಹೇಳುವ ಮೂಲಕ ಸಿ.ಸಿ.ಪಾಟೀಲ್ (CC Patil) ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಪಾಟೀಲ್ ಕ್ಷೇತ್ರವಾಗಿರುವ ನರಗುಂದದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ (Praja Dhwani Yatra) ಮಾತನಾಡಿದ ಅವರು, ನಿಮ್ಮ ಕ್ಷೇತ್ರದ ರಸ್ತೆ ಸರಿಮಾಡಿಕೊಳ್ಳಿ ಎಂದು ಸಿ.ಸಿ.ಪಾಟೀಲ್​ಗೆ ಹೇಳಿದ್ದೆ. ಆದರೆ ಸಚಿವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚುನಾವಣೆ ಬಂದಿರುವುದರಿಂದ ಈಗ ರಸ್ತೆ ಕಾಮಗಾರಿ ಆರಂಭ ಮಾಡಿದ್ದಾರೆ. ಸಿ.ಸಿ.ಪಾಟೀಲ್​ ತಮ್ಮ ಕಾರ್ಯಕರ್ತರಿಗೆ ಕಾಮಗಾರಿ ಗುತ್ತಿಗೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು, ಎಂದಿನಂತೆ 40% ಕಮಿಷನ್ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಕಳೆದ ಚುನಾವಣೆ ವೇಳೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರವೆಂದು ಆರೋಪಿಸಿದ್ದರು. ಆದರೆ, ಈಗ ರಾಜ್ಯದಲ್ಲಿರುವುದು 40 ಪರ್ಸೆಂಟ್ ಕಮಿಷನ್ ಸರ್ಕಾರ. ರಾಜ್ಯದಲ್ಲಿರುವುದು ಆಲಿಬಾಬಾ ಮತ್ತು 40 ಕಳ್ಳರ ಸರ್ಕಾರ. ಅದರಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್​ ಕೂಡ ಒಬ್ಬರು ಎಂದರು.

ರೈತರಿಗೆ 8 ಗಂಟೆ ತ್ರೀಫೇಸ್​ ವಿದ್ಯುತ್

2018ರ ಚುನಾವಣೆ ವೇಳೆ ಅಪಪ್ರಚಾರ ಮಾಡಿ ನಮ್ಮನ್ನ ಸೋಲಿಸಿದ್ದರು. ಆದರೆ ಈ ಬಾರಿ ಈ ಬಾರಿ ಅಪಪ್ರಚಾರಕ್ಕೆ ಒಳಗಾಗಬೇಡಿ. ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ 8 ಗಂಟೆ ತ್ರೀಫೇಸ್​ ವಿದ್ಯುತ್​ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಇದನ್ನೂ ಓದಿ: Gadag: ಹಣೆಗೆ ಇಟ್ಟಿದ್ದ ತಿಲಕ ಅಳಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ರೋಣ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​​ ಜಿ.ಎಸ್.ಪಾಟೀಲ್​ಗೆ ಫಿಕ್ಸ್​

ರೋಣ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​​ ಜಿ.ಎಸ್.ಪಾಟೀಲ್​ಗೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜಿ.ಎಸ್.ಪಾಟೀಲ್​ ಗೆಲ್ಲಿಸಿದರೆ ನನ್ನನ್ನು ಗೆಲ್ಲಿಸಿದಂತೆ. 50,000 ಮತಗಳ ಅಂತರದಲ್ಲಿ ಜಿ.ಎಸ್.ಪಾಟೀಲ್ ಗೆಲ್ಲಿಸುವಂತೆ ಮನವಿ ಮಾಡಿದರು. ಅಲ್ಲದೆ, ಕ್ಷೇತ್ರದಲ್ಲಿ ಕುರುಬ ಸಮುದಾಯದ ವೋಟ್ ಒಡೆಯಲು ಯತ್ನ ಆಗುತ್ತಿದೆ. ಅದಕ್ಕೆ ಅವಕಾಶ ನೀಡದೆ ಜಿ.ಎಸ್.ಪಾಟೀಲ್ ಅವರನ್ನು ಗೆಲ್ಲಿಸಬೇಕು. ಯಾರೋ ದೊಡ್ಡಯ್ಯ ಪಡ್ಡಯ್ಯಗೆ ಮತ ಹಾಕಬೇಡಿ. ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳನ್ನ ಗೆಲ್ಲಿಸಿಕೊಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Tue, 28 February 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us